ಮನೆಯಿಂದಲೇ ಕೆಲಸ ಐಟಿ ಮಂತ್ರ : ತೆರಿಗೆ, ಕಾರ್ಮಿಕರ ಕಾನೂನುಗಳಲ್ಲಿ ಬದಲಾವಣೆಗೆ ಮನವಿ


Team Udayavani, May 13, 2020, 6:39 AM IST

ಮನೆಯಿಂದಲೇ ಕೆಲಸ ಐಟಿ ಮಂತ್ರ : ತೆರಿಗೆ, ಕಾರ್ಮಿಕರ ಕಾನೂನುಗಳಲ್ಲಿ ಬದಲಾವಣೆಗೆ ಮನವಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು/ಹೊಸದಿಲ್ಲಿ: ಕೋವಿಡ್ ವೈರಸ್ ಬಂದ ಬಳಿಕ ಮನೆಗಳೇ ಕಾಯಕದ ಕೈಲಾಸವಾಗಿವೆ.
ಟೆಕ್‌ ಪಾರ್ಕ್‌ಗಳನ್ನು ಅವಲಂಬಿಸಿದ್ದ 14.37 ಲಕ್ಷ ಕೋ.ರೂ. ಮೌಲ್ಯದ ಐಟಿ ವಲಯ ಈಗ ವಸತಿ ಪ್ರದೇಶಗಳಲ್ಲಿ ನೆಲೆ ಕಂಡುಕೊಳ್ಳುತ್ತಿದೆ.

ಇದೆಲ್ಲವೂ ವರ್ಕ್‌ ಫ್ರಂಮ್‌ ಹೋಮ್‌ ಪ್ರಭಾವ. ದೇಶದಲ್ಲಿ 43 ಲಕ್ಷ ಐಟಿ ಉದ್ಯೋಗಿಗಳಿದ್ದು, ಬಹುತೇಕರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ.

ಕೋವಿಡ್ ವ್ಯಾಪಿಸಿದ ಬಳಿಕ ಐಟಿ ವಲಯದ ಕಾರ್ಯ ಶೈಲಿ ಬದಲಾಗಿದೆ. ವೆಚ್ಚದ ವಿಧಾನವೂ ಹಿಂದಿನಂತಿಲ್ಲ. ಹೀಗಾಗಿ ಹೊಸ ಪರಿಸ್ಥಿತಿಗೆ ಅನುಗುಣವಾಗಿ ತೆರಿಗೆ ಮತ್ತು ಕಾರ್ಮಿಕರ ಕಾನೂನುಗಳಲ್ಲಿ ಅಗತ್ಯ ಬದಲಾವಣೆಗಳನ್ನು ತರುವಂತೆ ಐಟಿ ಕ್ಷೇತ್ರದ ನಾಯಕರು ಸರಕಾರದ ಗಮನ ಸೆಳೆದಿದ್ದಾರೆ.

ತಿಂಗಳ ಆರಂಭದಲ್ಲಿ ಸರಕಾರಿ ಅಧಿಕಾರಿಗಳೊಂದಿಗೆ ಈ ಸಂಬಂಧ ಸಭೆ ನಡೆದಿದ್ದು, ಐಟಿ ನಾಯಕರು ಮನೆಯಿಂದ ಕೆಲಸ ಮಾಡುವ ಪದ್ಧತಿಯತ್ತ ಒಲವು ತೋರಿದ್ದಾರೆ. ಭವಿಷ್ಯದಲ್ಲಿ ಶೇ.50 ಐಟಿ ನೌಕರರು ಇದನ್ನು ಅನುಸರಿಸುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾನೂನುಗಳಲ್ಲಿ ಬದಲಾವಣೆ ತರುವಂತೆ ಕೋರಿದ್ದಾರೆ. ಈ ಬಗ್ಗೆ ನಾಸ್ಕಾಂ ವರದಿ ಸಿದ್ಧಪಡಿಸುತ್ತಿದ್ದು, ಕಾರ್ಮಿಕ ಖಾತೆ ಮತ್ತು ದೂರ ಸಂಪರ್ಕ ಖಾತೆ ಸಚಿವರಿಗೆ ಕಳುಹಿಸಿ ಮುಂದಿ ಕ್ರಮಗಳಿಗಾಗಿ ಮನವಿ ಮಾಡಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಜತೆಗೆ ಈಗ ನೀಡಿರುವ ಕೆಲವು ವಿನಾಯಿತಿಗಳನ್ನು ಜುಲೈ ತಿಂಗಳವರೆಗೂ ಮುಂದುವರಿಸುವಂತೆ ಕೋರಲಾಗಿದೆ.
ವರ್ಕ್‌ ಫ್ರಂ‌ ಹೋಮ್‌ ಒಂದು ಹೊಸ ರೂಢಿಯಾಗುತ್ತಿದೆ. ಈಗಿರುವ ಕೆಲವು ಕಾರ್ಮಿಕ ಕಾನೂನುಗಳು ಇದಕ್ಕೆ ಪೂರಕವಾಗಿಲ್ಲ. ಇದನ್ನು ನಾವು ಹೊಸ ದೃಷ್ಟಿಕೋನದಿಂದ ನೋಡುವ ಅಗತ್ಯವಿದೆ ಎಂದು ಇನ್ಫೋಸಿಸ್‌ ಸಿಒಒ ಯು.ಬಿ.ಪ್ರವೀಣ್‌ ರಾವ್‌ ಅಭಿಪ್ರಾಯಪಟ್ಟಿದ್ದಾರೆ.

ಐಟಿ ಬೇಡಿಕೆಗಳೇನು?
– ಕೆಲಸದ ಅವಧಿ, ಪಾಳಿ ಸಮಯ ಮರು ನಿಗದಿಗೆ ಅನುಗುಣವಾಗಿ ಕಾರ್ಮಿಕ ಕಾನೂನು ಬದಲಾವಣೆ

– ಕೆಲಸದ ಸ್ಥಳದಲ್ಲಿ ಸುರಕ್ಷೆ ಮತ್ತು ಆರೋಗ್ಯದಾಯಕ ವಾತಾವರಣ ನಿರ್ಮಿಸುವ ಉದ್ಯೋಗದಾತರ ಪಾತ್ರದ ಮರುಪರಿಶೀಲನೆ

– ವರ್ಕ್‌ ಫ್ರಂ‌ ಹೋಮ್‌ಗಾಗಿ ಸಂಸ್ಥೆಗಳು ಮಾಡುವ ವೆಚ್ಚವನ್ನು ವ್ಯವಹಾರ ವೆಚ್ಚವಾಗಿ ಪರಿಗಣಿಸುವ ಸಂಬಂಧ ಐಟಿ ಕಾನೂನಿನಲ್ಲಿ ಬದಲಾವಣೆ

– ವರ್ಕ್‌ ಫ್ರಂ‌ ಹೋಮ್‌ ಖಾಯಂ ಆಗಿಸಲು ಡಿಒಟಿ ವಿನಾಯಿತಿ

ಸೇವೆಗಳ ರಫ್ತಿನಲ್ಲಿ ಐಟಿ ವಲಯದ ಪಾಲು: 46%

ಒಟ್ಟು ದೇಶೀಯ ಉತ್ಪಾದನೆಗೆ ಐಟಿ ಕೊಡುಗೆ: 08%


2020ರಲ್ಲಿ ನಿರೀಕ್ಷಿತ ಸಾಫ್ಟ್ ವೇರ್‌ ರಫ್ತು: 11.06 ಲಕ್ಷ ಕೋ.ರೂ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.