ಭರ್ಜರಿ ವಹಿವಾಟು: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 453 ಅಂಕ ಏರಿಕೆ, ನಿಫ್ಟಿ ಚೇತರಿಕೆ
ದಿನಾಂತ್ಯದ ವಹಿವಾಟಿನಲ್ಲಿ 452.73 ಅಂಕಗಳಷ್ಟು ಏರಿಕೆಯೊಂದಿಗೆ 46,006.69 ಅಂಕಗಳೊಂದಿಗೆ ಕೊನೆಗೊಂಡಿದೆ
Team Udayavani, Dec 22, 2020, 6:11 PM IST
ಮುಂಬೈ: ಕೋವಿಡ್ ವೈರಸ್ ನ ಭಿನ್ನ ಸ್ವರೂಪ ಪತ್ತೆಯಾಗಿದ್ದ ಪರಿಣಾಮ ಷೇರುಪೇಟೆಯ ಮಾರುಕಟ್ಟೆಯಲ್ಲೂ ಸಂಚಲನ ಮೂಡಿಸಿದ್ದು ಭಾರೀ ಕುಸಿತ ಕಂಡಿದ್ದ ಮುಂಬೈ ಷೇರುಪೇಟೆ ವಹಿವಾಟು ಮಂಗಳವಾರ(ಡಿಸೆಂಬರ್ 22, 2020) ಸೆನ್ಸೆಕ್ಸ್ ಸೂಚ್ಯಂಕ 453 ಅಂಕಗಳಷ್ಟು ಏರಿಕೆಯೊಂದಿಗೆ ವಹಿವಾಟು ಕೊನೆಗೊಳಿಸಿದೆ.
ಮಾಹಿತಿ ತಂತ್ರಜ್ಞಾನ ಮತ್ತು ಬ್ಯಾಂಕಿಂಗ್ ವಲಯದ ಶೇರು ಭರ್ಜರಿ ವಹಿವಾಟು ನಡೆಸಿದ ಪರಿಣಾಮ ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ದಿನಾಂತ್ಯದ ವಹಿವಾಟಿನಲ್ಲಿ 452.73 ಅಂಕಗಳಷ್ಟು ಏರಿಕೆಯೊಂದಿಗೆ 46,006.69 ಅಂಕಗಳೊಂದಿಗೆ ಕೊನೆಗೊಂಡಿದೆ.
ಷೇರುಪೇಟೆ ಸಂವೇದಿ ಸೂಚ್ಯಂಕದ ಏರಿಕೆ ಜತೆಗೆ ನಿಫ್ಟಿ ಕೂಡಾ 137.90 ಅಂಕಗಳಷ್ಟು ಏರಿಕೆಯೊಂದಿಗೆ 13,466.30 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಂಡಿರುವುದಾಗಿ ಮಾರುಕಟ್ಟೆ ವರದಿ ತಿಳಿಸಿದೆ.
ಭರ್ಜರಿ ಷೇರು ವಹಿವಾಟಿನ ಪರಿಣಾಮ ಎಚ್ ಸಿಎಲ್ ಟೆಕ್, ಟೆಕ್ ಮಹೀಂದ್ರ, ಇನ್ಫೋಸಿಸ್, ಪವರ್ ಗ್ರಿಡ್, ಸನ್ ಫಾರ್ಮಾ, ನೆಸ್ಲೆ, ಎಲ್ ಟಿ, ಟೈಟಾನ್, ಭಾರ್ತಿ ಏರ್ ಟೆಲ್, ಏಷಿಯನ್ ಪೆಯಿಂಟ್, ಟಿಸಿಎಸ್ ಷೇರುಗಳು ಶೇ.5.09ರಷ್ಟು ಏರಿಕೆ ಕಂಡು ಲಾಭ ಗಳಿಸಿವೆ.
ಮತ್ತೊಂದೆಡೆ ಕೋಟಕ್ ಬ್ಯಾಂಕ್, ಬಜಾಜ್ ಫೈನಾನ್ಸ್, ಎಚ್ ಡಿಎಫ್ ಸಿ, ರಿಲಯನ್ಸ್ ಇಂಡಿಯಾ ಲಿಮಿಟೆಡ್ ಮತ್ತು ಇಂಡಸ್ ಲ್ಯಾಂಡ್ ಬ್ಯಾಂಕ್ ಷೇರು ಕುಸಿತ ಕಂಡು ನಷ್ಟ ಅನುಭವಿಸಿದೆ.
ಬ್ರಿಟನ್ ನಲ್ಲಿ ಕೊರೊನಾವೈರಸ್ನ ಭಿನ್ನ ಸ್ವರೂಪ ಪತ್ತೆಯಾಗಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ. ಅಲ್ಲದೆ, ಮುಂದಿನ ವರ್ಷ ಆರ್ಥಿಕ ಚೇತರಿಕೆಯಾಗಬಹುದು ಎಂಬ ನಿರೀಕ್ಷೆಯ ಮೇಲೆ ದಟ್ಟ ಕಾರ್ಮೋಡ ಕವಿಯುವಂತೆ ಮಾಡಿತ್ತು.
ಈ ಎಲ್ಲ ಭೀತಿಗಳಿಂದಾಗಿ ಹೂಡಿಕೆದಾರರು ಸೋಮವಾರ ಒಂದೇ ಸಮನೆ ಷೇರುಗಳ ಮಾರಾಟದಲ್ಲಿ ತೊಡಗಿಸಿಕೊಂಡ ಪರಿಣಾಮ, ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಬರೋಬ್ಬರಿ 1407 ಅಂಕಗಳ ಕುಸಿತ ದಾಖಲಿಸಿ, ದಿನಾಂತ್ಯಕ್ಕೆ 45,553.96ರಲ್ಲಿ ಕೊನೆಗೊಂಡಿತ್ತು.
ನಿಫ್ಟಿ ಕೂಡ 432.15 ಅಂಕ ಕುಸಿದು, 13,328.40ರಲ್ಲಿ ವಹಿವಾಟು ಅಂತ್ಯಗೊಳಿಸಿದ್ದು. ಒಎನ್ಜಿಸಿ ಷೇರುಗಳು ಶೇ.9.15ರಷ್ಟು ಕುಸಿದು ಭಾರೀ ನಷ್ಟ ಅನುಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!