ಮತ್ತಷ್ಟು ವಸ್ತುಗಳ ಜಿಎಸ್‌ಟಿ ಹೆಚ್ಚಳ? ಸಿಎಂ ಬೊಮ್ಮಾಯಿ ನೇತೃತ್ವದ ಸಮಿತಿಯ ಪರಾಮರ್ಶೆ

ಇನ್ನೂ ಹಲವು ವಸ್ತುಗಳ ತೆರಿಗೆ ವಿನಾಯಿತಿ ವಾಪಸ್‌?

Team Udayavani, Aug 17, 2022, 7:25 AM IST

ಮತ್ತಷ್ಟು ವಸ್ತುಗಳ ಜಿಎಸ್‌ಟಿ ಹೆಚ್ಚಳ? ಸಿಎಂ ಬೊಮ್ಮಾಯಿ ನೇತೃತ್ವದ ಸಮಿತಿಯ ಪರಾಮರ್ಶೆ

ನವದೆಹಲಿ:ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವರ ಸಮಿತಿ ಇನ್ನೂ ಹಲವು ವಸ್ತುಗಳಿಗೆ ನೀಡಲಾಗಿರುವ ಜಿಎಸ್‌ಟಿ ವಿನಾಯಿತಿ ವಾಪಸ್‌ ಪಡೆಯುವಂತೆ ಸಲಹೆ ನೀಡುವ ಹಾಗೂ ಮತ್ತಷ್ಟು ಉತ್ಪನ್ನಗಳ ಜಿಎಸ್‌ಟಿಯನ್ನು ಹೆಚ್ಚಳ ಮಾಡುವ ಸಾಧ್ಯತೆಗಳು ಇವೆ.

ಇನ್‌ವರ್ಟೆಡ್‌ ಡ್ನೂಟಿ(ಕಚ್ಚಾ ವಸ್ತುಗಳ ತೆರಿಗೆಯು ಸಿದ್ಧವಸ್ತುಗಳ ತೆರಿಗೆಗಿಂತ ಹೆಚ್ಚಳವಾಗಿರುವುದು) ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲವು ಉತ್ಪನ್ನಗಳ ಜಿಎಸ್‌ಟಿ ಹೆಚ್ಚಳ ಮತ್ತು ಇನ್ನು ಕೆಲವು ಸರಕುಗಳ ವಿನಾಯ್ತಿ ರದ್ದು ಮಾಡುವ ಬಗ್ಗೆ ಸಚಿವರ ಸಮಿತಿ ಚರ್ಚಿಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ “ದ ಇಕನಾಮಿಕ್‌ ಟೈಮ್ಸ್‌’ ವರದಿ ಮಾಡಿದೆ.

ಪರಿಷ್ಕರಣೆಯಾಗಲಿರುವ ಎರಡನೇ ಹಂತದ ವಸ್ತುಗಳ ಪಟ್ಟಿಯನ್ನು ಸಮಿತಿ ಸಿದ್ಧಪಡಿಸುತ್ತಿದೆ. ಮುಂದಿನ ತಿಂಗಳು ನಡೆಯಲಿರುವ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಅದನ್ನು ಚರ್ಚಿಸಲಾಗುತ್ತದೆ. ಅದಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಡೆದಿದ್ದ 2 ಸಭೆಗಳು ಫ‌ಲಪ್ರದವಾಗಿದ್ದವು ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ವಿದ್ಯುತ್‌ ವಾಹನಗಳ ಕ್ಷೇತ್ರ ಸೇರಿದಂತೆ ಇರುವ ಅಟೊಮೊಬೈಲ್‌ ಉದ್ದಿಮೆ, ಕೆಲವೊಂದು ಇಲೆಕ್ಟ್ರಾನಿಕ್ಸ್‌ ವಸ್ತುಗಳು, ಯೂರಿಯಾ ಸೇರಿದಂತೆ ರಸಗೊಬ್ಬರ ಉತ್ಪಾದನೆ ಮಾಡುವ ವಸ್ತುಗಳಿಗೆ ಇನ್‌ವರ್ಟೆಡ್‌ ಡ್ನೂಟಿ ಸಮಸ್ಯೆ ಎದುರಾಗುತ್ತಿದೆ.

ಬಿಲ್‌ ತೋರಿಸಿ, ನಗದು ಬಹುಮಾನ ಗೆಲ್ಲಿ!
ತಿರುವನಂತಪುರಂ: ಜಿಎಸ್‌ಟಿ ತಪ್ಪಿಸಿಕೊಳ್ಳುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕೇರಳ ಸರ್ಕಾರ ವಿನೂತನ ಯೋಜನೆಯೊಂದನ್ನು ಘೋಷಿಸಿದೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರು “ಲಕ್ಕಿ ಬಿಲ್‌ ಆ್ಯಪ್‌’ ಎಂಬ ಹೊಸ ಆ್ಯಪ್‌ವೊಂದನ್ನು ಅನಾವರಣಗೊಳಿಸಿದ್ದಾರೆ. ಯಾರು ತಾವು ಖರೀದಿಸಿದ ವಸ್ತುಗಳ ನೈಜ ಬಿಲ್‌ ಅನ್ನು ಈ ಆ್ಯಪ್‌ನಲ್ಲಿ ಅಪ್‌ಲೋಡ್‌ ಮಾಡುತ್ತಾರೋ ಅವರಿಗೆ 25 ಲಕ್ಷ ರೂ. ನಗದು ಸೇರಿದಂತೆ ವಿವಿಧ ಬಹುಮಾನಗಳನ್ನು ನೀಡುವುದಾಗಿಯೂ ಅವರು ಘೋಷಿಸಿದ್ದಾರೆ.

ಪ್ರತಿಯೊಬ್ಬ ವ್ಯಕ್ತಿಯೂ, ಯಾವುದೇ ವಸ್ತುವನ್ನು ಖರೀದಿಸಿದರೂ ಅದಕ್ಕೆ ಬಿಲ್‌ ನೀಡುವಂತೆ ಮಾರಾಟಗಾರನಲ್ಲಿ ಕೇಳಬೇಕು. ಆಗ ಮಾರಾಟಗಾರರು ತೆರಿಗೆ ತಪ್ಪಿಸಿಕೊಳ್ಳಲು ಆಗುವುದಿಲ್ಲ ಎನ್ನುವುದು ಸರ್ಕಾರದ ವಾದ. ಈ ಬಹುಮಾನಕ್ಕೆಂದೇ ಪ್ರಸಕ್ತ ವರ್ಷದ ಬಜೆಟ್‌ನಲ್ಲಿ 5 ಕೋಟಿ ರೂ. ಮೀಸಲಿಟ್ಟಿರುವುದಾಗಿಯೂ ಸಿಎಂ ಹೇಳಿದ್ದಾರೆ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.