ಭಾರತೀಯ ರೈಲ್ವೇಯ IRCTCಯಿಂದ 8.5 ಲಕ್ಷ ಜನರಿಗೆ ಆಹಾರ ವಿತರಣೆ


Team Udayavani, Apr 10, 2020, 7:25 PM IST

ಭಾರತೀಯ ರೈಲ್ವೇಯ IRCTCಯಿಂದ 8.5 ಲಕ್ಷ ಜನರಿಗೆ ಆಹಾರ ವಿತರಣೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಕೋವಿಡ್ ಸಂಬಂಧಿತ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವವರ ನೆರವಿಗೆ ಭಾರತೀಯ ರೈಲ್ವೇ ಧಾವಿಸಿದೆ. ಲಾಕ್ ಡೌನ್ ಆದಾಗಿನಿಂದ ಇಲ್ಲಿಯವರೆಗೆ ರೈಲ್ವೇ ಸುಮಾರು 8.5 ಜನರಿಗೆ ಊಟವನ್ನು ವಿತರಿಸುವ ಕಾರ್ಯವನ್ನು ಮಾಡಿದೆ.

ಪಿಯೂಷ್ ಗೋಯಲ್ ಅವರ ನೇತೃತ್ವದಲ್ಲಿ ಭಾರತೀಯ ರೈಲ್ವೇಯ ಕೆಟರಿಂಗ್ ಮತ್ತು ಟೂರಿಸಮ್ ಕಾರ್ಪೊರೇಷನ್ ಘಟಕವು ಸಚಿವ ಈ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ದೇಶದ ವಿವಿಧ ಕಡೆಗಳಲ್ಲಿ ಇರುವ IRCTCಯ ಅಡುಗೆ ಮನೆಗಳಲ್ಲಿ ತಯಾರಿಸಿದ ಆಹಾರವನ್ನು ಹಸಿದವರಿಗೆ ವಿತರಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ರೈಲ್ವೇಯ ಈ ಕಾರ್ಯದಲ್ಲಿ ರೈಲ್ವೇ ರಕ್ಷಣಾ ದಳ ಹಾಗೂ ಕೆಲವೊಂದು ಸರಕಾರೇತರ ಸಂಸ್ಥೆಗಳ ಸಹಭಾಗಿತ್ವದಲ್ಲಿ ದೇಶಾದ್ಯಂತ ಈ ಆಹಾರ ವಿತರಣೆಯ ಕೆಲಸ ನಡೆಯುತ್ತಿದೆ.

ಬಡವರಿಗೆ, ಭಿಕ್ಷುಕರಿಗೆ, ನಿರ್ಗತಿಕರಿಗೆ, ಕೂಲಿ ಕಾರ್ಮಿಕರಿಗೆ, ಲಾಕ್ ಡೌನ್ ನಿಂದಾಗಿ ತಮ್ಮ ಸ್ವಂತ ಊರುಗಳಿಗೆ ತೆರಳಲಾಗದೆ ಸಿಲುಕಿಕೊಂಡವರಿಗೆ ಹಾಗೂ ವಿವಿಧ ರೈಲ್ವೇ ನಿಲ್ದಾಣಗಳ ಬಳಿ ಮತ್ತು ಸಮೀಪದ ಪ್ರದೇಶಗಳಲ್ಲಿ ಆಹಾರವನ್ನು ಹುಡುಕಿಕೊಂಡು ಬರುವವರಿಗೆ ಈ ರೀತಿಯಾಗಿ ರೈಲ್ವೇ ಇಲಾಖೆ ಆಹಾರವನ್ನು ಒದಗಿಸುವ ಕೆಲಸವನ್ನು ಮಾಡುತ್ತಿದೆ.

ದೆಹಲಿ, ಪುಣೆ, ಹೌರಾ, ಹುಬ್ಬಳ್ಳಿ, ಮುಂಬಯಿ ಸೆಂಟ್ರಲ್, ಬೆಂಗಳೂರು, ಅಹಮದಾಬಾದ್, ಪಟ್ನಾ, ಗಯಾ, ರಾಂಚಿ, ವಿಜಯವಾಡ, ತಿರುಚನಾಪಳ್ಳಿ, ಗೌಹಾತಿ, ಸಮಷ್ಟಿಪುರ, ಪ್ರಯಾಗ್ ರಾಜ್, ವಿಶಾಖಪಟ್ಟಣ, ರಾಯ್ಪುರ ಹೀಗೆ ದೇಶದ ವಿವಿಧ ಭಾಗಗಳಲ್ಲಿ ಇರುವ ಐ.ಆರ್.ಸಿ.ಟಿ.ಸಿಯ ಕಿಚನ್ ಗಳಲ್ಲಿ ಆಹಾರವನ್ನು ತಯಾರಿಸಿ ಪ್ರತೀದಿನ ವಿತರಿಸುವ ಕಾರ್ಯ ನಡೆಯುತ್ತಿದೆ.

ಇದುವರೆಗೆ ಒದಗಿಸಲಾದ ಒಟ್ಟು 8 ಲಕ್ಷ ಊಟಗಳಲ್ಲಿ ಆರು ಲಕ್ಷ ಊಟವನ್ನು ಐ.ಆರ್.ಸಿ.ಟಿ.ಸಿ ಒದಗಿಸಿದ್ದರೆ, ಎರಡು ಲಕ್ಷ ಊಟವನ್ನು ರೈಲ್ವೇ ರಕ್ಷಣಾ ದಳ ತನ್ನ ಮೂಲಗಳಿಂದ ನೀಡಿದೆ ಇನ್ನು ಸುಮಾರು 1.5 ಲಕ್ಷದಷ್ಟು ಊಟವನ್ನು ರೈಲ್ವೇ ಇಲಾಖೆಯ ಜೊತೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎನ್.ಜಿ.ಒ.ಗಳ ಕಡೆಯಿಂದ ಒದಗಿಸಲಾಗಿದೆ ಎಂದು ತಿಳಿದುಬಂದಿದೆ.

ಇಷ್ಟು ಮಾತ್ರವಲ್ಲದೇ ಸುಮಾರು 20 ಕೋಟಿ ರೂಪಾಯಿಗಳಷ್ಟು ಹಣವನ್ನು ಐ.ಆರ್.ಸಿ.ಟಿ.ಸಿ. ಪಿ.ಎಂ.-ಕೇರ್ಸ್ ಫಂಡ್ ನಲ್ಲಿ ಡಿಪಾಸಿಟ್ ಮಾಡಿದೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.