‘ನಮ್ಮ ಶಾಲೆ ನನ್ನ ಕೊಡುಗೆ’ ಯೋಜನೆಗೆ ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಡಿಜಿಟಲ್ ಪಾವತಿ ಸೌಲಭ್ಯ
Team Udayavani, Sep 11, 2021, 12:40 PM IST
ಬೆಂಗಳೂರು: ತನ್ನ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳ ಶ್ರೇಣಿಯನ್ನು ವಿಸ್ತರಿಸುತ್ತಿರುವ ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಕರ್ನಾಟಕ ರಾಜ್ಯ ಸರ್ಕಾರದ ‘ನಮ್ಮ ಶಾಲೆ – ನನ್ನ ಕೊಡುಗೆ’ ಯೋಜನೆಗೆ ಪಾವತಿ ಸೇವೆ ಒದಗಿಸಲಿದೆ.
ಕರ್ನಾಟಕದಲ್ಲಿನ ಯಾವುದೇ ಸರ್ಕಾರಿ ಶಾಲೆಗೆ ಧನ ಸಹಾಯ ಮಾಡಲು ಬಯಸುವ ದಾನಿಗಳಿಗೆ, ‘ನಮ್ಮ ಶಾಲೆ – ನನ್ನ ಕೊಡುಗೆ’ಯೋಜನೆ ಪಾವತಿ ಸೌಲಭ್ಯ ಒದಗಿಸುವ ಗುರಿ ಹೊಂದಿದೆ. ವಿಧಾನಸೌಧದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕಾರ್ಯಕ್ರಮವನ್ನು ಔಪಚಾರಿಕವಾಗಿ ಉದ್ಘಾಟಿಸಿದರು. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ ಅನ್ಬು ಕುಮಾರ್, ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅಜಯ್ ಕನ್ವಲ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.
‘ನಮ್ಮ ಶಾಲೆ – ನನ್ನ ಕೊಡುಗೆ’ಕಾರ್ಯಕ್ರಮವು ಸಾರ್ವಜನಿಕರು, ಶಾಲೆಗಳ ಹಳೆಯ ವಿದ್ಯಾರ್ಥಿಗಳು ಮತ್ತು ಜನರಲ್ಲಿ ಶಾಲೆಯ ಮಾಲೀಕತ್ವದ ಪ್ರಜ್ಞೆಯನ್ನು ಬೆಳೆಸುವ ಮತ್ತು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಉದಾತ್ತ ಉದ್ದೇಶ ಹೊಂದಿದೆ. ಈ ಕಾರ್ಯಕ್ರಮದ ಪ್ರಕಾರ, ದಾನಿಗಳಿಂದ ಪಡೆಯುವ ದೇಣಿಗೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ [ಕೆಎಸ್ಡಿಪಿಐ] ಕರ್ನಾಟಕ ಪಠ್ಯಪುಸ್ತಕ ಸೊಸೈಟಿಯ ಒಂದೇ ಖಾತೆಯಲ್ಲಿ ಸ್ವೀಕರಿಸಲಾಗುತ್ತದೆ. ನಂತರ ಅದನ್ನು ಸಂಬಂಧಿಸಿದ ಶಾಲೆಯ ಖಾತೆಗೆ ವರ್ಗಾಯಿಸಲಾಗುವುದು.
ಇದನ್ನೂ ಓದಿ:ಸ್ಥಳೀಯ ಅರ್ಥಿಕತೆಗೆ ನೆರವು; ಸುಸ್ಥಿರ ಜೀವನ ನಡೆಸಲು 5 ಸರಳ ವಿಧಾನಗಳು
ಈ ಪಾಲುದಾರಿಕೆಯ ನೆರವಿನಿಂದ, ದಾನಿಗಳು ತಮ್ಮ ದೇಣಿಗೆಗಳನ್ನು ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್ನ (ಜನ ಎಸ್ಎಫ್ಬಿ) ಆರ್ಟಿಜಿಎಸ್, ಎನ್ಇಎಫ್ಟಿ, ಯುಪಿಐ, ಐಎಂಪಿಎಸ್, ಡೆಬಿಟ್ ಕಾರ್ಡ್, ಎನ್ಎಸಿಎಚ್ ಮುಂತಾದ ಸೌಲಭ್ಯಗಳನ್ನು ಬಳಸಿಕೊಂಡು ಸುಲಭವಾಗಿ ಪಾವತಿಸಬಹುದು. ಕರ್ನಾಟಕದಲ್ಲಿ ಐದು ಲಕ್ಷ ಗ್ರಾಹಕರಿಗೆ ಸೇವೆ ಒದಗಿಸುತ್ತಿರುವ ಜನ ಎಸ್ಎಫ್ಬಿ, ಇದಕ್ಕೆ ಪೂರಕವಾಗಿ ತನ್ನ ವಿಶಾಲವಾದ ಜಾಲದ ನೆರವಿನಿಂದ ದಾನಿಗಳು ಕರ್ನಾಟಕದಾದ್ಯಂತ ಹೆಚ್ಚಿನ ಸಂಖ್ಯೆಯ ಸರ್ಕಾರಿ ಶಾಲೆಗಳನ್ನು ತಲುಪಲು ಅನುವು ಮಾಡಿಕೊಡುತ್ತದೆ. ದಾನಿಗಳ ಯಾವುದೇ ತಾಂತ್ರಿಕ ಮತ್ತು ಕಾರ್ಯಾಚರಣೆಯ ಪ್ರಶ್ನೆಗಳನ್ನು ಪರಿಹರಿಸಲು ಬ್ಯಾಂಕ್, ದಿನದ 24 ಗಂಟೆಗಳ ಕಾಲ (24 x 7) ಕಾರ್ಯನಿರ್ವಹಿಸುವ ದೂರು ಪರಿಹರಿಸುವ ಸೌಲಭ್ಯವನ್ನು ಅಭಿವೃದ್ಧಿಪಡಿಸಿದೆ.
ಮಾರಗೊಂಡನಹಳ್ಳಿಯ ಜಿಎಚ್ಎಸ್ ಕಾಂಪೊಸಿಟ್ ಶಾಲೆಯಲ್ಲಿ ಆರ್ಒ ನೀರಿನ ಘಟಕ ಸ್ಥಾಪಿಸುವುದಕ್ಕೆ ನೆರವಾಗಲು ಜನ ಎಸ್ಎಫ್ಬಿ ಸಿಇಒ ಅಜಯ್ ಕನ್ವಲ್ ಮುಖ್ಯಮಂತ್ರಿಗಳಿಗೆ ದೇಣಿಗೆಯ ಚೆಕ್ ಅನ್ನು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್