ಕೋವಿಡ್ ಭೀತಿ ತಗ್ಗಿದ್ದರೂ ಎಸಿ ಕೋಚ್ಗಳಲ್ಲಿ ಹೊದಿಕೆ ಸಿಗಲ್ಲ!
ರೈಲು ಪ್ರಯಾಣದ ವೇಳೆ ಸಾಧ್ಯವಾದಷ್ಟು ನೈರ್ಮಲ್ಯ ಕಾಪಾಡಿಕೊಳ್ಳುವ ಉದ್ದೇಶದಿಂದ ಇಂಥ ನಿರ್ಧಾರ ಕೈಗೊಂಡಿದ್ದೇವೆ
Team Udayavani, Sep 7, 2020, 2:49 PM IST
ನವದೆಹಲಿ: ಕೋವಿಡ್ ಸೋಂಕಿನ ವ್ಯಾಪಿಸುವಿಕೆ ತಗ್ಗಿದ ಬಳಿಕವೂ ರೈಲ್ವೆಯ ಎಸಿ ಕೋಚ್ಗಳಲ್ಲಿ ಪ್ರಯಾಣಿಸುವವರು ತಮ್ಮ ಸ್ವಂತ ಹೊದಿಕೆ ಮತ್ತು ಚಾದರಗಳನ್ನು ತರ ಬೇಕಾಗುತ್ತದೆ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ವಿನೋದ್ ಕುಮಾರ್ ಯಾದವ್ ಭಾನುವಾರ ಹೇಳಿದ್ದಾರೆ.
ಪ್ರಯಾಣಿಕರಿಗೆ ಒಂದೇ ಬಾರಿಗೆ ಬಳಸಬಹುದಾದ ಬೆಡ್ ಶೀಟ್ ಒದಗಿಸಲು ಅಥವಾ ಪ್ರಯಾಣಿಕರೇ ಸ್ವತಃ ಚಾದರ ಮತ್ತು ಹೊದಿಕೆ ತರುವಂತೆ ಸೂಚಿ ಸಲು ನಿರ್ಧರಿಸಿದ್ದೇವೆ. ಇದಕ್ಕಾಗಿ ವಿಸ್ತೃತ ನೀತಿಯೊಂದನ್ನು ಜಾರಿಗೆ ತಂದು, ಅಂತಿಮ ನಿರ್ಧಾರ ಕೈಗೊಳ್ಳಬೇಕಾಗುತ್ತದೆ.
ರೈಲು ಪ್ರಯಾಣದ ವೇಳೆ ಸಾಧ್ಯವಾದಷ್ಟು ನೈರ್ಮಲ್ಯ ಕಾಪಾಡಿಕೊಳ್ಳುವ ಉದ್ದೇಶದಿಂದ ಇಂಥ ನಿರ್ಧಾರ ಕೈಗೊಂಡಿದ್ದೇವೆ ಎಂದೂ ಯಾದವ್ ಹೇಳಿದ್ದಾರೆ.
ಈ ಹಿಂದೆ ಎಸಿ ಬೋಗಿಗಳಲ್ಲಿ ಪ್ರಯಾಣಿಕರಿಗೆ ರೈಲ್ವೆಯ ವತಿಯಿಂದಲೇ ಹೊದಿಕೆ ಒದಗಿಸಲಾಗುತ್ತಿತ್ತು. ಆದರೆ, ಕೊರೊನಾ ಸೋಂಕು ದೇಶವನ್ನು ಪ್ರವೇಶಿ ಸಿದ ಬಳಿಕ, ಸೋಂಕಿನ ವ್ಯಾಪಿಸುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಇಲಾಖೆಯು ತಿಳಿಸಿತ್ತು.
ಸಂಚಾರ ರದ್ದಾಗಲ್ಲ: ರೈಲ್ವೆಯು ಸುಮಾರು 500ರಷ್ಟು ರೈಲುಗಳ ಸಂಚಾರವನ್ನೇ ರದ್ದು ಮಾಡಲಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿರುವ ಮಂಡಳಿ, ಯಾವುದೇ ರೈಲಿನ ಸಂಚಾರವನ್ನೂ ರದ್ದುಗೊಳಿಸುವ ನಿರ್ಧಾರ ಕೈಗೊಂಡಿಲ್ಲ ಮತ್ತು ಯಾವುದೇ ರೈಲು ನಿಲ್ದಾಣವನ್ನೂ ಮುಚ್ಚಲಾಗಿಲ್ಲ ಎಂದು ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು