ಅಲ್ಪ ಅವಧಿಯಲ್ಲಿ ಹಾಲ್ ಮಾರ್ಕಿಂಗ್ ಯಶಸ್ವಿ : ಬಿಐಎಸ್
Team Udayavani, Aug 23, 2021, 2:17 PM IST
ನವ ದೆಹಲಿ : ಅಲ್ಪ ಅವಧಿಯಲ್ಲಿಯೇ ಕೇಂದ್ರದ ಹಾಲ್ ಮಾರ್ಕಿಂಗ್ ಯೋಜನೆ ಯಶಸ್ವಿಯಾಗಿದೆ. ಈ ಯೋಜನೆಯಡಿಯಲ್ಲಿ ಈಗಾಗಲೇ . 90,000ಕ್ಕೂ ಹೆಚ್ಚು ಆಭರಣ ವ್ಯಾಪಾರಿಗಳು ನೋಂದಾವಣಿ ಮಾಡಿಕೊಂಡಿದ್ದು, ಅದಾಗಲೇ ಒಂದು ಕೋಟಿಗೂ ಹೆಚ್ಚು ಆಭರಣಗಳಿಗೆ ಹಾಲ್ಮಾರ್ಕ್ ಹಾಕಲಾಗಿದೆ ಎಂದು ಬಿಐಎಸ್ ಮಾಹಿತಿ ನೀಡಿದೆ.
ಭಾರತದಲ್ಲಿ ಹಾಲ್ ಮಾರ್ಕಿಂಗ್ ಪ್ರಗತಿಯ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಬಿಐಎಸ್ ಮಹಾನಿರ್ದೇಶಕ ಪ್ರತಿಕ್ರಿಯಿಸಿದ್ದು, ನೋಂದಾಯಿತ ಆಭರಣಕಾರರ ಸಂಖ್ಯೆ 91,603 ಕ್ಕೂ ಹೆಚ್ಚಾಗಿದೆ. 2021 ಜುಲೈ 1 ರಿಂದ ಆಗಸ್ಟ್ 20ರವರೆಗೆ 1ಕೋಟಿ 17 ಲಕ್ಷ ಆಭರಣಗಳನ್ನು ಸ್ವೀಕರಿಸಲಾಗಿದೆ. ಅವುಗಳಲ್ಲಿ 1 ಕೋಟಿಗೂ 2 ಲಕ್ಷ ಆಭರಣಗಳಿಗೆ ಹಾಲ್ಮಾರ್ಕ್ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಶೂಟಿಂಗ್ ವೇಳೆ ಗಾಯ : ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಆಸ್ಪತ್ರೆಗೆ ದಾಖಲು
.ಕಳೆದ ಜುಲೈ 1ರಿಂದ 15ರವರೆಗೆ 14.28 ಲಕ್ಷ ಆಭರಣಗಳಿಗೆ ಹಾಲ್ಮಾರ್ಕ್ ಹಾಕಲಾಗಿದೆ. ನಂತರ ಆಗಸ್ಟ್ 1 ರಿಂದ 15 ರ ಅವಧಿಯಲ್ಲಿ ಹಾಲ್ ಮಾರ್ಕ್ ಹಾಕಿದ ಾಭರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ.
ಆಭರಣದ ಉದ್ಯಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳು ಎಎಚ್ಸಿ ಹೊಂದಿರುವ 256 ಜಿಲ್ಲೆಗಳಲ್ಲಿ ಮಾತ್ರ ಹಾಲ್ಮಾರ್ಕ್ ಕಡ್ಡಾಯಗೊಳಿಸಲಾಗಿದೆ. ಇನ್ನು, ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲಾಗಿದೆ, ನೋಂದಣಿ ಶುಲ್ಕವನ್ನು ಮನ್ನಾ ಮಾಡಲಾಗಿದೆ.
ಇನ್ನು, ಹಾಲ್ ಮಾರ್ಕಿಂಗ್ ಗೆ 20, 23 ಮತ್ತು 24 ಕ್ಯಾರೆಟ್ ಚಿನ್ನದ ಆಭರಣಗಳನ್ನು ಅನುಮತಿಸಲಾಗಿದೆ. ಭಾರತೀಯ ಮಾನದಂಡವನ್ನು ತಿದ್ದುಪಡಿ ಮಾಡಲಾಗಿದ್ದು, ಒಂದೇ ರೀತಿಯ ಶುದ್ಧತೆಯ ಸಣ್ಣ ವಿಶ್ರಣಗಳಿಗೂ ಸಹ ಹಾಲ್ ಮಾರ್ಕಿಂಗ್ ಅನುಮತಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ವರ್ಷದ ಬಳಿಕ ಶಾಲೆಗೆ ಆಗಮಿಸಿದ ಮಕ್ಕಳಿಗೆ ಸಾಂಪ್ರದಾಯಿಕ ಸ್ವಾಗತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ