ರಾಜ್ಯದಲ್ಲಿ ಹೆಚ್ಚುತ್ತಿದೆ ಸಿರಿಧಾನ್ಯ ಬಿತ್ತನೆ ; ರೈತ ಸಿರಿ ಯೋಜನೆ, ಆರೋಗ್ಯ ಕಾಳಜಿ ಪ್ರಭಾವ
Team Udayavani, Sep 1, 2020, 6:54 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಕೋವಿಡ್ 19ನಿಂದ ಉದ್ಯೋಗ ಕಳೆದುಕೊಂಡ ಯುವಜನರು ಗ್ರಾಮೀಣ ಪ್ರದೇಶಕ್ಕೆ ತೆರಳಿದ ಪರಿಣಾಮ ಬಿತ್ತನೆ ಪ್ರಮಾಣ ಹೆಚ್ಚಾಗುತ್ತಿದೆ. ಅದರಲ್ಲೂ ಸಿರಿಧಾನ್ಯ ಬಿತ್ತನೆ ಗಣನೀಯವಾಗಿ ಹೆಚ್ಚಿದೆ.
ರಾಜ್ಯ ಸರಕಾರವು 2017ರಲ್ಲಿ ದೇಶದಲ್ಲೇ ಪ್ರಥಮ ಬಾರಿಗೆ ‘ಸಿರಿಧಾನ್ಯ ನೀತಿ’ ಜಾರಿಗೆ ತಂದ ಪರಿಣಾಮ ಮತ್ತು ಕಳೆದ ವರ್ಷ ಜಾರಿಗೆ ತಂದಿರುವ ‘ರೈತ ಸಿರಿ’ ಯೋಜನೆಯಿಂದ ರಾಗಿ ಸಹಿತ ಸಿರಿಧಾನ್ಯ ಬಿತ್ತನೆ ಹೆಚ್ಚುತ್ತಿದೆ.
ಸಜ್ಜೆ, ನವಣೆ, ಅರ್ಕ, ಬರಗು, ಬಿತ್ತನೆ 5 ವರ್ಷಗಳಲ್ಲಿ 2 ಪಟ್ಟು ಹೆಚ್ಚಿದೆ.
ಲಕ್ಷ ಹೆಕ್ಟೇರ್ ಹೆಚ್ಚಳ
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸುಮಾರು 1 ಲಕ್ಷ ಹೆ. ಪ್ರದೇಶದಲ್ಲಿ ಹೆಚ್ಚುವರಿಯಾಗಿ ಸಿರಿಧಾನ್ಯ ಬಿತ್ತನೆಯಾಗಿದೆ.
ಕಳೆದ ವರ್ಷ 18.26 ಲಕ್ಷ ಹೆಕ್ಟೇರ್ಗಳಲ್ಲಿ ಆಗಿದ್ದರೆ ಈ ವರ್ಷ ಇದು 19.54 ಲಕ್ಷ ಹೆಕ್ಟೇರ್ಗೇರಿದೆ. ಬಯಲು ಸೀಮೆಯ ಚಿತ್ರದುರ್ಗ, ತುಮಕೂರು, ಹಾವೇರಿ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಾಮರಾಜನಗರ, ರಾಯಚೂರು ಜಿಲ್ಲೆಗಳಲ್ಲಿ ಸಿರಿಧಾನ್ಯ ಬಿತ್ತನೆಗೆ ಹೆಚ್ಚಿನ ಬೇಡಿಕೆ ಇದೆ. ಆರೋಗ್ಯ ಕಾರಣಕ್ಕಾಗಿ ಗ್ರಾಹಕರಿಂದಲೂ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ.
ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಸಿರಿಧಾನ್ಯ ಉತ್ಪನ್ನಗಳನ್ನು ಬಿಸಿಯೂಟ ಮುಂತಾದ ಕಾರ್ಯಕ್ರಮಗಳಡಿ ಬಳಸುವ ಚಿಂತನೆ ನಡೆಸಲಾಗಿದೆ.
– ಬಿ.ಸಿ. ಪಾಟೀಲ್, ಕೃಷಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ