ಬ್ಯಾಂಕ್ ಆನ್ ಲೈನ್ ವಂಚನೆಗೆ ಬ್ರೇಕ್ ಹಾಕಲು ದೆಹಲಿ ಪೊಲೀಸರ ಹೊಸ ಕ್ರಮ..! ಇಲ್ಲಿದೆ ಮಾಹಿತಿ.
Team Udayavani, Apr 16, 2021, 11:19 AM IST
ನವದೆಹಲಿ: ದಿನ ನಿತ್ಯ ಆನ್ಲೈನ್ ಬ್ಯಾಂಕ್ ವಂಚಕರ ಸಂಖ್ಯೆ ಹೆಚ್ಚಾಗುತ್ತಿದೆ. ಸೈಬರ್ ಅಪರಾಧಿಗಳು ಗ್ರಾಹಕರ ಬ್ಯಾಂಕ್ ಖಾತೆಗಳಿಗೆ ವಂಚನೆ ಮಾಡುತ್ತಿದ್ದಾರೆ, ಎಚ್ಚರಿಕೆಯಿಂದಿರಿ ಎಂದು ಅನೇಕ ರಾಷ್ಟ್ರೀಯ ಬ್ಯಾಂಕ್ ಗಳು ಈಗಾಗಲೇ ಮನವಿ ಮಾಡಿಕೊಂಡಿವೆ.
ಈ ಹಿನ್ನಲೆಯಲ್ಲಿ ಆನ್ ಲೈನ್ ವಂಚಕರ ಜಾಲವನ್ನು ಪತ್ತೆ ಹಚ್ಚಲು ದೆಹಲಿ ಪೊಲೀಸರು ಆನ್ ಲೈನ್ ಬ್ಯಾಂಕ್ ವಂಚನೆಗೆ ಒಳಗಾದವರಿಗೆ ಸಹಾಯ ಮಾಡಲು ಸಹಾಯವಾಣಿ ಸಂಖ್ಯೆಯೊಂದನ್ನು ನೀಡಿದೆ. ಈ ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಿ ದೂರು ನೀಡಿದ ಕೆಲವೇ ನಿಮಿಷಗಳಲ್ಲಿ ವಂಚಕರಿಂದ ಹಣವನ್ನ ಖಾತೆಗೆ ಹಿಂತಿರುಗಿಸಲಾಗುತ್ತದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಓದಿ : ಬೆಂಕಿಯಲ್ಲಿ ಅರಳಿದ ಹೂವು: ಬಡತನ, ಕಷ್ಟಗಳ ಮಧ್ಯೆ ಸಾಧನೆ ಮಾಡಿದ ಚೇತನ್ ಸಕಾರಿಯಾ
ಇನ್ನು, ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರೀತಿಯ ಸೈಬರ್ ಅಪರಾಧಗಳಿಗೆ ಸಹಾಯವಾಣಿ ಸಂಖ್ಯೆ 155260 ಅನ್ನು ನಿರ್ವಹಿಸುತ್ತದೆ.
ಕಳೆದ ವರ್ಷ ನವೆಂಬರ್ನಲ್ಲಿ ದೆಹಲಿ ಪೊಲೀಸರ ಸೈಬರ್ ಸೆಲ್ ಕೇಂದ್ರ ಗೃಹ ಸಚಿವಾಲಯದ ಸಹಯೋಗದೊಂದಿಗೆ ಈ ಸಹಾಯವಾಣಿ ಸಂಖ್ಯೆಯನ್ನು ಹೆಚ್ಚು ಪರಿಣಾಮಕಾರಿ ರೀತಿಯಲ್ಲಿ ಕೆಲಸ ಮಾಡಲು ಪ್ರಾಯೋಗಿಕ ಆಧಾರದ ಮೇಲೆ ಪ್ರಾರಂಭಿಸಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿದ ಸೈಬರ್ ಸೆಲ್ ನ ಉಪ ಪೊಲೀಸ್ ಆಯುಕ್ತ ಅನೇಶ್ ರಾಯ್, ಈ ಸಹಾಯವಾಣಿ ಮೂಲಕ ಸುಮಾರು 8.11 ಲಕ್ಷ ರೂಪಾಯಿಗಳನ್ನು 23 ಜನರಿಗೆ ಹಿಂದಿರುಗಿಸಲಾಗಿದೆ. ಇದರಲ್ಲಿ ದೊಡ್ಡ ಮೊತ್ತವೆಂದರೆ ದೆಹಲಿ ಮೂಲದ ನಿವೃತ್ತ ಲೆಕ್ಕಪರಿಶೋಧಕ ಖಾತೆ ಅಧಿಕಾರಿಯೊಬ್ಬರ 98,000 ರೂಪಾಯಿಗಳ ವಂಚನೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಸಹಾಯವಾಣಿ ಸಂಖ್ಯೆ 155260 ನನ್ನು ಕೇಂದ್ರ ಗೃಹ ಸಚಿವಾಲಯ ಮತ್ತು ದೆಹಲಿ ಪೊಲೀಸರ ಸೈಬರ್ ಸೆಲ್ ನೀಡಿದೆ. ನಿಮ್ಮ ಖಾತೆಯನ್ನು ಖಾತೆ ಅಥವಾ ಐಡಿಗೆ ವರ್ಗಾಯಿಸಲಾಗಿದೆ ಎಂದು ವಿವರಿಸಿ. ಸರ್ಕಾರದ 155260 ಸಹಾಯವಾಣಿಯಿಂದ ಎಚ್ಚರಿಕೆ ಸಂದೇಶವನ್ನು ಆ ಬ್ಯಾಂಕ್ ಅಥವಾ ಇ-ಸೈಟ್ ಗೆ ಕಳುಹಿಸಲಾಗುತ್ತದೆ. ಆಗ ನಿಮ್ಮ ಹಣ ವಾಪಾಸ್ ಆಗುತ್ತದೆ.
ನಿಮ್ಮ ಖಾತೆ ಆನ್ ಲೈನ್ ವಂಚಕರಿಂದ ಹ್ಯಾಕ್ ಆಗಿದ್ದರೇ ಅಥವಾ ಅವರಿಂದ ನೀವು ವಂಚನೆಗೆ ಒಳಗಾಗಿದ್ದರೇ, ಮೊದಲು ನೀವು ಸಹಾಯವಾಣಿ ಸಂಖ್ಯೆ 155260 ನನ್ನು ಡಯಲ್ ಮಾಡಬೇಕು.
ನಂತರ, ನಿಮ್ಮ ಹೆಸರು, ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ ಬಗ್ಗೆ ಮಾಹಿತಿಯನ್ನು ಪ್ರಾಥಮಿಕ ವಿಚಾರಣೆಯಾಗಿ ಪಡೆಯಲಾಗುತ್ತದೆ. ಮುಂದಿನ ಕ್ರಮಕ್ಕಾಗಿ ನಿಮ್ಮ ಮಾಹಿತಿಯನ್ನು ಪೋರ್ಟಲ್ಗೆ ಕಳುಹಿಸುತ್ತದೆ. ನಂತರ ವಂಚನೆಯ ಬಗ್ಗೆ ಸಂಬಂಧಪಟ್ಟ ಬ್ಯಾಂಕ್ ಗೆ ತಿಳಿಸಲಾಗುವುದು. ಮಾಹಿತಿಯನ್ನು ಪರಿಶೀಲಿಸಿದ ನಂತರ, ತನಿಖೆ ನಡೆಸಲಾಗುತ್ತದೆ. ನಂತರ ನಿಮ್ಮ ಹಣವನ್ನು ನಿಮ್ಮ ಖಾತೆಗೆ ವರ್ಗಾಯಿಸಲಾಗುತ್ತದೆ.
ಓದಿ : ಮುಂಬೈಯಲ್ಲಿ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ತಯಾರಿಕೆಗೆ ಕೇಂದ್ರದ ಗ್ರೀನ್ ಸಿಗ್ನಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
Tesla; ಭಾರತದಲ್ಲಿ ಎಲಾನ್ ಮಸ್ಕ್ 25,000 ಕೋಟಿ ಹೂಡಿಕೆ?
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ