ಇನ್ನು ರೈಲ್ವೇ ಟಿಕೆಟ್ ಶುಲ್ಕ ರಿಫಂಡ್ ಗೂ ಮೊದಲು ಒಟಿಪಿ ಬರುತ್ತದೆ!

IRCTC ಅಧಿಕೃತ ಏಜೆಂಟ್ ಮೂಲಕ ಮಾಡಲಾದ ಟಿಕೆಟ್ ಬುಕ್ಕಿಂಗ್ ಗಳಿಗೆ ಮಾತ್ರ ಇದು ಅನ್ವಯ

Team Udayavani, Oct 29, 2019, 6:54 PM IST

Indian-Railways-New-726

ನವದೆಹಲಿ: ನೀವು ಕಾಯ್ದಿರಿಸಿದ ರೈಲ್ವೇ ಟಿಕೆಟ್ ಅನ್ನು ಕ್ಯಾನ್ಸಲ್ ಮಾಡಿದಲ್ಲಿ ಅಥವಾ ತತ್ಕಾಲ್ ನಲ್ಲೇ ಉಳಿದ ಟಿಕೆಟ್ ಗಳಿಗೆ ಹಣ ಹಿಂದಿರುಗಿಸುವ ವಿಧಾನವನ್ನು ಭಾರತೀಯ ರೈಲ್ವೇ ಇನ್ನಷ್ಟು ಪಾರದರ್ಶಕಗೊಳಿಸಿದೆ. ಒಟಿಪಿ ಆಧಾರಿತ ಹಣ ವಾಪಸಾತಿ ವಿಧಾನಕ್ಕೆ ಮಂಗಳವಾರದಂದು ಚಾಲನೆ ನೀಡಿರುವ ಭಾರತೀಯ ರೈಲ್ವೇ ಈ ಮೂಲಕ ನೀವು ಅಧಿಕೃತ ಐ.ಆರ್.ಸಿ.ಟಿ.ಸಿ. ಏಜೆಂಟರ ಮೂಲಕ ಕಾಯ್ದಿರಿಸಿದ ರೈಲ್ವೇ ಟಿಕೆಟ್ ಅನ್ನು ರದ್ದುಗೊಳಿಸಿದರೆ ಅಥವಾ ನಿಮ್ಮ ಪ್ರಯಾಣ ಖಾತ್ರಿಯಾಗದಿದ್ದರೆ ಆ ಸಂದರ್ಭದಲ್ಲಿ ಒಟಿಪಿ ಸಂದೇಶವನ್ನು ಪ್ರಯಾಣಿಕರ ಮೊಬೈಲ್ ಗೆ ಕಳುಹಿಸುವ ವ್ಯವಸ್ಥೆ ಇದಾಗಿದೆ. ಟಿಕೆಟ್ ಶುಲ್ಕವನ್ನು ರಿಫಂಡ್ ಮಾಡುವ ಸಂದರ್ಭದಲ್ಲೇ ಈ ಒಟಿಪಿ ಸಂದೇಶವೂ ಸಹ ಬರುತ್ತದೆ.

ಭಾರತೀಯ ರೈಲ್ವೇಯ ಪಿ.ಎಸ್.ಯು. ಮತ್ತು ಐ.ಆರ್.ಸಿ.ಟಿ.ಸಿ. ಜಂಟಿಯಾಗಿ ಈ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಿವೆ. ಐ.ಆರ್.ಸಿ.ಟಿ.ಸಿ. ಅಧಿಕೃತ ಏಜೆಂಟರುಗಳ ಮೂಲಕ ಬುಕ್ಕಿಂಗ್ ಮಾಡಿದ ಟಿಕೆಟ್ ಗಳಿಗೆ ಮಾತ್ರವೇ ಈ ಒಟಿಪಿ ಸಂದೇಶ ಬರುತ್ತದೆ.

ಟಿಕೆಟ್ ಅಲಭ್ಯತೆಯಿಂದ ಅಥವಾ ಇನ್ಯಾವುದೇ ಕಾರಣಗಳಿಂದ ಒಂದು ವೇಳೆ ನಿಮ್ಮ ಉದ್ದೇಶಿತ ರೈಲ್ವೇ ಪ್ರಯಾಣವು ರದ್ದುಗೊಂಡಲ್ಲಿ, ಪ್ರಯಾಣಿಕರು ಅಧಿಕೃತ ಏಜೆಂಟರ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ಸಂದರ್ಭದಲ್ಲಿ ನೀಡುವ ಮೊಬೈಲ್ ನಂಬರ್ ಗೆ ಒಟಿಪಿ ಸಂದೇಶವನ್ನು ಕಳುಹಿಸಲಾಗುತ್ತದೆ. ಈ ಒಟಿಪಿ ಸಂದೇಶವನ್ನು ನೀವು ಟಿಕೆಟ್ ಬುಕ್ಕಿಂಗ್ ಮಾಡಿರುವ ಏಜೆಂಟ್ ಅವರಿಗೆ ತೋರಿಸುವ ಮೂಲಕ ನೀವು ನಿಮ್ಮ ಟಿಕೆಟ್ ಹಣವನ್ನು ಮರಳಿ ಪಡೆಯಬಹುದಾಗಿರುತ್ತದೆ.

ಒಟಿಪಿ ಆಧಾರಿತ ಟಿಕೆಟ್ ಶುಲ್ಕ ಹಿಂದಿರುಗಿಸುವಿಕೆ ವಿಧಾನವು ಹೆಚ್ಚು ಪಾರದರ್ಶಕತೆಯಿಂದ ಕೂಡಿದ್ದಾಗಿದೆ ಎಂದು ನಂಬಲಾಗುತ್ತಿದೆ. ಯಾಕೆಂದರೆ ಈ ವಿಧಾನದಲ್ಲಿ ಪ್ರಯಾಣಿಕರಿಗೆ ತಮ್ಮ ಟಿಕೆಟ್ ಶುಲ್ಕದಲ್ಲಿ ಎಷ್ಟು ಮೊತ್ತ ರಿಫಂಡ್ ಆಗಿ ಏಜೆಂಟರ ಕೈಸೇರಿದೆ ಎಂಬ ನಿಖರವಾದ ಮಾಹಿತಿ ಲಭ್ಯವಾಗುತ್ತದೆ. ಇದರಿಂದಾಗಿ ಟಿಕೆಟ್ ರಿಫಂಡ್ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಇಲ್ಲಿ ಅವಕಾಶವಿರುವುದಿಲ್ಲ.

ಈ ವ್ಯವಸ್ಥೆಯ ಉಪಯೋಗವನ್ನು ಪಡೆದುಕೊಳ್ಳಲು ರೈಲ್ವೇ ಪ್ರಯಾಣಿಕರು ತಾವು IRCTCಯ ಅಧಿಕೃತ ಏಜೆಂಟರ ಬಳಿ ಟಿಕೆಟ್ ಕಾಯ್ದಿರಿಸುವ ಸಂದರ್ಭದಲ್ಲಿ ತಮ್ಮ ಸರಿಯಾದ ಮೊಬೈಲ್ ನಂಬರನ್ನು ನೀಡುವುದು ಅಗತ್ಯವಾಗಿರುತ್ತದೆ, ಮಾತ್ರವಲ್ಲದೇ ಏಜೆಂಟರುಗಳು ಈ ಮೊಬೈಲ್ ಸಂಖ್ಯೆಯನ್ನು ಸರಿಯಾಗಿ ರಿಜಿಸ್ಟರ್ ಮಾಡಿಕೊಂಡಿದ್ದಾರೆ ಎಂಬುದನ್ನೂ ಸಹ ಖಚಿತಪಡಿಸಿಕೊಳ್ಳುವುದು ಪ್ರಯಾಣಿಕರ ಜವಾಬ್ದಾರಿಯಾಗಿರುತ್ತದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.