3 ತಿಂಗಳ ಕಾಲ ಕೋವಿಡ್ 19 ಎಫೆಕ್ಟ್? ಬಡವರಿಗಾಗಿ ಗರೀಬ್ ಕಲ್ಯಾಣ್ ಯೋಜನೆ ಘೋಷಣೆ, ಏನಿದು
ಬಡವರಿಗಾಗಿ ಗರೀಬ್ ಕಲ್ಯಾಣ್ ಯೋಜನೆಗೆ 1,70, 000 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ.
Team Udayavani, Mar 26, 2020, 2:00 PM IST
ನವದೆಹಲಿ: ಕೋವಿಡ್ 19 ಮಾರಣಾಂತಿಕ ವೈರಸ್ ನಿಂದಾಗಿ ದಿನಗೂಲಿ ನೌಕರರಿಂದ ಹಿಡಿದು ಪ್ರತಿಯೊಬ್ಬರ ಆರ್ಥಿಕ ಸ್ಥಿತಿ ಮೇಲೆ ಪರಿಣಾಮ ಬೀರಿದ್ದು, ಈ ಹಿನ್ನೆಲೆಯಲ್ಲಿ ದೇಶದ ಬಡವರಿಗಾಗಿ 1,70,000 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಘೋಷಿಸಿದ್ದಾರೆ.
ಬಡವರಿಗಾಗಿ ಗರೀಬ್ ಕಲ್ಯಾಣ್ ಯೋಜನೆಗೆ 1,70, 000 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ.ಮುಂದಿನ ಮೂರು ತಿಂಗಳ ಕಾಲ 5 ಕೆಜಿ ಅಕ್ಕಿ ಅಥವಾ ಗೋಧಿ, ಒಂದು ಕೇಜಿ ಬೇಳೆಯನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಲಕ್ಷ
ಬಡವರಿಗಾಗಿ ಈ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ಇದು ವಲಸೆ ಕಾರ್ಮಿಕರಿಗೆ ಹಾಗೂ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಬಡವರಿಗೆ ಅನುಕೂಲವಾಗುವ ದೃಷ್ಟಿಯಿಂದ ಕೇಂದ್ರ ಪ್ಯಾಕೇಜ್ ಜಾರಿಗೊಳಿಸಿದೆ. ಯಾರೊಬ್ಬರೂ ದೇಶದಲ್ಲಿ ಹಸಿವಿನಿಂದ ಇರಬಾರದು. ಈ ಪ್ಯಾಕೇಜ್ ಒಟ್ಟು 1.7 ಲಕ್ಷ ಕೋಟಿ ರೂಪಾಯಿಯದ್ದಾಗಿದೆ ಎಂದು ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ್ದಾರೆ.
ಈ ಪ್ಯಾಕೇಜ್ ಆಹಾರ ಭದ್ರತೆ ಮತ್ತು ನೇರ ನಗದು ವರ್ಗಾವಣೆ ಲಾಭ ಹೊಂದಿದೆ. ಲಾಕ್ ಡೌನ್ ಸಂದರ್ಭದಲ್ಲಿ ಬಡ ಕುಟುಂಬಕ್ಕೆ ಜನ್ ಧನ್ ಖಾತೆ ಮೂಲಕ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು. ಮೂರು ತಿಂಗಳ ಕಾಲ ಪ್ರತಿಯೊಬ್ಬ ಆರೋಗ್ಯ ಸಿಬ್ಬಂದಿಗೆ 50 ಲಕ್ಷ ರೂಪಾಯಿ ಮೊತ್ತದ ವಿಮೆಯನ್ನು ಸೀತಾರಾಮನ್ ಘೋಷಿಸಿದ್ದಾರೆ.
ಪ್ಯಾಕೇಜ್ ಯಾರಿಗೆ ಎಷ್ಟು:
*ಏಪ್ರಿಲ್ ಮೊದಲ ವಾರದಲ್ಲಿ ರೈತರ ಖಾತೆಗೆ 2 ಸಾವಿರ ರೂಪಾಯಿ ನಗದು ಹಣ ವರ್ಗಾವಣೆ, ಇದರಿಂದ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ 8.69 ಕೋಟಿ ರೈತರು ಲಾಭ ಪಡೆಯಲಿದ್ದಾರೆ.
*ಮನ್ರೇಗಾ ಯೋಜನೆಯಡಿಯ ಕೂಲಿಯನ್ನು 180 ರೂಪಾಯಿಯಿಂದ 200 ರೂ.ಗೆ ಏರಿಕೆ ಮಾಡಿದ್ದು, ಇದರಿಂದ 5 ಕೋಟಿ ಕುಟುಂಬಗಳಿಗೆ ಅನುಕೂಲವಾಗಲಿದೆ. ಪ್ರತಿಯೊಬ್ಬ ಕೂಲಿ ಕಾರ್ಮಿಕರಿಗೆ ಹೆಚ್ಚುವರಿಯಾಗಿ 2ಸಾವಿರ ರೂಪಾಯಿ ಹೆಚ್ಚಳ ಮಾಡಲಾಗಿದೆ.
*20 ಕೋಟಿ ಮಹಿಳೆಯರು ಜನ್ ಧನ್ ಖಾತೆ ಹೊಂದಿದ್ದು ಮುಂದಿನ ಮೂರು ತಿಂಗಳ ಕಾಲ ತಿಂಗಳಿಗೆ 500 ರೂಪಾಯಿ ಹಣ ವರ್ಗಾವಣೆಯಾಗಲಿದೆ.
*ದೇಶದ ಸುಮಾರು 80 ಕೋಟಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳ ಕಾಲ 5 ಕೆಜಿ ಗೋಧಿ ಅಥವಾ ಅಕ್ಕಿ ವಿತರಣೆ
*ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ 1.70 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ನಡಿ ವಲಸೆ ಮತ್ತು ದಿನಗೂಲಿ ನೌಕರರಿಗೆ ವಿಶೇಷ ಯೋಜನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ