ಗುಡ್ ನ್ಯೂಸ್ : ಎಲ್ ಐ ಸಿ ನೌಕರರ ವೇತನ ಹೆಚ್ಚಳಕ್ಕೆ ಕೇಂದ್ರ ಅನುಮೋದನೆ ..!
Team Udayavani, Apr 18, 2021, 10:35 AM IST
ನವ ದೆಹಲಿ : ದೇಶದ ಅತಿದೊಡ್ಡ ವಿಮಾ ಕಂಪನಿ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ (ಎಲ್ಐಸಿ) ಲಕ್ಷಾಂತರ ನೌಕರರ ವೇತನ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಎಲ್ಐಸಿ ನೌಕರರ ವೇತನ ಹೆಚ್ಚಳದ ಜೊತೆಗೆ ವಾರದಲ್ಲಿ ಐದು ದಿನ ಕೆಲಸಕ್ಕೆ ಅನುಮೋದನೆಯನ್ನು ಕೂಡ ನೀಡಲಾಗಿದೆ ಎಂಬ ವರದಿ ಕೂಡ ಆಗಿದೆ. ಈ ಮೂಲಕ ಎಲ್ ಐ ಸಿ ನೌಕರರಿಗೆ ಕೇಂದ್ರ ಸರ್ಕಾರ ದೊಡ್ಡ ಉಡುಗೊರೆಯನ್ನು ನೀಡಿದೆ.
ಓದಿ : ‘ರಿವೈಂಡ್’ ಚಿತ್ರ ವಿಮರ್ಶೆ: ಮಾಡರ್ನ್ ಟೆಕ್ನಿಕ್ನಲ್ಲಿ ಕನಸುಗಳ ಹುಡುಕಾಟ
ಎಲ್ ಐ ಸಿ ಆಡಳಿತ ಮಂಡಳಿ ಪ್ರಸ್ತಾಪಿಸಿದ ವೃತನ ಹೆಚ್ಚಳವನ್ನು ಪರಿಶೀಲಿಸಿದ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ವರದಿ ತಿಳಿಸಿದ. ಶೇಕಡಾ 16 ರಷ್ಟು ವೇತನ ಹೆಚ್ಚಳವನ್ನು ಎಲ್ ಐ ಸಿ ಆಡಳಿತ ಮಂಡಳಿ ಈ ಹಿಂದೆ ಪ್ರಸ್ತಾಪಿಸಿತ್ತು. ಈ ಕುರಿತು ಪರಿಶೀಲನೆ ನಡೆಸದಿ ಕೇಂದ್ರ ಸರ್ಕಾರ ಶೇಕಡಾ 15 ರಿಂದ 16ರಷ್ಟು ವೇತನ ಹೆಚ್ಚಳಕ್ಕೆ ಅನುಮೋದನೆ ನೀಡಿದೆ.
ಮಾತ್ರವಲ್ಲದೇ, ಐದು ದಿನಗಳ ವಾರ ನೀತಿಯನ್ನು ಅಂತಿಮಗೊಳಿಸಿದೆ ಎಂದು ತಿಳಿದುಬಂದಿದೆ. ಈ ಮೂಲಕ ಪ್ರತಿ ಶನಿವಾರ, ಭಾನುವಾರ ಎಲ್ ಐ ಸಿ ನೌಕರರಿಗೆ ರಜೆ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಸರ್ಕಾರವು ಎಲ್ ಐ ಸಿ ಯ ಐಪಿಒನಿಂದ ಸುಮಾರು 1 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಲು ಬಯಸಿದ್ದು, ಎಲ್ಐಸಿ ಐಪಿಒ ವಿತರಣೆಯ ಗಾತ್ರದ ಶೇಕಡಾ 10 ರಷ್ಟು ಎಲ್ಐಸಿ ಪಾಲಿಸಿದಾರರಿಗೆ ಮೀಸಲಿಡಲಾಗುತ್ತದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಖಚಿತಪಡಿಸಿದ್ದಾರೆ.
ಪಾಲಿಸಿದಾರರ ಹಿತರಕ್ಷಣೆಯ ಉದ್ದೇಶದಿಂದ ಕೇಂದ್ರ ಸರ್ಕಾರವೇ ಗರಿಷ್ಠ ಷೇರುಪಾಲು ಉಳಿಸಿಕೊಳ್ಳಲಿದ್ದು, ಆಡಳಿತಾತ್ಮಕ ನಿಯಂತ್ರಣವನ್ನೂ ತನ್ನ ಬಳಿಯೇ ಇಟ್ಟುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ಓದಿ : ಕ್ಯೂಟ್ ಜೋಡಿ ಬೈ ಟು ಲವ್: ಗಮನ ಸೆಳೆಯುತ್ತಿದೆ ಫಸ್ಟ್ ಲುಕ್ ಪೋಸ್ಟರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
Tesla; ಭಾರತದಲ್ಲಿ ಎಲಾನ್ ಮಸ್ಕ್ 25,000 ಕೋಟಿ ಹೂಡಿಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ