ಜಿಡಿಪಿ ಇನ್ನಷ್ಟು ಇಳಿಕೆ; ಆರ್ಥಿಕ ಹಿಂಜರಿತದ ಭೀತಿ?

ಸೆಪ್ಟೆಂಬರ್‌ ತ್ತೈಮಾಸಿಕದಲ್ಲಿ ಶೇ.4.5ರಷ್ಟಕ್ಕೆ ; ವಿತ್ತೀಯ ಕೊರತೆ ಶೇ.102.4ರಷ್ಟಕ್ಕೆ

Team Udayavani, Nov 29, 2019, 6:45 PM IST

Narendra-Modi-Thinking-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) ದರ ಸೆಪ್ಟೆಂಬರ್‌ ತ್ತೈಮಾಸಿಕದಲ್ಲಿ ಶೇ.4.5ರಷ್ಟಕ್ಕೆ ಇಳಿಕೆಯಾಗಿದೆ. ಈ ಮೊದಲು ಅರ್ಥಶಾಸ್ತ್ರ ಪರಿಣತರು ಜಿಡಿಪಿ ದರ ಶೇ.4.7ರಷ್ಟಿರಬಹುದು ಎಂದು ಹೇಳಿದ್ದರೂ ಅದಕ್ಕಿಂತಲೂ ಜಿಡಿಪಿ ಹಿಂದೆ ಸರಿದಿದೆ. ಇದರಿಂದ ಮಾರುಕಟ್ಟೆಯಲ್ಲಿ ಆರ್ಥಿಕ ಹಿಂಜರಿತದ ಭೀತಿ ಕಾಣಿಸಿದೆ.

ಆದರೆ ಇತ್ತೀಚೆಗೆ ಸರಕಾರದ ಕ್ರಮಗಳಿಂದಾಗಿ ಆರ್ಥಿಕತೆ ತುಸು ಮೇಲ್ಮುಖವಾಗಿದ್ದು, ಅದರ ಪರಿಣಾಮ ಮುಂದೆ ಕಾಣಬಹುದಷ್ಟೇ ಎಂದು ಆರ್ಥಿಕ ತಜ್ಞರು ಲೆಕ್ಕಚಾರ ಹಾಕಿದ್ದಾರೆ. ಕಳೆದ ತ್ತೈಮಾಸಿಕದಲ್ಲಿ ಜಿಡಿಪಿ ದರ ಶೇ.5ರಷ್ಟಿತ್ತು. ಇದರಿಂದ ಕಳೆದ ತ್ತೈಮಾಸಿಕಕ್ಕಿಂತಲೂ ಜಿಡಿಪಿ ದರ ಕಡಿಮೆಯಾದಂತಾಗಿದೆ.

ಜಿಡಿಪಿ ದರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರ್ಥಿಕ ಉತ್ತೇಜನಕ್ಕೆ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದರೂ ಅದು ತತ್‌ಕ್ಷಣಕ್ಕೆ ಪರಿಣಾಮ ಬೀರಲು ಸಾಧ್ಯವಾಗಿಲ್ಲ. ರಿಸರ್ವ್‌ ಬ್ಯಾಂಕ್‌ ಕೂಡ ರೆಪೋ ದರಗಳನ್ನು 25 ಮೂಲಾಂಶಗಳಷ್ಟು ಅಂದರೆ ಶೇ.4.90ರಷ್ಟಕ್ಕೆ ಇಳಿಕೆ ಮಾಡಿತ್ತು.

ಬುಧವಾರ ಸಂಸತ್ತಿನಲ್ಲಿ ನಡೆದ ಚರ್ಚೆಯ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಆರ್ಥಿಕತೆ ನಿಧಾನವಾಗಿದೆ ಆದರೆ ಯಾವುದೇ ಹಿಂಜರಿತ ಇಲ್ಲ ಎಂದಿದ್ದರು. ಅಲ್ಲದೇ ಸರಕಾರದ ಹಲವು ಕ್ರಮಗಳಿಂದಾಗಿ ಅಂತಹ ಪರಿಸ್ಥಿತಿಗೆ ಬರುವುದಿಲ್ಲ ಎಂಬರ್ಥದಲ್ಲಿ ಮಾತನಾಡಿದ್ದರು. ಗುರುವಾರ ಅವರು ಈ ವಿತ್ತೀಯ ವರ್ಷದಲ್ಲಿ ಹೆಚ್ಚುವರಿ 21 ಸಾವಿರ ಕೋಟಿ ರೂ. ವೆಚ್ಚಕ್ಕೆ ಸಂಸತ್ತಿನ ಅನುಮತಿ ಕೇಳಿದ್ದರು.

ವಿತ್ತೀಯ ಕೊರತೆ ಶೇ.102.4ರಷ್ಟಕ್ಕೆ
ಇನ್ನು ಎಪ್ರಿಲ್‌ನಿಂದ ಅಕ್ಟೋಬರ್‌ ಅವಧಿಯಲ್ಲಿ ವಿತ್ತೀಯ ಕೊರತೆ ಶೇ.102.4ರಷ್ಟಕ್ಕೆ ತಲುಪಿದೆ. ಈ ಮೂಲಕ ಇಡೀ ವಿತ್ತೀಯ ವರ್ಷದ ಗುರಿಯನ್ನು ಮೀರಿದೆ. ಈ ಅವಧಿಯಲ್ಲಿ ವಿತ್ತೀಯ ವರ್ಷದಲ್ಲಿ ವಿತ್ತೀಯ ಕೊರತೆ 6.48 ಲಕ್ಷ ಕೋಟಿ ರೂ. ಮಾತ್ರವೇ ಆಗಬೇಕಿತ್ತು. ಆದರೆ ಅದು ಶೇ.7.2 ಲಕ್ಷ ಕೋಟಿ ರೂ. ಆಗಿದೆ. ಬಜೆಟ್‌ನಲ್ಲಿ ಇದರ ಗುರಿ 7.03 ಲಕ್ಷ ಕೋಟಿ ರೂ. ಎಂದು ಹೇಳಲಾಗಿತ್ತು.

ಟಾಪ್ ನ್ಯೂಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.