- Saturday 07 Dec 2019
ದಾಖಲೆ ಎತ್ತರದಿಂದ ಹಿಂದೆ ಸರಿದ ಮುಂಬಯಿ ಶೇರು; ಸೆನ್ಸೆಕ್ಸ್ 383 ಅಂಕ ನಷ್ಟ
Team Udayavani, May 21, 2019, 4:38 PM IST
ಮುಂಬಯಿ : ನಿನ್ನೆ ಸೋಮವಾರ 1,421.90 ಅಂಕಗಳ ಮಹಾ ಜಿಗಿತವನ್ನು ಸಾಧಿಸಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ದಾಖಲೆಯ ಎತ್ತರದಿಂದ ಹಿಂದೆ ಸರಿದು ಇಂದು ಮಂಗಳವಾರದ ವಹಿವಾಟನ್ನು 382.87 ಅಂಕಗಳ ನಷ್ಟದೊಂದಿಗೆ 39,571.73 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ ಇಂದು 119.15 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,709.10 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಶೇರು ಪೇಟೆಯ ಇಂದಿನ ಹಿನ್ನಡೆಗೆ ವಹಿವಾಟುದಾರರು ಮತ್ತು ಹೂಡಿಕೆದಾರರಿಂದ ನಡೆದ ವ್ಯಾಪಕ ಲಾಭನಗದೀಕರಣದ ಶೇರು ಮಾರಾಟವೇ ಕಾರಣವೆಂದು ಪರಿಣತರು ಹೇಳಿದ್ದಾರೆ.
ಮತಗಟ್ಟೆ ಸಮೀಕ್ಷೆಯಲ್ಲಿ ಎನ್ಡಿಎ ಮರಳಿ ಅಧಿಕಾರಕ್ಕೆ ಬರುವುದೆಂಬ ಧನಾತ್ಮಕತೆಯನ್ನು ಮುಂಬಯಿ ಶೇರು ಪೇಟೆ ಈಗಾಗಲೇ ಭರಪೂರ ಮೈಗೂಡಿಸಿಕೊಂಡಿದ್ದು ಸೂಚ್ಯಂಕಗಳ ಇನ್ನಷ್ಟು ಏರಿಕೆ ಅಸಂಭವ ಎಂಬ ಅಭಿಪ್ರಾಯ ವ್ಯಕ್ತವಾಗಿರುವುದೇ ಇಂದಿನ ಹಿನ್ನಡೆಗೆ ಕಾರಣವೆಂದು ತಿಳಿಯಲಾಗಿದೆ.
ಇಂದಿನ ಅತೀ ದೊಡ್ಡ ಲೂಸರ್ ಟಾಟಾ ಮೋಟರ್ ಶೇ.7.05ರ ಕುಸಿತವನ್ನು ಕಂಡಿತು. ಉಳಿದಂತೆ ಮಾರುತಿ, ಇಂಡಸ್ ಇಂಡ್ ಬ್ಯಾಂಕ್, ಮಹೀಂದ್ರ, ಭಾರ್ತಿ ಏರ್ಟೆಲ್, ಎಸ್ಬಿಐ, ಪವರ್ ಗ್ರಿಡ್, ಹೀರೋ ಮೋಟೋ ಕಾರ್ಪ್, ಟಾಟಾ ಸ್ಟೀಲ್, ಐಸಿಐಸಿಐ ಬ್ಯಾಂಕ್, ಇನ್ಫೋಸಿಸ್, ಎಸ್ ಬ್ಯಾಂಕ್, ಟಿಸಿಎಸ್ ಶೇರುಗಳು ಶೇ.3.25ರ ಕುಸಿತವನ್ನು ಕಂಡವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,712 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 975 ಶೇರುಗಳು ಮುನ್ನಡೆ ಸಾಧಿಸಿದವು; 1,583 ಶೇರುಗಳು ಹಿನ್ನಡೆಗೆ ಗುರಿಯಾದವು; 154 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಈ ವಿಭಾಗದಿಂದ ಇನ್ನಷ್ಟು
-
ನವದೆಹಲಿ:ಏರ್ ಟೆಲ್ ಮತ್ತು ವೊಡಾಫೋನ್ ಸಂಸ್ಥೆಗಳು ಕರೆ ಮತ್ತು ಡೇಟಾ ಪ್ಯಾಕ್ ಗಳ ದರ ಏರಿಕೆ ಮಾಡಿದ ಬೆನ್ನಲ್ಲೇ ರಿಯಲನ್ಸ್ ಜಿಯೋ ಕೂಡಾ ಹೊಸ ದರದ ಪ್ಯಾಕೇಜ್ ಅನ್ನು...
-
ನಗದು ರಹಿತ ವಹಿವಾಟುಗಳಲ್ಲಿ ತೊಡಗಿಸಿಕೊಳ್ಳುವರ ಪ್ರಮಾಣ ಹೆಚ್ಚುತ್ತಿದ್ದು,ಹಣ ವರ್ಗಾವಣೆ, ಬಿಲ್ ಪಾವತಿ ಗಳನ್ನು ಕಾರ್ಡ್ ಅಥವಾ ಆ್ಯಪ್ಗ್ಳ ಮೂಲಕ ಮಾಡುತ್ತಿದ್ದಾರೆ....
-
ಹೊಸದಿಲ್ಲಿ: ಭಾರತದ ಕಾರು ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವ ಅಮೆರಿಕದ ಪ್ರಸಿದ್ಧ ಕಾರು ತಯಾರಿಕ ಕಂಪೆನಿ ಎಂಜಿ ಹೆಕ್ಟರ್ (ಮೋರಿಸ್ ಗ್ಯಾರೇಜಸ್) ಇದೀಗ...
-
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ ಹಣಕಾಸು ನೀತಿಯನ್ನು ಪ್ರಕಟಿಸಿದ್ದು, ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಘೋಷಿಸಿದೆ. ಅಲ್ಲದೇ...
-
ಮುಂಬಯಿ: ಆರ್ಬಿಐನ ತ್ತೈಮಾಸಿಕ ಸಾಲ ಪರಿಶೀಲನ ನೀತಿ ಸಮಿತಿ ಸಭೆ ಮುಂಬಯಿನಲ್ಲಿ ನಡೆಯುತ್ತಿದೆ. ಗುರುವಾರ ಸಭೆಯ ಕೊನೆಯ ದಿನವಾಗಿದ್ದು, ಸಾಲದ ಮೇಲಿನ ಬಡ್ಡಿ ದರ...
ಹೊಸ ಸೇರ್ಪಡೆ
-
ಮಂಗಳೂರು: ಕುಲಶೇಖರದಿಂದ ಮೂಡುಬಿದಿರೆ- ಕಾರ್ಕಳ ನಡುವಿನ ಸುಮಾರು 60 ಕಿ.ಮೀ. ದೂರದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಮತ್ತೂಮ್ಮೆ ಭೂಸ್ವಾಧೀನ ಪ್ರಕ್ರಿಯೆ...
-
ಕನ್ನಡ ದೃಶ್ಯ ಜಗತ್ತನ್ನು ಕಲಾತ್ಮಕವಾಗಿ ಶ್ರೀಮಂತಗೊಳಿಸಿದ ಕೆಲವೇ ಕೆಲವು ನಿರ್ದೇಶಕರ ಪೈಕಿ ಗಿರೀಶ್ ಕಾಸರವಳ್ಳಿ ಕೂಡ ಒಬ್ಬರು. ಚೊಚ್ಚಲ ನಿರ್ದೇಶನ, "ಘಟಶ್ರಾದ್ಧ'...
-
ಬೆಂಗಳೂರು: ರಾಜ್ಯಾದ್ಯಂತ ಅನುಷ್ಠಾನದಲ್ಲಿರುವ ಶುದ್ಧ ಕುಡಿಯುವ ನೀರು ಘಟಕಗಳ ಕಾರ್ಯನಿರ್ವಹಣೆ ಸಂಬಂಧ ಸೂಕ್ತ ನಿಯಮಾವಳಿ ರೂಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ....
-
ರಘುರಾಮನು ವನರಾಮನಾಗಿ ಆರಾಮದಿಂದ ಇದ್ದ ಸ್ಥಳವೇ ಚಿತ್ರಕೂಟ. ರಾಮ, ಲಕ್ಷ¾ಣ, ಸೀತೆಯರ ಚಿತ್ತಾಪಹಾರ ಮಾಡಿದ್ದ ಚಿತ್ರಕೂಟವು ಪ್ರವಾಸಿಗರ ಚಿತ್ತವನ್ನೂ ಅಪಹರಿಸುವಷ್ಟು...
-
ಮಂಗಳೂರು: ಪಾಶ್ಚಾತ್ಯ ಪ್ರಭಾವದಿಂದಾಗಿ ಭಾರತೀಯ ಸಂಗೀತವು ಸ್ವಲ್ಪ ಮಂಕಾಗಿ ಕಂಡರೂ ಮತ್ತೆ ಚಿಗುರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|...