ವಾಹನ ಸವಾರರ ಗಮನಕ್ಕೆ: ಹೆಲ್ಮೆಟ್ ನಿಯಮದಲ್ಲಿ ಬದಲಾವಣೆ, BISಗೆ ಮಾತ್ರ ಮಾನ್ಯತೆ, ಏನಿದು?
ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪಲು ಹೆಲ್ಮೆಟ್ ಧರಿಸದೇ ಇರುವುದು ಮತ್ತು ಕಳಪೆ ಗುಣಮಟ್ಟದ ಹೆಲ್ಮೆಟ್ ಕಾರಣ
Team Udayavani, Nov 28, 2020, 5:30 PM IST
ನವದೆಹಲಿ: 2021ರ ಜೂನ್ ನಿಂದ ಭಾರತದಲ್ಲಿ ಬಿಐಎಸ್(ಬ್ಯುರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್)ಯೇತರ ಹೆಲ್ಮೆಟ್ ಗಳನ್ನು ಉತ್ಪಾದಿಸುವುದಾಗಲಿ ಅಥವಾ ಮಾರಾಟ ಮಾಡುವುದನ್ನು ನಿರ್ಬಂಧಿಸಲಾಗಿದೆ. ಒಂದು ವೇಳೆ ಬೈಕ್ ಸವಾರರು ಬಿಐಎಸ್ ಪ್ರಮಾಣೀಕೃತ ಹೆಲ್ಮೆಟ್ ಧರಿಸದೇ ಇದ್ದರೆ ಇದು ಕಾನೂನು ಪ್ರಕಾರ ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದು ರಸ್ತೆ ಸಾರಿಗೆ ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತದಲ್ಲಿನ ಬಹುತೇಕ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪಲು ಹೆಲ್ಮೆಟ್ ಧರಿಸದೇ ಇರುವುದು ಮತ್ತು ಕಳಪೆ ಗುಣಮಟ್ಟದ ಹೆಲ್ಮೆಟ್ ಧರಿಸುತ್ತಿರುವುದು ಮುಖ್ಯ ಕಾರಣವಾಗಿದೆ ಎಂದು ವರದಿ ಹೇಳಿದೆ.
ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ರಸ್ತೆ ಸುರಕ್ಷತಾ ಸಮಿತಿ ಭಾರತದ ಹವಾಮಾನಕ್ಕನುಗುಣವಾಗಿ ಕಡಿಮೆ ಭಾರದ ಹೆಲ್ಮೆಟ್ ಅನ್ನು ಪರಿಗಣಿಸುವಂತೆ ಸೂಚಿಸಿದ್ದು, ಅದರಂತೆ ನೀಡಿರುವ ವರದಿಗೆ ಸಾರಿಗೆ ಸಚಿವಾಲಯ ಒಪ್ಪಿಗೆ ಸೂಚಿಸಿತ್ತು.
ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದ ಜೂನ್ ನಿಂದ ಎಲ್ಲಾ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬಿಐಎಸ್ ಪ್ರಮಾಣೀಕೃತ ಹೆಲ್ಮೆಟ್ ಅನ್ನು ಧರಿಸಬೇಕಾಗಿದೆ. ಅಲ್ಲದೇ ಬಿಐಎಸ್ ಪ್ರಮಾಣಿಕೃತ ಹೆಲ್ಮೆಟ್ ಅನ್ನು ಮಾರಾಟ ಮಾಡಬೇಕಾಗಿದೆ. ಇದರಿಂದ ದೇಶದಲ್ಲಿ ಕಡಿಮೆ ಗುಣಮಟ್ಟದ ಹೆಲ್ಮೆಟ್ ಮಾರಾಟಕ್ಕೆ ಕಡಿವಾಣ ಬೀಳಲು ನೆರವಾಗಲಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಸಂತೋಷ್ ನೀಡಿದ್ದ ವಿಡಿಯೋದಿಂದ ಸಚಿವರೊಬ್ಬರು BSY ರನ್ನು ಬ್ಲ್ಯಾಕ್ ಮೇಲ್ ಮಾಡಿದ್ದರು: ಡಿಕೆಶಿ
ಕೇಂದ್ರದ ಈ ನಿರ್ಧಾರವನ್ನು ಸ್ವಾಗತಿಸಿರುವ ಏಮ್ಸ್ ಪ್ರೊ.ಡಾ.ಅಮಿತ್ ಗುಪ್ತಾ, ರಸ್ತೆ ಅಪಘಾತದಲ್ಲಿ ಶೇ.45ರಷ್ಟು ತಲೆ ಭಾಗಕ್ಕೆ ಗಾಯವಾಗುವ ಪ್ರಕರಣಗಳು ದಾಖಲಾಗುತ್ತಿದ್ದು, ಶೇ.30ರಷ್ಟು ಗಂಭೀರ ಸ್ವರೂಪದಲ್ಲಿ ಮೆದುಳಿಗೆ ಪೆಟ್ಟಾಗಿರುತ್ತದೆ. ಇದು ವ್ಯಕ್ತಿಯ ಸಾವು ಅಥವಾ ಅಸಾಮರ್ಥ್ಯಕ್ಕೆ ಕಾರಣವಾಗುತ್ತದೆ. ಅಷ್ಟೇ ಅಲ್ಲ ಲಘು ಪ್ರಮಾಣದಲ್ಲಿ ತಲೆಗೆ ಹೊಡೆತ ಬಿದ್ದಾಗ ನೆನಪಿನ ಶಕ್ತಿಯೂ ಹೋಗುವಂತಹ ಸಂದರ್ಭ ಇರುವುದಾಗಿ ಗುಪ್ತಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ
Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ
YouTube ಠಕ್ಕರ್ನೀಡಲು ಮಸ್ಕ್ ಹೊಸ ಟಿವಿ ಆ್ಯಪ್
Facebook, Instagram ಸರ್ವರ್ ಡೌನ್, ಸೇವೆಯಲ್ಲಿ ವ್ಯತ್ಯಾಸ; 829 ಕೋಟಿ ರೂಪಾಯಿ ನಷ್ಟ
Paytm; ಶೀಘ್ರವೇ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ನ ಪರವಾನಿಗೆ ರದ್ದು?
MUST WATCH
ಹೊಸ ಸೇರ್ಪಡೆ
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ