ಮೇ 1ರಿಂದ ಪೆಟ್ರೋಲ್, ಡಿಸೇಲ್ ಗೆ ಪ್ರತಿದಿನ ಹೊಸ ದರ ಪಾವತಿಸಬೇಕು!
Team Udayavani, Apr 12, 2017, 3:19 PM IST
ನವದೆಹಲಿ: ಈ ಹಿಂದೆ ವರದಿಯಾಗಿರುವಂತೆ ಮೇ 1ರಿಂದ ಪೆಟ್ರೋಲ್ ಮತ್ತು ಡಿಸೇಲ್ ದರ ಪ್ರತಿದಿನವೂ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಗೆ ಅನುಗುಣವಾಗಿ ಬೆಲೆ ಪರಿಷ್ಕರಣೆ ಮಾಡಲಿದ್ದು, ಇದರಂತೆ ಗ್ರಾಹಕರು ಹೊಸ ದರದಂತೆ ಖರೀದಿಸಬೇಕಾಗುತ್ತದೆ. ಇದು ದೇಶದ ಪ್ರಮುಖ ಐದು ನಗರಗಳಲ್ಲಿ ಮೊದಲಿಗೆ ಪ್ರಾಯೋಗಿಕವಾಗಿ ಜಾರಿಯಾಗಲಿದೆ ಎಂದು ವರದಿ ತಿಳಿಸಿದೆ.
ರಾಜ್ಯ ಸ್ವಾಮಿತ್ವದ ಇಂಡಿಯನ್ ಆಯಿಲ್ ಕಾರ್ಪೊರೇಷನ್(ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಕಂಪನಿಗಳು ದೇಶಾದ್ಯಂತ ಸುಮಾರು 58 ಸಾವಿರ ಪೆಟ್ರೋಲ್ ಬಂಕ್ ಗಳನ್ನು ಹೊಂದಿವೆ.
ಈ ಕಂಪನಿಗಳು ಮೇ 1ರಿಂದಲೇ ದೇಶದ ಐದು ನಗರಗಳಲ್ಲಿ ಪ್ರತಿ ದಿನ ತೈಲ ಬೆಲೆ ಪರಿಷ್ಕರಿಸುವ ಕ್ರಮ ಜಾರಿ ಮಾಡಲಿದ್ದು, ಮುಂದಿನ ಹಂತದಲ್ಲಿ ದೇಶಾದ್ಯಂತ ಜಾರಿ ಮಾಡಲು ತೀರ್ಮಾನಿಸಿರುವುದಾಗಿ ವರದಿ ವಿವರಿಸಿದೆ.
ಪ್ರಮುಖ 5 ಮಹಾನಗರಗಳಲ್ಲಿ ಈ ಯೋಜನೆಯನ್ನು ಜಾರಿಗೆ ತಂದ ಬಳಿಕ, ದೇಶದ ಉಳಿದ ಭಾಗದಲ್ಲಿ ಜಾರಿಗೊಳಿಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿವೆ ಎಂದು ಬುಧವಾರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಇದರಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ದಿನವೂ ಪೈಸೆ ಲೆಕ್ಕಾಚಾರದಲ್ಲಿ ಏರುಪೇರು ಆಗಲಿದೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಹಾಗೂ ಕರೆನ್ಸಿ ದರದಲ್ಲಿ ಬದಲಾವಣೆ ಆದಂತೆ ಅದರ ನೇರ ಪರಿಣಾಮ ದೇಶದ ತೈಲ ಮಾರುಕಟ್ಟೆಯ ಮೇಲಾಗಲಿದೆ. ಅಲ್ಲಾಗುವ ನಷ್ಟವನ್ನು ತಪ್ಪಿಸಿಕೊಳ್ಳಲಿಕ್ಕಾಗಿ ತೈಲ ಕಂಪನಿಗಳು ಅದರ ಹೊರೆಯನ್ನು ಗ್ರಾಹಕನ ಮೇಲೆ ಹೊರಿಸಲು ಮುಂದಾಗಿವೆ.
2016, ಸೆಪ್ಟೆಂಬರ್ನಿಂದ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ ಆಗುತ್ತಲೇ ಇದ್ದು, 2017, ಮಾರ್ಚ್ 31ರಂದು ಪ್ರತಿ ಲೀಟರ್ ಪೆಟ್ರೋಲ್ ದರ 3.77 ರೂ. ಮತ್ತು ಡೀಸೆಲ್ ದರ 2.91 ರೂ. ಕಡಿಮೆ ಮಾಡಲಾಗಿತ್ತು.
5 ನಗರಗಳು ಯಾವುದು?
ಪಾಂಡಿಚೇರಿ
ಆಂಧ್ರಪ್ರದೇಶದ ವೈಝಾಗ್
ರಾಜಸ್ಥಾನದ ಉದಯ್ ಪುರ್
ಜಾರ್ಖಂಡ್ ನ ಜೇಮ್ಶೆಡ್ ಪುರ್
ಚಂಡೀಗಢ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್