ಪೆಟ್ರೋಲ್, ಡಿಸೇಲ್ : GST ವ್ಯಾಪ್ತಿಗೆ ಇಲ್ಲ : ನಿರ್ಮಲಾ ಸೀತಾರಾಮನ್
Team Udayavani, Mar 16, 2021, 12:14 PM IST
ನವ ದೆಹಲಿ : ಪೆಟ್ರೋಲ್, ಡಿಸೇಲ್ ಹಾಗೂ ಇಂಧನ ಬೆಲೆಗಳು ದಾಖಲೆಯ ಏರಿಕೆಯನ್ನು ಕಾಣುತ್ತಿರುವ ನಡುವೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪೆಟ್ರೋಲ್, ಡಿಸೇಲ್, ಕಚ್ಚಾ ತೈಲ ಹಾಗೂ ನೈಸರ್ಗಿಕ ಅನಿಲ, ವಿಮಾನ ಇಂಧನಗಳನ್ನು ಜಿ ಎಸ್ ಟಿ ವ್ಯಾಪ್ತಿಗೆ ತರುವ ಯಾವುದೇ ಪ್ರಸ್ತಾಪವಿಲ್ಲವೆಂದು ಸೋಮವಾರ(ಮಾ.15)ದಂದು ಲೋಕಸಭೆಯಲ್ಲಿ ಲಿಖಿತ ರೂಪದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ್ದಾರೆ.
2017, ಜುಲೈ 1 ರಂದು ಜಿ ಎಸ್ ಟಿಯನ್ನು ಜಾರಿಗೊಳಿಸಿದಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದಾಯಗಳು ಪೆಟ್ರೋಲಿಯಂ ಕ್ಷೇತ್ರವನ್ನು ಅವಲಂಭಿಸಿರುವುದನ್ನು ಆಧರಿಸಿ ಪೆಟ್ರೋಲ್, ಡಿಸೇಲ್, ಕಚ್ಚಾ ತೈಲ ಹಾಗೂ ನೈಸರ್ಗಿಕ ಅನಿಲ, ವಿಮಾನ ಇಂಧನಗಳನ್ನು ಜಿ ಎಸ್ ಟಿ ವ್ಯಾಪ್ತಿಯಿಂದ ಹೊರಗಿಡಲಾಗಿತ್ತು.
ಓದಿ : ಅಂಜನಾದ್ರಿ ಬೆಟ್ಟಕ್ಕೆ ಮಾಸ್ಟರ್ ಪ್ಲಾನ್: 50 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಅಭಿವೃದ್ಧಿ
ಇದು ಇಂಧನಗಳ ಮೇಲೆ ಕೇಂದ್ರ ಸರ್ಕಾರವು ಅಬಕಾರಿ ಶುಲ್ಕವನ್ನು ಹಾಗೂ ರಾಜ್ಯ ಸರ್ಕಾರವು ವ್ಯಾಟ್ ಹಾಕುವುದನ್ನು ಮುಂದುವರಿಸಲು ಅವಕಾಶವನ್ನು ಒದಗಿಸಿತ್ತು.
ತೆರಿಗೆಯ ಪ್ರಮಾಣ ಕಡಿಮೆಯಾಗುವುದಿಲ್ಲವೆಂದಾದರೇ, ಪೆಟ್ರೋಲ್ ಹಾಗೂ ಡಿಸೇಲ್ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿರುವ ಬೆನ್ನಲ್ಲೇ ಜಿ ಎಸ್ ಟಿ ವ್ಯಾಪ್ತಿಗೆ ಒಳಪಡಿಸಬೇಕೆಂಬ ಮಾತುಗಳು ಕೇಳಿಬಂದಿತ್ತು.
ಸದ್ಯ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನಿನ್ನೆ(ಸೋಮವಾರ, ಮಾರ್ಚ್ 15) ಲೋಕಸಭೆಯಲ್ಲಿ ಪೆಟ್ರೋಲ್, ಡಿಸೇಲ್, ಕಚ್ಚಾ ತೈಲ ಹಾಗೂ ನೈಸರ್ಗಿಕ ಅನಿಲ, ವಿಮಾನ ಇಂಧನಗಳನ್ನು ಜಿ ಎಸ್ ಟಿ ವ್ಯಾಪ್ತಿಗೆ ತರುವ ಯಾವುದೇ ಪ್ರಸ್ತಾಪವಿಲ್ಲವೆಂದು ಪ್ರಶ್ನೆಯೊಂದಕ್ಕೆ ಲಿಖಿತ ರೂಪದಲ್ಲಿ ಉತ್ತರ ನೀಡಿದ್ದಾರೆ.
ಇನ್ನು, ಕಾನೂನಿನನ್ವಯ ಜಿ ಎಸ್ ಟಿ ಮಂಡಳಿಯು ಪೆಟ್ರೋಲಿಯಂ ಕಚ್ಚಾ ತೈಲ, ನೈಸರ್ಗಿಕ ಇಂಧನ ಹಾಗೂ ಹೈಸ್ಪೀಡ್ ಡಿಸೇಲ್, ಪೆಟ್ರೋಲ್ ಗಳ ಮೇಲೆ ಜಿ ಎಸ್ ಟಿ ವಿಧಿಸುವ ದಿನಾಂಕವನ್ನು ಶಿಫಾರಸ್ಸು ಮಾಡಬೇಕಾಗುತ್ತದೆ ಎಂದು ನಿರ್ಮಲಾ ಹೇಳಿದ್ದಾರೆ.
ಓದಿ : ಏಪ್ರಿಲ್ ಅಂತ್ಯದಲ್ಲಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತಕ್ಕೆ ಭೇಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ