ಕಿಸಾನ್‌ ವಿಕಾಸ್‌ ಪತ್ರ ಯೋಜನೆ; ದೀರ್ಘ‌ ಅವಧಿಯ ಹೂಡಿಕೆಗೆ ಸುರಕ್ಷಿತ


Team Udayavani, Oct 11, 2020, 6:20 AM IST

ಕಿಸಾನ್‌ ವಿಕಾಸ್‌ ಪತ್ರ ಯೋಜನೆ; ದೀರ್ಘ‌ ಅವಧಿಯ ಹೂಡಿಕೆಗೆ ಸುರಕ್ಷಿತ

ಸಾಂದರ್ಭಿಕ ಚಿತ್ರ

ಮಣಿಪಾಲ: ಭಾರತೀಯ ಅಂಚೆ ಇಲಾಖೆ ಜನರಿಗೆ ವಿವಿಧ ಉಳಿತಾಯ ಯೋಜನೆಗಳನ್ನು ನೀಡುತ್ತಿದ್ದು ಕಿಸಾನ್‌ ವಿಕಾಸ್‌ ಪತ್ರ ಅವುಗಳಲ್ಲಿ ಪ್ರಮುಖವಾದುದು. ಅಂಚೆ ಕಚೇರಿಯ ಬೇರೆ ಉಳಿತಾಯ ಯೋಜನೆಗಳಿಗಿಂತ ಇದರಲ್ಲಿ ಬಡ್ಡಿಮೊತ್ತ ಕಡಿಮೆಯಾದರೂ ಕೂಡ ದೀರ್ಘಾವಧಿಯಲ್ಲಿ ಹಣ ಹೂಡಿಕೆ ಮಾಡಲು ಯೋಚಿಸುತ್ತಿರುವವರಿಗೆ ಇದು ಸುರಕ್ಷಿತವಾದ ಆಯ್ಕೆಯಾಗಿದೆ.

ಸಾಮಾನ್ಯ ಜನರಲ್ಲಿ ಉಳಿತಾಯ ಮನೋಭಾವವನ್ನು ಉತ್ತೇಜಿಸುವ ಉದ್ದೇಶದೊಂದಿಗೆ ಕಿಸಾನ್‌ ವಿಕಾಸ್‌ ಪತ್ರ ಯೋಜನೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಸಣ್ಣ ಮಟ್ಟದ ಉಳಿತಾಯದಿಂದ ಜನರು ದ್ವಿಗುಣ ಲಾಭ ಪಡೆಯಬಹುದು. ಇದು ಸರಕಾರ ಬೆಂಬಲಿತ ಯೋಜನೆಯಾಗಿದ್ದು, ಹೆಚ್ಚು ಸುರಕ್ಷಿತ ಕೂಡ. ಅಂಚೆ ಕಚೇರಿಯಲ್ಲಿ ಚಾಲ್ತಿಯಲ್ಲಿರುವ ಈ ಸೇವೆ ಬಗ್ಗೆ ಅನೇಕರಿಗೆ ಅರಿವಿಲ್ಲ. 1988ರಲ್ಲಿಯೇ ಈ ಯೋಜನೆ ಜಾರಿಗೆ ಬಂದಿತ್ತು. 2011ರಲ್ಲಿ ಸ್ಥಗಿತಗೊಂಡಿತಾದರೂ ಇದರ ಮಹತ್ವ ಅರಿತ ಸಮಿತಿಗಳು ಇದನ್ನು ಮತ್ತೆ ಜಾರಿಗೆ ತರುವಂತೆ ಶಿಫಾರಸು ಮಾಡಿದವು. ಇದರ ಪರಿಣಾಮ 2014ರಿಂದ ಈ ಯೋಜನೆ ಮತ್ತೆ ಚಾಲ್ತಿಗೆ ಬಂದಿತು.

ಶೇ. 6.9ರಷ್ಟು ಬಡ್ಡಿ ದರ
ತ್ತೈಮಾಸಿಕ ಹಣಕಾಸಿನ ಆಧಾರದ ಮೇಲೆ ಈ ಉಳಿತಾಯಕ್ಕೆ ಬಡ್ಡಿದರವನ್ನು ಹಣಕಾಸು ಇಲಾಖೆ ಅನುಸರಿಸುತ್ತದೆ. ಸದ್ಯ ಈ ಉಳಿತಾಯ ಖಾತೆ ಹೊಂದುವವರು ಶೇ.6.9ರಷ್ಟು ಬಡ್ಡಿಯನ್ನು ಪಡೆಯಬಹುದು. ಜಂಟಿಯಾಗಿ ಖಾತೆ ತೆರೆಯಬಹುದು 18 ವರ್ಷ ಮೇಲ್ಪಟ್ಟ ಯಾವುದೇ ಭಾರತೀಯ ಪ್ರಜೆ ಕಿಸಾನ್‌ ವಿಕಾಸ್‌ ಪ್ರಮಾಣ ಪತ್ರ ಪಡೆಯಬಹುದು. ಇಬ್ಬರು ವಯಸ್ಕರು ಜಂಟಿಯಾಗಿ ಮಾಡಿಸಬಹುದು. ಜತೆಗೆ 18 ವರ್ಷಕ್ಕಿಂತ ಕೆಳ ಹರೆಯದವರ ಪರವಾಗಿ ಹೆತ್ತವರು ಅಥವಾ ಪೋಷಕರು ಅದರ ಜವಾಬ್ದಾರರಾಗಿರುತ್ತಾರೆ.

ಕನಿಷ್ಠ 1 ಸಾವಿರ ಹೂಡಿಕೆ
ಇದರಲ್ಲಿ ಕನಿಷ್ಠ 1,000 ರೂ.ಗಳಿಂದ ಎಷ್ಟಾದರೂ ಹಣ ಉಳಿತಾಯ ಮಾಡಬಹುದು. ಗರಿಷ್ಠ ಮೊತ್ತಕ್ಕೆ ಮಿತಿ ಇಲ್ಲ. ಜತೆಗೆ ಹೂಡಿಕೆ ಮಾಡಿದ ಮೊತ್ತ ಮೆಚ್ಯುರಿಟಿಗೆ ಬರಲು 10 ವರ್ಷ 4 (124)ತಿಂಗಳುಗಳು ಬೇಕಾಗಿದ್ದು , ಅಗತ್ಯಬಿದ್ದರೆ ಯೋಜನೆ ಪ್ರಾರಂಭಿಸಿದ ದಿನಾಂಕದಿಂದ ಎರಡು ಅಥವಾ ಒಂದೂವರೆ ವರ್ಷದಲ್ಲಿ ಹಣ ಹಿಂಪಡೆಯಬಹುದು. ಇದಕ್ಕೆ ನಾಮ ನಿರ್ದೇಶನ ಮಾಡುವ ಆಯ್ಕೆ ಇದ್ದು, ವ್ಯಕ್ತಿಯೊಬ್ಬರು ಕುಟುಂಬದ ಇತರ ವ್ಯಕ್ತಿಗಳಿಗೆ ಕೂಡ ನಾಮ ನಿರ್ದೇಶನ ಮಾಡಬಹುದಾಗಿದೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.