GST ದಾಖಲೆ 1.87 ಲಕ್ಷ ಕೋಟಿ ರೂ. ಸಂಗ್ರಹ

ಕಳೆದ ಎಪ್ರಿಲ್‌ಗೆ ಹೋಲಿಸಿದರೆ ಈ ಎಪ್ರಿಲ್‌ನಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ ಶೇ.12 ಏರಿಕೆ

Team Udayavani, May 2, 2023, 8:10 AM IST

GST ದಾಖಲೆ 1.87 ಲಕ್ಷ ಕೋಟಿ ರೂ. ಸಂಗ್ರಹ

ಹೊಸದಿಲ್ಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಯಾದ ಬಳಿಕ ದಾಖಲೆ ಪ್ರಮಾಣದಲ್ಲಿ ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ತಿಂಗಳಲ್ಲೇ 1.87 ಲಕ್ಷ ಕೋಟಿ ರೂ. ಮೊತ್ತದ ತೆರಿಗೆ ಜಮೆಯಾಗಿದೆ. ವಾರ್ಷಿಕವಾಗಿ ಹೇಳುವುದಿದ್ದರೆ ಶೇ.12 ಏರಿಕೆಯಾಗಿದೆ ಎಂದು ಸೋಮವಾರ ಹೊಸದಿಲ್ಲಿಯಲ್ಲಿ ಕೇಂದ್ರ ವಿತ್ತ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. 2022ರ ಎಪ್ರಿಲ್‌ನಲ್ಲಿ 1.68 ಲಕ್ಷ ಕೋಟಿ ರೂ. ಸಂಗ್ರಹವಾದದ್ದು ಇದುವರೆಗಿನ ದಾಖಲೆಯಾಗಿದೆ.

ದಾಖಲೆ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದು, ದೇಶದ ಅರ್ಥ ವ್ಯವಸ್ಥೆಗೆ ಸಂತೋಷ ತರುವ ವಿಚಾರ ಎಂದು ಬಣ್ಣಿಸಿದ್ದಾರೆ. 2022ರ ಮಾರ್ಚ್‌ನಲ್ಲಿ 1,42,095 ಲಕ್ಷ ಕೋಟಿ ರೂ., ಪ್ರಸಕ್ತ ವರ್ಷದ ಮಾರ್ಚ್‌ನಲ್ಲಿ 1,60, 122 ಲಕ್ಷ ಕೋಟಿ ರೂ., 2022ರ ಫೆಬ್ರವರಿಯಲ್ಲಿ 1,33, 025 ಲಕ್ಷ ಕೋಟಿ ರೂ., ಪ್ರಸಕ್ತ ವರ್ಷದ ಫೆಬ್ರವರಿಯಲ್ಲಿ 1,49, 577 ಲಕ್ಷ ಕೋಟಿ ರೂ., 2022ರ ಜನವರಿಯಲ್ಲಿ 1,40, 986 ಲಕ್ಷ ಕೋಟಿ ರೂ., ಪ್ರಸಕ್ತ ವರ್ಷದ ಜನವರಿಯಲ್ಲಿ 1,57, 554 ಲಕ್ಷ ಕೋಟಿ ರೂ. ಸಂಗ್ರಹವಾಗಿತ್ತು. 2017 ಜು.1ರಂದು ಜಿಎಸ್‌ಟಿಯನ್ನು ದೇಶಾದ್ಯಂತ ಜಾರಿ ಮಾಡಲಾಗಿತ್ತು. ಕೈಗಾರಿಕೆ ಮತ್ತು ಉದ್ದಿಮೆ ವಲಯದ ಪ್ರಮುಖರು ಕೂಡ ಜಿಎಸ್‌ಟಿ ಸಾಧನೆಗೆ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಅರ್ಥ ವ್ಯವಸ್ಥೆ ಬಿರುಸಾಗಿ ಬೆಳವಣಿಗೆ ಹೊಂದುತ್ತಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಕೊಂಡಾಡಿದ್ದಾರೆ.

ರಾಜ್ಯದ ಕೊಡುಗೆ ಶೇ.23 ಏರಿಕೆ
ಕಳೆದ ತಿಂಗಳು ಒಟ್ಟು ಜಿಎಸ್‌ಟಿ ಸಂಗ್ರಹಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಕೊಡುಗೆ ಶೇ.23ಕ್ಕೆ ಏರಿಕೆಯಾಗಿದೆ. 2022ರ ಎಪ್ರಿಲ್‌ನಲ್ಲಿ 11,820 ಕೋಟಿ ರೂ. ಸಂಗ್ರಹವಾಗಿದ್ದರೆ, ಕಳೆದ ತಿಂಗಳು 14,593 ಕೋಟಿ ರೂ. ಸಂಗ್ರಹವಾಗಿದೆ. ಈ ಮೂಲಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಮಹಾರಾಷ್ಟ್ರ ಮೊದಲ ಸ್ಥಾನ ಪಡೆದುಕೊಂಡಿದೆ. ಆ ರಾಜ್ಯದಿಂದ 27,495 ಕೋಟಿ ರೂ. ಸಂಗ್ರಹವಾಗಿದೆ.

ದೇಶದ ಅರ್ಥ ವ್ಯವಸ್ಥೆಗೆ ಇದು ಅತ್ಯಂತ ಸಂತಸ ತರುವ ವಿಚಾರ. ಕಡಿಮೆ ಪ್ರಮಾಣದ ತೆರಿಗೆ ವ್ಯವಸ್ಥೆ ಇದ್ದರೂ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ ಎಂದರೆ ಜಿಎಸ್‌ಟಿ ವ್ಯವಸ್ಥೆ ಯಶಸ್ಸು ಪಡೆದಿರುವುದಕ್ಕೆ ಸಾಕ್ಷಿ.
-ನರೇಂದ್ರ ಮೋದಿ, ಪ್ರಧಾನ ಮಂತ್ರಿ

 

Ad

ಟಾಪ್ ನ್ಯೂಸ್

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

12-dotihala

ಸರಕಾರದ ಉಚಿತ ಬಸ್‌ ವ್ಯವಸ್ಥೆ ಇಲ್ಲದೆ ಹಣ ಪಾವತಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯರು

RCR–Hanuma

ಮೊಹರಂ ಆಚರಣೆ ವೇಳೆ ಕೆಂಡದ ಕುಣಿಗೆ ಬಿದ್ದಿದ್ದ ಗಾಯಾಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ-ತುಸು ಏರಿಕೆಯೊಂದಿಗೆ ವಹಿವಾಟು ಅಂತ್ಯ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ-ತುಸು ಏರಿಕೆಯೊಂದಿಗೆ ವಹಿವಾಟು ಅಂತ್ಯ

5-amazon

Amazon:ಅಮೆಜಾನ್‌ನಿಂದ ಭಾರತದಲ್ಲಿ ಫುಲ್‌ಫಿಲ್‌ಮೆಂಟ್ ಸೆಂಟರ್‌ಗಳ ಸಾರ್ವಜನಿಕ ಭೇಟಿಗೆ ಪ್ರವಾಸ

3-slice

ಸ್ಲೈಸ್‌ನಿಂದ ಭಾರತದ ಮೊದಲ ಯುಪಿಐ ಆಧಾರಿತ ಕ್ರೆಡಿಟ್ ಕಾರ್ಡ್ ಮತ್ತು ಬ್ಯಾಂಕ್ ಶಾಖೆ ಉದ್ಘಾಟನೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 300ಕ್ಕೂ ಅಧಿಕ ಅಂಕ ಜಿಗಿತ, ನಿಫ್ಟಿ ಏರಿಕೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 300ಕ್ಕೂ ಅಧಿಕ ಅಂಕ ಜಿಗಿತ, ನಿಫ್ಟಿ ಏರಿಕೆ

GST Rates: ಜಿಎಸ್‌ ಟಿಯಲ್ಲಿ ಭಾರೀ ಕಡಿತ-ದಿನಬಳಕೆ ವಸ್ತುಗಳು ಇನ್ನಷ್ಟು ಅಗ್ಗ: ವರದಿ

GST Rates: ಜಿಎಸ್‌ ಟಿಯಲ್ಲಿ ಭಾರೀ ಕಡಿತ-ದಿನಬಳಕೆ ವಸ್ತುಗಳು ಇನ್ನಷ್ಟು ಅಗ್ಗ?: ವರದಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

sullia

Kundapura: ಬೈಕ್‌ ಸವಾರ ಮೃತಪಟ್ಟ ಪ್ರಕರಣ; ಲಾರಿ ಚಾಲಕನಿಗೆ 1.6 ವರ್ಷ ಜೈಲು ಶಿಕ್ಷೆ

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.