ವಿದೇಶಿ ಸಾಂಸ್ಥಿಕ ಹೂಡಿಕೆ ಹೆಚ್ಚಳದ ಎಫೆಕ್ಟ್: ಹೊಸ ಎತ್ತರಕ್ಕೆ ಏರಿದ ಸೆನ್ಸೆಕ್ಸ್‌, ನಿಫ್ಟಿ

ವಾರದಲ್ಲಿ 861.68 ಅಂಕ ಏರಿಕೆ ಬಿಎಸ್‌ಇ ಸೆನ್ಸೆಕ್ಸ್‌

Team Udayavani, Dec 19, 2020, 5:42 AM IST

Sensex

ಮುಂಬೈ: ವಿದೇಶಿ ಸಾಂಸ್ಥಿಕ ಹೂಡಿಕೆಯ ಹರಿವು ಈ ವಾರವಿಡೀ ಷೇರು ಪೇಟೆಯನ್ನು ಸಂಭ್ರಮದಲ್ಲಿರಿಸಿದೆ. ಶುಕ್ರವಾರವೂ ಹೂಡಿಕೆದಾರರು ಭಾರೀ ಆಸಕ್ತಿಯಿಂದ ಷೇರುಗಳ ಖರೀದಿಯಲ್ಲಿ ತೊಡಗಿದ ಪರಿಣಾಮ, ಬಿಎಸ್‌ಇ ಮತ್ತು ನಿಫ್ಟಿ ಹೊಸ ಎತ್ತರಕ್ಕೆ ಏರಿ, ದಾಖಲೆ ನಿರ್ಮಿಸಿವೆ. ಷೇರುಪೇಟೆಯ ನಾಗಾಲೋಟ ಹೀಗಿಯೇ ಮುಂದು ವರಿದರೆ ಕೆಲವೇ ದಿನಗಳಲ್ಲಿ ಸೆನ್ಸೆಕ್ಸ್‌ 50 ಸಾವಿರದ ಗಡಿ ದಾಟುವ ನಿರೀಕ್ಷೆಯಿದೆ.

ಆರಂಭಿಕ ವಹಿವಾಟಿನಲ್ಲಿ ಷೇರುಗಳ ಖರೀದಿ ಭಾರೀ ಪ್ರಮಾಣದಲ್ಲಿ ಹೆಚ್ಚಳ ವಾಗಿ, ನಂತರದಲ್ಲಿ ಸ್ವಲ್ಪಮಟ್ಟಿಗೆ ಉತ್ಸಾಹ ಕುಂಠಿತವಾಯಿತು. ಪರಿಣಾಮ, ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಶುಕ್ರವಾರ 70.35 ಅಂಕಗಳ ಏರಿಕೆ ಕಂಡು, ದಾಖಲೆಯ 46,960. 69ರಲ್ಲಿ ವಹಿವಾಟು ಅಂತ್ಯಗೊಳಿಸಿತು. ಒಂದು ಹಂತದಲ್ಲಿ ಇದು 47,026.02ಕ್ಕೆ ತಲುಪಿತ್ತು. ಇದೇ ವೇಳೆ, ನಿಫ್ಟಿ 19.85 ಅಂಕ ಏರಿಕೆಯಾಗಿ, 13,760.55ರಲ್ಲಿ ಕೊನೆಗೊಂಡಿತು. ಇದು ನಿಫ್ಟಿಯ ದಿನಾಂತ್ಯದ ದಾಖಲೆಯಾಗಿದೆ.

ಐಟಿ ಷೇರುಗಳು ಏರಿಕೆ: ಆ್ಯಕ್ಸೆಂಚರ್‌ನ ನಿರೀಕ್ಷೆಗೂ ಮೀರಿದ ಫ‌ಲಿತಾಂಶವು ಐಟಿ ಷೇರುಗಳ ಏರಿಕೆಗೆ ಕಾರಣವಾಯಿತು. ಇನ್ಫೋಸಿಸ್‌ ಷೇರುಗಳು ಶೇ.2.64ರಷ್ಟು ಏರಿಕೆ ದಾಖಲಿಸಿದರೆ, ಬಜಾಜ್‌ ಆಟೋ, ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌, ಎಚ್‌ಸಿಎಲ್‌ ಟೆಕ್‌, ಟೈಟಾನ್‌, ಏಷ್ಯನ್‌ ಪೈಂಟ್ಸ್‌ ಮತ್ತು ಟಿಸಿಎಸ್‌ ಕೂಡ ಭಾರೀ ಲಾಭ ಗಳಿಸಿದವು. ಇನ್ನೊಂದೆಡೆ, ಇಂಡಸ್‌ಇಂಡ್‌ ಬ್ಯಾಂಕ್‌, ಒಎನ್‌ಜಿಸಿ, ಎಚ್‌ಡಿಎಫ್ಸಿ ಬ್ಯಾಂಕ್‌, ಮಾರುತಿ, ಬಜಾಜ್‌ ಫಿನ್‌ಸರ್ವ್‌ ಮತ್ತು ಭಾರ್ತಿ ಏರ್‌ಟೆಲ್‌ ಷೇರುಗಳು ನಷ್ಟ ಅನುಭವಿಸಿದವು.

ಈ ವಾರದಲ್ಲಿ ಸೆನ್ಸೆಕ್ಸ್‌ 861.68 ಅಂಕ‌ ಏರಿಕೆ ಕಂಡರೆ, ನಿಫ್ಟಿ 246.70 ಅಂಕಗಳ ಏರಿಕೆ ದಾಖಲಿಸಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು 2,355.25 ಕೋಟಿ ರೂ. ಮೌಲ್ಯದ ಷೇರು ಖರೀದಿಸಿದ್ದಾರೆ.

ಚಿನ್ನದ ದರ ಏರಿಕೆ, ಬೆಳ್ಳಿ ಇಳಿಕೆ
ದೆಹಲಿ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ 21 ರೂ.ಗಳ ಅಲ್ಪ ಏರಿಕೆ ಕಂಡಿದ್ದು, 10 ಗ್ರಾಂಗೆ 49,644 ರೂ.ಗೆ ತಲುಪಿದೆ. ಆದರೆ, ಬೆಳ್ಳಿ ದರದಲ್ಲಿ 259 ರೂ. ಇಳಿಕೆಯಾಗಿ, 1 ಕೆಜಿಗೆ 66,784 ರೂ. ಆಗಿದೆ. ಇದೇ ವೇಳೆ, ಡಾಲರ್‌ ಎದುರು ರೂಪಾಯಿ ಮೌಲ್ಯ 3 ಪೈಸೆ ಏರಿಕೆಯಾಗಿ, 73.56 ತಲುಪಿದೆ.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.