ಎಲ್ಲೇ ಹೋದರೂ ಐಟಿಯವ್ರು ಬಿಡಲ್ಲ!


Team Udayavani, Dec 25, 2017, 6:00 AM IST

IT.jpg

ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆ ನೋಟಿಸ್‌ ತಲುಪಬಾರದು ಎಂದು ವಿಳಾಸ ಮರೆ ಮಾಚಿದ್ದೀರಾ? ಇದುವರೆಗೆ ಹಾಗೆ 
ಮಾಡಿ ತಪ್ಪಿಸಿಕೊಂಡು ಬಚಾವಾದವರಿಗೆ ಇನ್ನು ಕಷ್ಟ ಖಚಿತ. ನಿಗದಿತ ತೆರಿಗೆದಾರ ನೀಡಿದ ವಿಳಾಸ ಸರಿಯೋ ತಪ್ಪೋ ಎನ್ನುವುದನ್ನು ಆದಾಯ ತೆರಿಗೆ ಇಲಾಖೆ ಇತರ ಮೂಲಗಳಿಂದಲೂ ಖಚಿತಪಡಿಸಿ ಕೊಳ್ಳಬಹುದು. ಅದಕ್ಕೆ ಸಂಬಂಧಿಸಿದ ನಿಯಮ ಗಳನ್ನು ಕೇಂದ್ರ ಸರಕಾರ ಮಾರ್ಪಾಡು ಮಾಡಿ ಆದೇಶ ಹೊರಡಿಸಿದೆ. ಬ್ಯಾಂಕ್‌, ವಿಮೆ, ಅಂಚೆ ಕಚೇರಿ, ಸಹಕಾರ ಸಂಘಗಳು, ನಗರ ಸಭೆ, ಪುರಸಭೆ, ಮಹಾನಗರ ಪಾಲಿಕೆ ಸಹಿತ ಸ್ಥಳೀಯ ಸಂಸ್ಥೆಗಳ ಮೂಲಕ ವಿಳಾಸ ಖಚಿತ ಪಡಿಸಿಕೊಂಡು ನೋಟಿಸ್‌ ನೀಡುವಂಥ ಅವಕಾಶವನ್ನು ಕೇಂದ್ರ ಕಲ್ಪಿಸಿಕೊಟ್ಟಿದೆ.

ಸದ್ಯ ಇರುವ ನಿಯಮ ಪ್ರಕಾರ, ಪಾನ್‌ ಕಾರ್ಡ್‌ ನಲ್ಲಿರುವ ವಿಳಾಸಕ್ಕೆ ಮಾತ್ರ ತೆರಿಗೆ ತಪ್ಪಿಸಿದ ಬಗ್ಗೆ ಪ್ರಶ್ನೆ ಮಾಡಿ ನೋಟಿಸ್‌ ನೀಡಲಾಗುತ್ತಿತ್ತು. ಹೆಚ್ಚಿನ ಸಂದರ್ಭಗಳಲ್ಲಿ ಪಾನ್‌ನಲ್ಲಿರುವ ವಿಳಾಸಕ್ಕೂ ತೆರಿಗೆದಾರ ವಾಸವಾಗಿರುವ ವಿಳಾಸಕ್ಕೂ ವ್ಯತ್ಯಾಸ ಇರುತ್ತಿತ್ತು. ಹೀಗಾಗಿ ನೋಟಿಸ್‌ ನೀಡಿದರೂ ಅದು ತಪ್ಪಿತಸ್ಥರಿಗೆ ತಲುಪುತ್ತಿರಲಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ತೆರಿಗೆ ಇಲಾಖೆ ಹಿರಿಯ ಅಧಿಕಾರಿ, “ಕೆಲವು ಬಾರಿ ತೆರಿಗೆದಾರ ನಿಜವಾದ ಕಾರಣದಿಂದ ವಿಳಾಸ ಬದಲಿಸಿರುವ ಸಾಧ್ಯತೆ ಇರುತ್ತದೆ ಅಥವಾ ನೋಟಿಸ್‌ನಿಂದ ತಪ್ಪಿಸಿಕೊಳ್ಳಲು ಸುಳ್ಳು ವಿಳಾಸ ನೀಡಿರಬಹುದು. ಹೀಗಾಗಿ ಅಂಥವರ ಪತ್ತೆ ನಿಯಮ ಗಳಲ್ಲಿ ಬದಲು ಮಾಡಲು ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.

ಡಿ.20ರಂದು ಈ ಬಗ್ಗೆ ನಿರ್ಧಾರ ಕೈಗೊಂಡು ಪ್ರಕಟನೆ ಹೊರಡಿಸಲಾಗಿದೆ ಎಂದಿದ್ದಾರೆ ಅವರು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡ್ರೈವಿಂಗ್‌ ಲೈಸನ್ಸ್‌, ಮತದಾರರ ಗುರುತಿನ ಚೀಟಿಯಲ್ಲಿನ ವಿಳಾಸಗಳ ಮೂಲಕವೂ ನೋಟಿಸ್‌ ನೀಡಲು ವಿಳಾಸ ಪತ್ತೆಹಚ್ಚುವಂಥ ನಿಯಮ ಇದಾಗಿದೆ.

ಏಕೆ ಇಂಥ ನಿಯಮ?
ತೆರಿಗೆ ವಂಚನೆ ಮಾಡುವವರ ಕೈಯಿಂದ ಕೋಟ್ಯಂತರ ರೂ. ಮೌಲ್ಯದ ಮೊತ್ತ ಬಾಕಿ ಇರುತ್ತದೆ. ಅಂಥವರ ವಿರುದ್ಧ  ಕ್ರಮ ಕೈಗೊಳ್ಳಲು ನಿಜವಾದ ವಿಳಾಸ ಪತ್ತೆ ಹಚ್ಚುವ ಅಗತ್ಯವಿರುತ್ತದೆ. ಹೀಗಾಗಿ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ. ಹೊಸ ಕ್ರಮದಿಂದ ಇಲಾಖೆಗೆ ನಿಜವಾಗಿಯೂ ತೆರಿಗೆದಾರ ತಪ್ಪಿಸಿ ಕೊಳ್ಳಲು ಮುಂದಾಗಿದ್ದರೆ ಆತನನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಹೆಚ್ಚಿನ ಅಧಿಕಾರ ಇರುತ್ತದೆ. ಈ ಮೂಲಕ ಕೇಂದ್ರದ ಬೊಕ್ಕಸಕ್ಕೆ ನಷ್ಟವಾಗುವುದನ್ನೂ ತಪ್ಪಿಸಬಹುದಾಗಿದೆ.

ಟಾಪ್ ನ್ಯೂಸ್

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.