10 ವರ್ಷಗಳ ಗ್ಯಾರಂಟಿ ನೀಡಿದರೆ ಮಾತ್ರ ರಸ್ತೆ ಕೆಲಸದ ಟೆಂಡರ್‌ ಲಭ್ಯ: ನಿತಿನ್‌ ಗಡ್ಕರಿ

ರಸ್ತೆ ನಿರ್ಮಾಣ ವೆಚ್ಚವನ್ನು ಕಡಿಮೆ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ.

Team Udayavani, Sep 12, 2020, 11:10 AM IST

10 ವರ್ಷಗಳ ಗ್ಯಾರಂಟಿ ನೀಡಿದರೆ ಮಾತ್ರ ರಸ್ತೆ ಕೆಲಸದ ಟೆಂಡರ್‌ ಲಭ್ಯ: ನಿತಿನ್‌ ಗಡ್ಕರಿ

ನಾಗಪುರ, ಸೆ. 11: ರಸ್ತೆಗಳನ್ನು ನಿರ್ಮಿಸುವಾಗ ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳುವ ಮೂಲಕ ನಿರ್ಮಾಣ ವೆಚ್ಚವನ್ನು ಕಡಿಮೆ ಮಾಡುವುದಲ್ಲದೆ, ಆಸಾಲ್ಟ್(ಡಾಂಬರು) ರಸ್ತೆಗಳನ್ನು ನಿರ್ಮಾಣ ಮಾಡುವಾಗ 10 ವರ್ಷಗಳ ನಿರ್ವಹಣೆ ಮತ್ತು ದುರಸ್ತಿಯ ಖಾತರಿ ನೀಡಿದರೆ ಮಾತ್ರ ಗುತ್ತಿಗೆದಾರನಿಗೆ ಕೆಲಸ ನೀಡಲಾಗುವುದು ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಸೂಚನೆ ನೀಡಿದ್ದಾರೆ.

ಎಫ್‌ಐಸಿಸಿಐ ವತಿಯಿಂದ ಆಯೋಜಿತ ಬಿಟ್‌ ಕಾಯಿನ್‌ ಕಾರ್ಯಕ್ರಮದ ಮೂಲಕ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ವಿವಿಧ ಗುತ್ತಿಗೆದಾರರೊಂದಿಗೆ ಸಂವಾದ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ರಸ್ತೆ ನಿರ್ಮಾಣ ವೆಚ್ಚವನ್ನು ಕಡಿಮೆ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ. ಈ ವಿಷಯದಲ್ಲಿ ನಾವು ಹೆಚ್ಚಿನ ಪ್ರಮಾಣದ ಯಶಸ್ಸು ಕಂಡುಕೊಂಡಿದ್ದೇವೆ. ಆದರೆ ನಿರ್ಮಾಣ ವೆಚ್ಚವನ್ನು ಕಡಿಮೆ ಮಾಡುವಾಗ ನಿರ್ಮಾಣದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂದರು.

ಆಸಾಲ್ಟ್ ರಸ್ತೆ ನಿರ್ಮಾಣದ ಗುತ್ತಿಗೆದಾರರು ಸಹ ನಿರ್ಮಾಣದ ಗುಣಮಟ್ಟಕ್ಕೆ ಧಕ್ಕೆಯಾಗದಂತೆ ವೆಚ್ಚವನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕು. ಅಗತ್ಯವಿದ್ದರೆ ವಿಶ್ವದ ಯಾವುದೇ ತಂತ್ರಜ್ಞಾನವನ್ನು ಬಳಸಬಹುದು. ಆದರೆ ನಿರ್ಮಾಣ ವೆಚ್ಚವನ್ನು ಕಡಿಮೆ ಮಾಡಬೇಕೇಂದು ಹೇಳಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆದ್ದಾರಿ ನಿರ್ಮಾಣಕ್ಕಾಗಿ ಈವರೆಗೆ 8 ದಶಲಕ್ಷ ಮೆಟ್ರಿಕ್‌ ಟನ್‌ ಫ್ಲೆ ಆಶ್‌ ಅನ್ನು ಬಳಸಿಕೊಂಡಿದೆ. ಪ್ರಸ್ತುತ ಉಷ್ಣ ವಿದ್ಯುತ್‌ ಸ್ಥಾವರ ಕೇಂದ್ರದ 50-60 ಕಿ.ಮೀ ಪ್ರದೇಶದಲ್ಲಿ ಫ್ಲೆ ಆಶ್‌ ಅನ್ನು  ಬಳಸಲಾಗುತ್ತಿದೆ. ಫ್ಲೆ ಆಶ್‌ ಇನ್ನು ಮುಂದೆ ಲಭ್ಯವಿಲ್ಲ ಎಂದು ಅವರು ಗಮನಸೆಳೆದರು.

ಆಸಾಲ್ಟ್ ರಸ್ತೆಗಳು 5 ವರ್ಷಗಳ ಕಾಲವೂ ಸರಿಯಾಗಿ ಬಾಳ್ವಿಕೆ ಬರುವುದಿಲ್ಲ. ಹೆಚ್ಚಿನ ಮಳೆಯಿರುವ ಪ್ರದೇಶಗಳಲ್ಲಿಯ ರಸ್ತೆಗಳು ಬೇಗನೆ ಹಳಾಗುತ್ತದೆ. ಆದ್ದರಿಂದ ಆಸಾಲ್ಟ್ ರಸ್ತೆಗಳ ನಿರ್ವಹಣೆ ಮತ್ತು ದುರಸ್ತಿಗಾಗಿ 10 ವರ್ಷಗಳ ಖಾತರಿ ನೀಡುವ ಕಂಪೆನಿಗೆ ಗುತ್ತಿಗೆ ನೀಡಲಾಗುವುದು ಎಂದು ಹೇಳಿದ್ದಾರೆ.

ಆಧುನಿಕ ತಂತ್ರಜ್ಞಾನವನ್ನು ಬಳಸುವ ಆಸಾಲ್ಟ್ ರಸ್ತೆಗಳು 10 ವರ್ಷಗಳವರೆಗೆ ಹದಗೆಡುವುದಿಲ್ಲ ಎಂಬ ಅಂಶದ ಬಗ್ಗೆ ಕಂಪೆನಿಗಳು ಈಗ ಯೋಚಿಸಬೇಕು. ಅಲ್ಲದೆ ರಸ್ತೆ ನಿರ್ಮಾಣಕ್ಕೆ ಅಗತ್ಯವಾದ ಮಣ್ಣು ಮತ್ತು ಕೆಸರು ಈ ಪ್ರದೇಶದ ಸರೋವರ, ಕೊಳ, ನದಿಗಳನ್ನು ಆಳಗೊಳಿಸುವ ಮೂಲಕ ಪಡೆಯಬಹುದು. ಇದರಿಂದಾಗಿ ರಸ್ತೆ ನಿರ್ಮಾಣದ ಜತೆಗೆ ನೀರಿನ ಸಂರಕ್ಷಣೆ ಕೂಡ ನಡೆಯುತ್ತದೆ ಎಂದು ಸಚಿವ ಗಡ್ಕರಿ ಹೇಳಿದ್ದಾರೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.