ಚೀನಾಕ್ಕೆ ಸಡ್ಡು; ಭಾರತ-ಜಪಾನ್ ನಡುವೆ ಮಹತ್ವದ ರಕ್ಷಣಾ ಒಪ್ಪಂದಕ್ಕೆ ಸಹಿ
ರಕ್ಷಣಾ ಒಪ್ಪಂದವನ್ನು ಪ್ರಧಾನಿ ಮೋದಿ ಮತ್ತು ಶಿಂಜೋ ಅಬೆ ಸ್ವಾಗತಿಸಿರುವುದಾಗಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ
Team Udayavani, Sep 10, 2020, 6:15 PM IST
ನವದೆಹಲಿ:ಭಾರತ ಮತ್ತು ಜಪಾನ್ ಗುರುವಾರ (ಸೆ.10, 2020) ಪ್ರಮುಖ ರಕ್ಷಣಾ ಸಂಬಂಧಿ ಒಪ್ಪಂದಕ್ಕೆ ಸಹಿ ಹಾಕಿದ್ದು, ಇದರಿಂದಾಗಿ ಇಂಡೋ-ಫೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ ಕೊಡುಗೆ ನೀಡಿದಂತಾಗಿದೆ ಎಂದು ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಶಿಂಜೋ ಅಬೆ ಜತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಪರಸ್ಪರ ವಿಶ್ವಾಸ ಮತ್ತು ಸ್ನೇಹವನ್ನು ವ್ಯಕ್ತಪಡಿಸಿ ಉಭಯ ದೇಶಗಳ ನಡುವಿನ ಬಾಂಧವ್ಯ ಇನ್ನಷ್ಟು ವೃದ್ದಿಯಾಗಲು ಸಹಾಯಕವಾಗಿದೆ ಎಂದು ತಿಳಿಸಿರುವುದಾಗಿ ವರದಿ ವಿವರಿಸಿದೆ. ಈ ರಕ್ಷಣಾ ಒಪ್ಪಂದದ ಮೂಲಕ ಚೀನಾದ ವಿಸ್ತರಣಾವಾದಕ್ಕೆ ಕಡಿವಾಣ ಹಾಕಲು ಭಾರತ ಹೊರಟಿರುವುದಾಗಿ ವಿಶ್ಲೇಷಿಸಲಾಗುತ್ತಿದೆ.
ಉಭಯ ದೇಶಗಳ ನಡುವಿನ ರಕ್ಷಣಾ ಒಪ್ಪಂದವನ್ನು ಪ್ರಧಾನಿ ಮೋದಿ ಮತ್ತು ಶಿಂಜೋ ಅಬೆ ಸ್ವಾಗತಿಸಿರುವುದಾಗಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಈ ಒಪ್ಪಂದದಿಂದಾಗಿ ಎರಡು ದೇಶಗಳ ನಡುವಿನ ರಕ್ಷಣಾ ಸಹಕಾರ ಇನ್ನಷ್ಟು ಗಟ್ಟಿಗೊಂಡಿದ್ದು, ಇಂಡೋ-ಫಿಸಿಫಿಕ್ ಪ್ರದೇಶದ ಶಾಂತಿ ಮತ್ತು ರಕ್ಷಣೆಗೆ ಕೊಡುಗೆಯನ್ನು ನೀಡಿದಂತಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಲಡಾಖ್-ಫಿಂಗರ್ 4; ತಂತ್ರಗಾರಿಕೆಯಿಂದಲೇ ಚೀನಾ ಸೇನೆಯನ್ನು ಕಟ್ಟಿ ಹಾಕಿದ ಭಾರತೀಯ ಸೇನಾಪಡೆ!
ಭಾರತ ಮತ್ತು ಜಪಾನ್ ನಡುವಿನ ಸ್ನೇಹ ವೃದ್ದಿ ಹಾಗೂ ವೈಯಕ್ತಿಕ ಬದ್ಧತೆಗೆ ಶಿಂಜೋ ಅಬೆ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಮುಂಬೈ-ಅಹಮದಾಬಾದ್ ಹೈ ಸ್ಪೀಡ್ ರೈಲ್ವೆ ಯೋಜನೆ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಮೋದಿ ಮತ್ತು ಅಬೆ ಪುನರ್ ವಿಮರ್ಶೆ ನಡೆಸಿರುವುದಾಗಿ ವರದಿ ಹೇಳಿದೆ.
ಕೋವಿಡ್ 19 ನಂತರ ಜಾಗತಿಕ ಸಮುದಾಯ ಆರ್ಥಿಕ ಹೊಡೆತ ಅನುಭವಿಸುತ್ತಿದ್ದು, ಎರಡೂ ದೇಶಗಳು ಸಂದಿಗ್ದ ಸ್ಥಿತಿಯಲ್ಲಿರುವಾಗ ಪ್ರಮುಖ ಪಾತ್ರ ವಹಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಇದನ್ನೂ ಓದಿ: ರಫೇಲ್ ಯುದ್ಧ ವಿಮಾನ ಅಂದ ಕೂಡಲೇ ಬೆಚ್ಚಿಬೀಳೋದೇಕೆ? ರಫೇಲ್ ವಿಶೇಷತೆ ಏನು…
ಅಂಬಾಲಾದಲ್ಲಿ ಭಾರತೀಯ ವಾಯುಪಡೆಗೆ 5 ರಫೇಲ್ ಜೆಟ್ ಯುದ್ಧ ವಿಮಾನ ಸೇರ್ಪಡೆಯಾದ ದಿನದಂದೇ ಭಾರತ ಮತ್ತು ಜಪಾನ್ ನಡುವೆ ಮಹತ್ವದ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಭಾರತ ಚೀನಾವನ್ನು ತಂತ್ರಗಾರಿಕೆಯಿಂದ ಕಟ್ಟಿಹಾಕುವತ್ತ ಹೆಜ್ಜೆ ಇಡತೊಡಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ