ಈರುಳ್ಳಿ ರಫ್ತು ನಿಷೇಧದಿಂದ ಪಾಕ್ ಗೆ ಲಾಭವಾಗಲಿದೆಯಾ…; ಶರದ್ ಪವಾರ್ ವಾದವೇನು?
ಮಹಾರಾಷ್ಟ್ರ ಭಾಗದ ರೈತರು ಮತ್ತು ಮಹಾರಾಷ್ಟ್ರದ ಜನಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
Team Udayavani, Sep 15, 2020, 4:34 PM IST
ಮುಂಬೈ:ಕೇಂದ್ರ ಸರ್ಕಾರ ದಿಢೀರ್ ಆಗಿ ಈರುಳ್ಳಿ ರಫ್ತನ್ನು ಕೂಡಲೇ ಜಾರಿಗೆ ಬರುವಂತೆ ನಿಷೇಧಿಸಿದೆ. ಏತನ್ಮಧ್ಯೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಂಗಳವಾರ(ಸೆಪ್ಟೆಂಬರ್ 15, 2020) ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಈರುಳ್ಳಿ ರಫ್ತು ನಿಷೇಧದ ಬಗ್ಗೆ ಕೇಂದ್ರ ಮರು ಚಿಂತನೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಪಾಕ್, ಇತರ ದೇಶಗಳಿಗೆ ಲಾಭವಾಗಲಿದೆ!
ಮಧ್ಯಪ್ರದೇಶ, ಗುಜರಾತ್, ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಮುಂಗಾರು ಮಳೆಯಿಂದಾಗಿ ಕಂಗಾಲಾಗಿದ್ದ ರೈತರಿಗೆ ಈರುಳ್ಳಿ ಬೆಳೆಯಿಂದ ಉತ್ತಮ ಬೆಲೆ ಸಿಗುತ್ತಿದ್ದ ಸಂದರ್ಭದಲ್ಲಿಯೇ ರಫ್ತು ನಿಷೇಧದ ದಿಢೀರ್ ನಿರ್ಧಾರ ಕೈಗೊಂಡಿರುವುದು ಈರುಳ್ಳಿ ಬೆಳೆಗಾರರನ್ನು ಕೆರಳಿಸಿರುವುದಾಗಿ ವರದಿ ತಿಳಿಸಿದೆ.
ಭಾರತದ ಈ ನಿರ್ಧಾರದಿಂದಾಗಿ ಗಲ್ಫ್ ದೇಶಗಳು, ಶ್ರೀಲಂಕಾ ಹಾಗೂ ಬಾಂಗ್ಲಾ ದೇಶದ ಈರುಳ್ಳಿ ಮಾರುಕಟ್ಟೆಗಳು ಇಕ್ಕಟ್ಟಿಗೆ ಸಿಲುಕಲಿದೆ. ಅಲ್ಲದೇ ಭಾರತವನ್ನು ಹೊರತುಪಡಿಸಿ ಪಾಕಿಸ್ತಾನ ಮತ್ತು ಇತರ ದೇಶಗಳ ಮಾರುಕಟ್ಟೆಗೆ ಲಾಭವಾಗಲಿದೆ ಎಂದು ಶರದ್ ಪವಾರ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ನೂರು ದಿನದಲ್ಲಿ ಶತಕೋಟಿ ವ್ಯವಹಾರದ ಸಾಧನೆ ; ಪುಣೆ ಮೂಲದ ಈ ಕಂಪೆನಿ ಬಗ್ಗೆ ನಿಮಗೆ ಗೊತ್ತಾ?
ಪಾಕಿಸ್ತಾನ ಕೂಡ ಮುಖ್ಯವಾಗಿ ಈರುಳ್ಳಿ ಬೆಳೆಯುತ್ತಿದ್ದು ಹಲವಾರು ದೇಶಗಳಿಗೆ ಈರುಳ್ಳಿ ರಫ್ತು ಮಾಡುತ್ತಿದೆ. ಒಂದು ವೇಳೆ ಭಾರತ ಈರುಳ್ಳಿ ರಫ್ತು ನಿಷೇಧಿಸಿದರೆ ಅದರ ಲಾಭವನ್ನು ಪಾಕಿಸ್ತಾನ ಪಡೆಯಲಿದೆ. ಅಲ್ಲದೇ ಬಾಂಗ್ಲಾದೇಶದಂತಹ ಪ್ರಮುಖ ದೇಶಕ್ಕೆ ಈರುಳ್ಳಿ ರಫ್ತು ಮಾಡಿದರೆ ನಮ್ಮ ರೈತರಿಗೆ ಅನ್ಯಾಯವಾಗಲಿದೆ ಎಂದು ಪವಾರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿರುವುದನ್ನು ಮಹಾರಾಷ್ಟ್ರ ಭಾಗದ ರೈತರು ಮತ್ತು ಮಹಾರಾಷ್ಟ್ರದ ಜನಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ತನ್ನ ನಿರ್ಧಾರದ ಬಗ್ಗೆ ಮರು ಚಿಂತಿಸುವಂತೆ ಪಿಯೂಷ್ ಗೋಯಲ್ ಜೀ ಅವರಿಗೆ ನಾನು ಮನವಿ ಮಾಡಿಕೊಂಡಿದ್ದೇನೆ ಎಂದು ಪವಾರ್ ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರದ ಲಾಸಾಲ್ ಗಾಂವ್ ಮಾರುಕಟ್ಟೆಯಲ್ಲಿನ ಡಾಟಾದ ಅಂಕಿ ಅಂಶದ ಪ್ರಕಾರ, ಮಾರ್ಚ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಈರುಳ್ಳಿ ದರ ದುಪ್ಪಟ್ಟಾಗಿದೆ. ಭಾರತದ ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಜೂನ್-ಜುಲೈ ತಿಂಗಳಿನಲ್ಲಿ ಕೆಜಿಗೆ 20ರೂಪಾಯಿಯಿಂದ 35, 40 ರೂ.ವರೆಗೆ ಏರಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧಕ್ಕೆ ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ: ನಟಿ- ಸಂಸದೆ ಮಿಮಿ ಚಕ್ರವರ್ತಿಯ ವಿರುದ್ಧ ಅಸಭ್ಯ ಕಮೆಂಟ್ ಮಾಡಿದ ಟ್ಯಾಕ್ಸಿ ಡ್ರೈವರ್ ಬಂಧನ
ಈರುಳ್ಳಿ ರಫ್ತು ನಿಷೇಧ ಕೇವಲ ಮಹಾರಾಷ್ಟ್ರದ ಈರುಳ್ಳಿ ಬೆಳೆಗಾರರನ್ನು ಮಾತ್ರ ಸಂಕಷ್ಟಕ್ಕೆ ದೂಡುವುದಿಲ್ಲ ಬದಲಿಗೆ ಇಡೀ ದೇಶದ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಲಿದೆ ಎಂದು ಅಖಿಲ ಭಾರತ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಅಜಿತ್ ನವಲೆ ತಿಳಿಸಿದ್ದಾರೆ.
ಕೇಂದ್ರದ ಈ ನಿರ್ಧಾರದಿಂದ ರೈತರು ಆಕ್ರೋಶಕ್ಕೊಳಗಾಗಿದ್ದಾರೆ. ಅಲ್ಲದೇ ಪ್ರತಿಭಟನೆ ನಡೆಸುವುದಾಗಿಯೂ ನವಲೆ ಎಚ್ಚರಿಸಿದ್ದಾರೆ. ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳಲು ಬಿಹಾರ ಚುನಾವಣೆಯೇ ಕಾರಣ ಎಂದು ಅವರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್