ದುಬಾರಿಯಾಗುತ್ತಿರುವ ಚಿನ್ನವನ್ನು ನಮ್ಮ ಸಂಪತ್ತನ್ನಾಗಿಸುವುದೇಗೆ?

ಕಳೆದ ಒಂದು ವರ್ಷದಲ್ಲಿ ಚಿನ್ನದ ಬೆಲೆಗಳು ಶೇ. 42ಕ್ಕಿಂತ ಹೆಚ್ಚಾಗಿದೆ. ಆಗಸ್ಟ್‌ 2019ರಂದು ಚಿನ್ನದ ಬೆಲೆ 38,950 ರೂ. ಆಗಿತ್ತು. ಇದೀಗ 10 ಗ್ರಾಂ.ಗೆ 55,500 ರೂ. ಆಗಿದೆ. ಕೊರೊನಾ ಕಾಲದಲ್ಲಿ ಇದೇ ಅನಿಶ್ಚಿತತೆ ಮುಂದುವರಿದರೆ ಅದರ ಬೆಲೆ ಮತ್ತಷ್ಟು ಹೆಚ್ಚಾಗಲಿದೆ.

Team Udayavani, Aug 6, 2020, 4:17 PM IST

gold soverign

Representative Image used, ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ.

ಮಣಿಪಾಲ: ಚಿನ್ನದ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.

ಸದ್ಯ ಚಿನ್ನದ ಬೆಲೆ 10 ಗ್ರಾಂ.ಗೆ 55,500 ರೂಪಾಯಿಗಳನ್ನು ದಾಟಿದೆ.

ಇಂತಹ ಕಠಿನ ಸಂದರ್ಭದಲ್ಲಿ ಚಿನ್ನವನ್ನು ಖರೀದಿ ಮಾಡುವುದು ಸುಲಭದ ಮಾತಾಗಿಲ್ಲ.

ಅದರಲ್ಲೂ ಬಡ ಮತ್ತು ಮಧ್ಯಮ ವರ್ಗಕ್ಕೆ ಚಿನ್ನ ಕೈಗಟುಕದ ಲೋಹವಾಗಿದೆ. ಆದರೆ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಇದು ಒಂದರ್ಥದಲ್ಲಿ ಪ್ರಸಕ್ತ ಸಮಯವಾಗಿದೆ. ಅಂದರೆ ಮಾರುಕಟ್ಟೆ ಬೆಲೆಗಿಂತ ಅಗ್ಗದ ದರದಲ್ಲಿ ಚಿನ್ನವನ್ನು ಖರೀದಿಸಲು ಸರಕಾರ ಅವಕಾಶ ನೀಡುತ್ತಿದೆ.

ಹೌದು. ಸಾವರೀನ್‌ ಗೋಲ್ಡ್‌ ಬಾಂಡ್‌ ಯೋಜನೆಯಡಿ ಆಗಸ್ಟ್‌ 7ರ ವರೆಗೆ, 10 ಗ್ರಾಂ. ಗೆ 53,340 ರೂ. ಪಾವತಿಸಿ ಚಿನ್ನ ಖರೀದಿಸಬಹುದಾಗಿದೆ. ಅಂದರೆ ಈಗಿನ ಮಾರುಕಟ್ಟೆ ಈ ಬೆಲೆಗಿಂತ 2,160 ರೂ.ಗಳು ಕಡಿಮೆ. ಈ ಅವಕಾಶ ಪ್ರಸ್ತುತ ಕೋವಿಡ್‌ನ‌ಂತಹ ಪರಿಸ್ಥಿತಿಯಲ್ಲಿ ತುಂಬಾ ಪ್ರಯೋಜಕಾರಿಯಾಗಿದೆ.

ಏನಿದು ಬಾಂಡ್‌?
ಸಾರ್ವಭೌಮ ಗೋಲ್ಡ್ ಅಥವ ಸಾವರೀನ್‌ ಗೋಲ್ಡ್‌ ಬಾಂಡ್‌ ಸರಕಾರದ ಬಾಂಡ್‌ ಆಗಿದೆ. ಇದನ್ನು ಡಿಮ್ಯಾಟ್‌ ರೂಪದಲ್ಲಿ ಪರಿವರ್ತಿಸಬಹುದಾಗಿದೆ. ಇದರ ಮೌಲ್ಯವನ್ನು ರೂಪಾಯಿ ಅಥವಾ ಡಾಲರ್‌ಗಳ ಮುಖಬೆಲೆಯಲ್ಲಿ ಅಳೆಯಲಾಗುವುದಿಲ್ಲ. ಬದಲಾಗಿದೆ ಚಿನ್ನದ ಮಾರುಕಟ್ಟೆಯ ಮೂಲಕ ದರ ನಿಗದಿ ಪಡಿಸಲಾಗುತ್ತದೆ. ಬಾಂಡ್‌ 5 ಗ್ರಾಂ. ಚಿನ್ನದ್ದಾದ್ದರೆ, ಐದು ಗ್ರಾಂ ಚಿನ್ನದ ಬೆಲೆ ಬಾಂಡ್‌ ಬೆಲೆಗೆ ಸಮನಾಗಿರುತ್ತದೆ. ಸಾವರೀನ್‌ ಗೋಲ್ಡ್‌ ಬಾಂಡ್‌ಗಳನ್ನು ಸೆಬಿ (SEBI) ಡೀಲರ್‌ಗಳ ಮೂಲಕ ಖರೀದಿಸಬೇಕು. ಬಾಂಡ್‌ ಅನ್ನು ರಿಡೀಮ್‌ ಮಾಡುವ ಸಮಯದಲ್ಲಿ ಹಣವನ್ನು ಹೂಡಿಕೆದಾರರ ಖಾತೆಗೆ ಜಮಾ ಮಾಡಲಾಗುತ್ತದೆ. ಬಾಂಡ್‌ ಅನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ ನೀಡುತ್ತದೆ.

ಎಂಸಿಎಕ್ಸ್‌ ಪ್ರಕಾರ, ಆಗಸ್ಟ್‌ 6ರಂದು ಚಿನ್ನದ ದರವು 10 ಗ್ರಾಂ.ಗೆ 55,500 ರೂ. ದಾಟುವ ಸಾಧ್ಯತೆ ಇದೆ. ಅದರ ಅನ್ವಯ 1 ಗ್ರಾಂ. ಚಿನ್ನದ ಬೆಲೆ 5,550 ರೂ. ಆಗಲಿದ್ದು, ಸಾವರೀನ್‌ ಗೋಲ್ಡ್‌ ಬಾಂಡ್‌ ಯೋಜನೆಯಡಿಯಲ್ಲಿ ಪ್ರತಿ ಗ್ರಾಂ.ಗೆ 5,334 ರೂ. ಎಂದು ನಿಗದಿಪಡಿಸಲಾಗಿದೆ. ಅಂದರೆ ಪ್ರತಿ ಗ್ರಾಂ.ಗೆ 216 ರೂ. ಕಡಿಮೆ ಪಾವತಿಸಬೇಕಾಗುತ್ತದೆ.

ಶೇ. 4ರ ಮರುಪಾವತಿ ಇದೆ
ಆಗಸ್ಟ್‌ 3ರಿಂದ ಆಗಸ್ಟ್‌ 7ರ ವರೆಗೆ ನಡೆಯಲಿರುವ ಸಾವರೀನ್‌ ಗೋಲ್ಡ್‌ಬಾಂಡ್‌ಗಳ ಮಾರಾಟವನ್ನು ಆರ್‌ಬಿಐ ಪ್ರಾರಂಭಿಸಲಿದೆ. ಇದರನ್ವಯ ಕೇವಲ 3 ದಿನಗಳಲ್ಲಿ ಶೇ. 4ರ ಲಾಭವನ್ನು ನೀಡಲಿದೆ. ಸ್ಥಿರ ಠೇವಣಿಗಳ ಮೇಲೆ ಒಂದು ವರ್ಷದಲ್ಲಿ ಇದರ ಲಾಭ ದೊರೆಯಲಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರು ಮತ್ತು ಡಿಜಿಟಲ್‌ ಪಾವತಿ ಮೂಲಕ ಪಾವತಿಸುವವರು ಪ್ರತಿ ಗ್ರಾಂ.ಗೆ 50 ರೂಪಾಯಿ ರಿಯಾಯಿತಿ ಪಡೆಯಲಿದ್ದಾರೆ.

ಶೇ. 2.50 ಬಡ್ಡಿ
ಸಾವರೀನ್‌ ಗೋಲ್ಡ್‌ ಬಾಂಡ್‌ಗಳು ಪ್ರತಿವರ್ಷ ಶೇ. 2.50ರಷ್ಟು ಬಡ್ಡಿಯನ್ನು ತಂದುಕೊಡಲಿವೆ. ಈ ಹಣವನ್ನು ಪ್ರತಿ 6 ತಿಂಗಳಿಗೊಮ್ಮೆ ಸ್ವಯಂಚಾಲಿತವಾಗಿ ಖರೀದಿದಾರನ ಖಾತೆಗೆ ಜಮಾ ಮಾಡಲಾಗುತ್ತದೆ. ಸದ್ಯಕ್ಕೆ ಇಂತಹ ಲಾಭ ಬೇರೆಯಾವುದೇ ಬಾಂಡ್‌ ಯೋಜನೆಗಳಲ್ಲಿ ಇಲ್ಲ. ಎನ್‌ಎಸ್‌ಇ ಮಾಹಿತಿಯ ಪ್ರಕಾರ, 8 ವರ್ಷಗಳ ಮುಕ್ತಾಯದ ಅವಧಿಯ ಬಳಿಕ ಸಾವರೀನ್‌ ಗೋಲ್ಡ್‌ ಬಾಂಡ್‌ಗಳ ಮೇಲೆ ಯಾವುದೇ ತೆರಿಗೆ ಇರುವುದಿಲ್ಲ. ಅಲ್ಲದೆ ಪ್ರತಿ ಆರು ತಿಂಗಳಿಗೊಮ್ಮೆ ಪಾವತಿಸುವ ಬಡ್ಡಿಗೆ ಯಾವುದೇ ಟಿಡಿಎಸ್‌ ಇರುವುದಿಲ್ಲ.

ಎಷ್ಟು ಚಿನ್ನವನ್ನು ಖರೀದಿಸಬಹುದು?
ಒಬ್ಬ ವ್ಯಕ್ತಿಯು ಆರ್ಥಿಕ ವರ್ಷದಲ್ಲಿ ಕನಿಷ್ಠ 1 ಗ್ರಾಂ. ಮತ್ತು ಗರಿಷ್ಠ 4 ಕೆ.ಜಿ.ಯ ಬಾಂಡ್‌ಗಳನ್ನು ಖರೀದಿಸಬಹುದು. ಆದರೆ ಒಂದು ಟ್ರಸ್ಟ್‌ ಅಥವ ಸಂಸ್ಥೆ ಪ್ರತಿವರ್ಷ ಗರಿಷ್ಠ 20 ಕೆ.ಜಿ. ಬಾಂಡ್‌ಗಳನ್ನು ಖರೀದಿಸಬಹುದಾಗಿದೆ. ಇದು 8 ತಿಂಗಳ ಅವಧಿಯನ್ನು ಹೊಂದಿದೆ. ಆದರೆ ಹೂಡಿಕೆದಾರ 5 ವರ್ಷಗಳ ಬಳಿಕ ಅಥವ 3 ವರ್ಷದ ಮೊದಲೇ ನಿರ್ಗಮಿಸಬಹುದಾಗಿದೆ. ಅಂತಹ ಸಂದರ್ಭದಲ್ಲಿ ಅದನ್ನು ನಗದು ರೂಪದಲ್ಲಿ ಪಡೆದುಕೊಳ್ಳಬಹುದು. ಎನ್‌ಎಸ್‌ಇ ಪ್ರಕಾರ, ಸಾವರೀನ್‌ ಗೋಲ್ಡ್‌ ಬಾಂಡ್‌ಗಳನ್ನು ಬ್ಯಾಂಕ್‌ ಸಾಲ ತೆಗೆದುಕೊಳ್ಳುವ ಸಂದರ್ಭ ಆಸ್ತಿಯ ರೂಪದಲ್ಲಿ ಬಳಸಬಹುದು.

ಶೇ. 42ರಷ್ಟು ಆದಾಯ
ಕಳೆದ ಒಂದು ವರ್ಷದಲ್ಲಿ ಚಿನ್ನದ ಬೆಲೆಗಳು ಶೇ. 42ಕ್ಕಿಂತ ಹೆಚ್ಚಾಗಿದೆ. ಆಗಸ್ಟ್‌ 2019ರಂದು ಚಿನ್ನದ ಬೆಲೆ 38,950 ರೂ. ಆಗಿತ್ತು. ಇದೀಗ 10 ಗ್ರಾಂ.ಗೆ 55,500 ರೂ. ಆಗಿದೆ. ಕೊರೊನಾ ಕಾಲದಲ್ಲಿ ಇದೇ ಅನಿಶ್ಚಿತತೆ ಮುಂದುವರಿದರೆ ಅದರ ಬೆಲೆ ಮತ್ತಷ್ಟು ಹೆಚ್ಚಾಗಲಿದೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.