ನಾವಿಬ್ಬರೂ ಒಂದೇ ದೋಣಿಯ ಪಯಣಿಗರು: ಸಿದ್ದಾರ್ಥ ಪ್ರಕರಣಕ್ಕೆ ಮಲ್ಯ ಟ್ವೀಟ್ ನಲ್ಲಿ ಹೇಳಿದ್ದೇನು
Team Udayavani, Jul 31, 2019, 12:42 PM IST
ಲಂಡನ್: ಕಾಫಿ ಡೇ ಸಂಸ್ಥಾಪಕ ವಿಜಿ ಸಿದ್ದಾರ್ಥ ಸಾವಿನ ಸುದ್ದಿ ಹೊರಬೀಳುತ್ತಿದ್ದಂತೆಯೇ ಈ ಕುರಿತು ಟ್ವೀಟ್ ಮಾಡಿರುವ ಮದ್ಯದ ದೊರೆ ವಿಜಯ್ ಮಲ್ಯ, ಒಂದರ್ಥದಲ್ಲಿ ನಾನೂ ಕೂಡಾ ಪರೋಕ್ಷವಾಗಿ ವಿಜಿ ಸಿದ್ದಾರ್ಥ ಅವರ ಸಾಲಿಗೆ ಸೇರಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.
ಸಾವಿರಾರು ಕೋಟಿ ರೂಪಾಯಿ ಬ್ಯಾಂಕ್ ಸಾಲ ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಸಿದ್ದಾರ್ಥ ಸಾವಿನ ಹಿನ್ನೆಲೆಯಲ್ಲಿ ಇಂದು ಟ್ವೀಟ್ ಮಾಡಿ ಬ್ಯಾಂಕ್ ಹಾಗೂ ಸರಕಾರಿ ಸಂಸ್ಥೆಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಜಿ ಸಿದ್ದಾರ್ಥ ಉತ್ತಮ ವ್ಯಕ್ತಿಯಾಗಿದ್ದರು ಹಾಗೂ ಒಳ್ಳೆಯ ಉದ್ಯಮಿಯಾಗಿದ್ದರು. ಸಿದ್ದಾರ್ಥ ಕೆಫೆ ಕಾಫಿ ಡೇ ಸಿಬ್ಬಂದಿಗಳು, ಆಡಳಿತ ಮಂಡಳಿ ನಿರ್ದೇಶಕರಿಗೆ ಬರೆದ ಪತ್ರದಲ್ಲಿನ ಅಂಶಗಳನ್ನು ಓದಿದ ನನಗೆ ಆಘಾತವಾಗಿದೆ. ಐಟಿ ಸೇರಿದಂತೆ ಸರಕಾರಿ ಸಂಸ್ಥೆಗಳು, ಬ್ಯಾಂಕ್ ಗಳು ಯಾರನ್ನೂ ಬೇಕಾದರೂ ಹತಾಶೆಗೆ ತಳ್ಳುತ್ತದೆ. ಈಗ ನನ್ನ ಪರಿಸ್ಥಿತಿಯನ್ನೇ ನೋಡಿ ಸಾಲವನ್ನು ಪೂರ್ಣ ಮರುಪಾವತಿ ಮಾಡುತ್ತೇನೆ ಎಂದರೂ ಅವಕಾಶ ಕೊಡುತ್ತಿಲ್ಲ ಎಂದು ಟ್ವೀಟ್ ನಲ್ಲಿ ಅಲವತ್ತುಕೊಂಡಿದ್ದಾರೆ.
In Western Countries, Government and Banks help borrowers repay their debts. In my case they are obstructing every possible effort for me to repay my debt whilst competing for my assets. As far as the prima facie criminal case goes wait for the appeal granted.
— Vijay Mallya (@TheVijayMallya) July 30, 2019
ಮತ್ತೊಂದು ಟ್ವೀಟ್ ನಲ್ಲಿ, ವಿದೇಶಗಳಲ್ಲಿ ಸಾಲಗಾರರನಿಗೆ ಸಾಲ ಮರುಪಾವತಿಸಲು ಸರಕಾರ ಮತ್ತು ಬ್ಯಾಂಕ್ ಗಳು ನೆರವು ನೀಡುತ್ತವೆ. ಆದರೆ ನನ್ನ ಪ್ರಕರಣದಲ್ಲಿ ನಾನು ನನ್ನ ಆಸ್ತಿ ಮಾರಿ ಸಾಲ ಮರುಪಾವತಿಸುತ್ತೇನೆ ಎಂದು ಮನವಿ ಮಾಡಿದ್ರು ನನ್ನ ಎಲ್ಲಾ ಪ್ರಯತ್ನಗಳನ್ನು ಹತ್ತಿಕ್ಕುತ್ತಿದ್ದಾರೆ. ಮತ್ತು ನನ್ನ ಆಸ್ತಿಗಳಿಗಾಗಿ ಸ್ಪರ್ಧಿಸುತ್ತಿದ್ದಾರೆ. ಮೇಲ್ನೋಟದ ಕ್ರಿಮಿನಲ್ ಪ್ರಕರಣ ಇದೀಗ ಮೇಲ್ಮನವಿ ಸಲ್ಲಿಸುವ ಅವಕಾಶಕ್ಕಾಗಿ ಕಾಯುತ್ತಿರುವುದಾಗಿ ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ