ಮಧ್ಯಮ ವರ್ಗದ ಸಾರಥಿ ನ್ಯಾನೋಗೆ ಸದ್ಯದಲ್ಲೇ “ಟಾಟಾ’?


Team Udayavani, Feb 6, 2017, 3:45 AM IST

nano.jpg

ಮುಂಬಯಿ: ಮಧ್ಯಮ ವರ್ಗದ ಕನಸಿನ ಕಾರು “ನ್ಯಾನೋ’ ಇನ್ನು ರಸ್ತೆಗಿಳಿಯುವುದೇ ಅನುಮಾನ! ಟಾಟಾ ಮೋಟರ್ಸ್‌ ಇದರ ಉತ್ಪಾದನೆಯನ್ನು ನಿಲ್ಲಿಸಲು ಚಿಂತಿಸಿದ್ದು, ಇದರ ಬದಲಾಗಿ ಹೊಸ ಮಾದರಿಯ ಪ್ರಯಾಣ ಸ್ನೇಹಿ ಕಾರನ್ನು ಮಾರುಕಟ್ಟೆಗೆ ಬಿಡಲು ವೇದಿಕೆ ಸಿದ್ಧವಾಗುತ್ತಿದೆ. ಈ ಮೂಲಕ ನ್ಯಾನೋ ತನ್ನ ಒಂಬತ್ತು ವರ್ಷದ ಪ್ರಯಾಣಕ್ಕೆ ಅಂತ್ಯ ಹಾಡಲಿದೆ.

ಕಾರಣ ಏನು?:
ನ್ಯಾನೋ ಕುರಿತು ಮಾರುಕಟ್ಟೆಯಲ್ಲಿನ ಮಿಶ್ರ ಪ್ರತಿಕ್ರಿಯೆಗಳನ್ನು ಸಂಸ್ಥೆ ಗಂಭೀರವಾಗಿ ಪರಿಗಣಿಸಿದೆ. ಅಗ್ಗದ ಕಾರು ಎಂಬ ಮೆಚ್ಚುಗೆ ಇದಕ್ಕೆ ಇದೆಯಾದರೂ ರಕ್ಷಣೆ, ಅಸ್ಥಿರತೆ, ಸ್ಥಳಾವಕಾಶದ ಕೊರತೆ, ದುರ್ಬಲ ಮಾದರಿಗಳ ಪರಿಷ್ಕರಣೆಗೆ ಸಂಸ್ಥೆಯ ಉನ್ನತ ಅಧಿಕಾರಿಗಳು ಚಿಂತಿಸಿದ್ದಾರೆ. ಅಲ್ಲದೆ, ಈ 9 ವರ್ಷಗಳಲ್ಲಿ ನ್ಯಾನೋ ಉತ್ಪನ್ನದಿಂದ 1000 ಕೋಟಿ ರೂಪಾಯಿ ನಷ್ಟವಾಗಿದೆ ಎಂಬ ಮಾಹಿತಿಯಿದೆ.

ಬೇಡಿಕೆ ಕುಸಿತ: 
 2016ರ ಎಪ್ರಿಲ್‌- ಡಿಸೆಂಬರ್‌ ಅವಧಿಯಲ್ಲಿ ದೇಶಾದ್ಯಂತ ಮಾರಾಟಗೊಂಡ ನ್ಯಾನೋ ಕಾರುಗಳ ಸಂಖ್ಯೆ ಕೇವಲ 6,714! ಒಂದು ವರ್ಷದ ಹಿಂದೆ, ಅಂದರೆ 2015ರ ಅದೇ ಅವಧಿಯಲ್ಲಿ 17,258 ಕಾರುಗಳು ಮಾರಾಟ ಗೊಂಡಿದ್ದವು. ಮಾರುಕಟ್ಟೆಯಲ್ಲಿ ಶೇ.61 ಕುಸಿತ ಕಂಡಿದ್ದರಿಂದ ನ್ಯಾನೋ ಉತ್ಪಾದನೆಯನ್ನು ನಿಲ್ಲಿಸುವ ನಿರ್ಧಾರಕ್ಕೆ ಬರಲಾಗಿದೆ.

ಕಾರಿನ ಆರಂಭಿಕ ಬೆಲೆ (ಟಾಟಾ ನ್ಯಾನೋ ಜೆನ್‌ಎಕ್ಸ್‌) 2.06 ಲಕ್ಷ ರೂಪಾಯಿ ಇದ್ದು, 3 ಲಕ್ಷ ರೂಪಾಯಿಯ ಒಳಗೆ ಇನ್ನೂ ಕೆಲವು ಮಾದರಿಗಳನ್ನು ಸಂಸ್ಥೆ ಪರಿಚಯಿಸಿತ್ತು. ಇವುಗಳ ಬೆಲೆ ಏರಿಸಿದರೂ ಮಾರಾಟದಲ್ಲಿ ಇನ್ನಷ್ಟು ಕುಸಿತ ಕಾಣಬಹುದು ಎಂದು ಅಂದಾಜಿಸಲಾಗಿದೆ.

ರತನ್‌ಗೆ ಪಾಠ: ಟಾಟಾ ಸಂಸ್ಥೆಯ ಮುಖ್ಯಸ್ಥ ರತನ್‌ ಟಾಟಾ ಅವರ ಕನಸಿನ ಕೂಸು ನ್ಯಾನೋ. 2009ರಲ್ಲಿ ಇವರ ನೇತೃತ್ವದಲ್ಲಿಯೇ ಈ ಕಾರುಗಳು ಮಾರುಕಟ್ಟೆಯನ್ನು ಪ್ರವೇಶಿಸಿ, ಜನಪ್ರಿಯತೆ ಗಳಿಸಿದ್ದವು. ಆದರೆ, ಇದರ ತಯಾರಿಕೆಯಿಂದ ಆಗುತ್ತಿರುವ ನಷ್ಟವನ್ನು ಟಾಟಾ ಸಮೂಹದ ಅಧ್ಯಕ್ಷ ಸೈರಸ್‌ ಮಿಸಿŒ ಅವರು ರತನ್‌ ಟಾಟಾಗೆ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ. “ಮಧ್ಯಮವರ್ಗದ ಕಾರು ಎಂದು ನಾವು ಭಾವನಾತ್ಮಕವಾಗಿ ಯೋಚಿಸಿದರೆ, ಸಂಸ್ಥೆಗೆ ಭರಿಸಲಾಗದ ನಷ್ಟ’ ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಟಾಟಾ ಆಡಳಿತ ಮಂಡಳಿ ಪದಚ್ಯುತ ಅಧ್ಯಕ್ಷ ಮಿಸಿŒ ವಿರುದ್ಧ ಆರೋಪಗಳನ್ನೂ ಮಾಡಿತ್ತು.

ಮುಂದಿನ ಯೋಜನೆಗಳೇನು?: 
ನ್ಯಾನೋ ಕಾರಿನ ಲೋಪಗಳನ್ನು ಗಮನದಲ್ಲಿಟ್ಟುಕೊಂಡು, ಕಡಿಮೆ ಬೆಲೆ ಯಲ್ಲಿಯೇ ಪ್ರಯಾಣಸ್ನೇಹಿ ಮಾದರಿಯ ಕಾರನ್ನು ನಿರ್ಮಿಸಲು ಮುಂದಾಗಿದೆ. ಗುಣಮಟ್ಟದ ಎಲೆಕ್ಟ್ರಿಕ್‌ ಕಾರುಗಳನ್ನು ಉತ್ಪಾದಿಸಲು ಸಂಸ್ಥೆ ಚಿಂತಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.