ಭಾರತದೊಂದಿಗೆ ವ್ಯಾಪಾರ ನಿಷೇಧ: ಉಲ್ಟಾ ಹೊಡೆದ ಪಾಕಿಸ್ಥಾನ!

ಔಷಧ ತಯಾರಿಕೆಗೆ ಕಚ್ಚಾ ವಸ್ತು ಆಮದಿಗೆ ನಿರ್ಧಾರ

Team Udayavani, Sep 3, 2019, 8:06 PM IST

Medicine-726

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದತಿ ಬಳಿಕ ಎಗರಾಡುತ್ತಿದ್ದ ಪಾಕಿಸ್ಥಾನ ಈಗ ಒಂದೊಂದೇ ವಿಚಾರದಲ್ಲಿ ಉಲ್ಟಾ ಹೊಡೆಯುತ್ತಿದೆ.

ಯುದ್ಧದ ವಿಚಾರ, ಪರಮಾಣು ಬಾಂಬ್ ದಾಳಿ ಮಾಡುತ್ತೇವೆ ಎಂದೆಲ್ಲ ಹೇಳಿದ್ದ ಆ ದೇಶ ಕಳೆದೆರಡು ದಿನಗಳಿಂದ ಇಲ್ಲ ಇಲ್ಲ.. ಎನ್ನುತ್ತ ಯೂ ಟರ್ನ್ ತೆಗೆದುಕೊಂಡಿದೆ. ಈಗ ವ್ಯಾಪಾರ ನಿಷೇಧ ವಿಚಾರದಲ್ಲೂ ಉಲ್ಟಾ ಹೊಡೆದಿದೆ.

ಭಾರತದೊಂದಿಗೆ ಆಮದು-ತುರ್ತುಗಳನ್ನು ನಿಷೇಧಿಸಿದ್ದ ಪಾಕಿಸ್ಥಾನಕ್ಕೆ ಅಗತ್ಯ ವಸ್ತುಗಳ ವಿಚಾರದಲ್ಲಿ ಸಂಕಷ್ಟಕ್ಕೀಡಾಗಿದ್ದು, ಇದರಿಂದ ಔಷಧಿ ತಯಾರಿಕೆಯ ಕಚ್ಚಾ ವಸ್ತುಗಳಿಗೆ ಹೇರಲಾಗಿದ್ದ ನಿಷೇಧವನ್ನು ಅದು ರದ್ದುಗೊಳಿಸಿದೆ. ಕ್ಯಾನ್ಸರ್, ಕ್ಷಯ, ಹೃದಯ ಸಂಬಂಧಿ ಕಾಯಿಲೆಗಳೂ ಸೇರಿದಂತೆ ಪ್ರಮುಖ ಔಷಧಿಗಳ ಕಚ್ಚಾ ವಸ್ತುಗಳನ್ನು ಭಾರತದಿಂದ ತರಿಸಿಕೊಳ್ಳಲು ಅದು ಉದ್ಯಮಕ್ಕೆ ಸಮ್ಮತಿ ನೀಡಿದೆ.

ಇದಕ್ಕೆ ಕಾರಣ ಪಾಕ್‌ ನಲ್ಲಿ ಈ ಔಷಧಿಗಳ ಕೊರತೆಯಾಗುವ ಸಾಧ್ಯತೆ ದಟ್ಟವಾಗಿತ್ತು. ಇನ್ನು ಕೆಲವು ದಿನಗಳು ಕಳೆದರೆ ಔಷಧ ಅಲಭ್ಯತೆ ಕಾಡುವುದಾಗಿ ಅಲ್ಲಿನ ಉದ್ಯಮ ವಲಯ ಆತಂಕ ವ್ಯಕ್ತಪಡಿಸಿತ್ತು. ಅಲ್ಲದೇ ಭಾರತ ಹೊರತು ಬೇರೆಯಾವುದೇ ದೇಶಗಳಿಂದ ಕಚ್ಚಾ ವಸ್ತುಗಳನ್ನು ತರಿಸುವುದು ಅತಿ ದುಬಾರಿಯಾದ್ದರಿಂದ ಪಾಕಿಸ್ಥಾನಕ್ಕೆ ಬೇರೆ ದಾರಿಯೇ ಇಲ್ಲ ಎಂದು ಹೇಳಲಾಗಿದೆ.

ಅಲ್ಲದೇ ಪಾಕ್ ಶೇ.50ರಷ್ಟು ಔಷಧಿಗಳ ಕಚ್ಚಾವಸ್ತುಗಳನ್ನು ಭಾರತದಿಂದ ಆಮದು ಮಾಡುತ್ತಿದೆ. ಔಷಧಿಗಳಿಗೆ ಬಳಸುವ 820 ರಾಸಾಯನಿಕಗಳನ್ನು ಅದು ಆಮದು ಮಾಡಿಕೊಳ್ಳುತ್ತಿದೆ. ಇವುಗಳಲ್ಲಿ 62 ಕಚ್ಚಾ ವಸ್ತುಗಳಿಗೆ ಪಾಕ್ ಭಾರತವನ್ನೇ ಶೇ.100ರಷ್ಟು ಆಶ್ರಯಿಸಿದೆ. ಇವುಗಳಲ್ಲಿ 23 ವಸ್ತುಗಳು ಯಾವತ್ತೂ ಬೇಕಾಗುವ, ಅತಿ ಬೇಡಿಕೆಯಿರುವ ಜೀವ ರಕ್ಷಕ ಔಷಧಿಯ ಮೂಲವಸ್ತುಗಳಾಗಿವೆ.

ಈ ಸಂಬಂಧ ಪಾಕ್‌ ನ ಉದ್ದಿಮೆ ಸಚಿವಾಲಯ ಸೆ.2ರಂದು ಘೋಷಣೆ ಹೊರಡಿಸಿದ್ದು, ಆಮದಿಗೆ ಇದ್ದ ತಡೆಯನ್ನು ತೆಗೆದುಹಾಕಿರುವುದಾಗಿ ಹೇಳಿದೆ. ಇನ್ನು ಔಷಧಿ ಸೇರಿದಂತೆ ಅಗತ್ಯ ವಸ್ತುಗಳ ಮೇಲಿನ ನಿಷೇಧ ತೆಗೆದು ಹಾಕಬೇಕೆಂದು ಪಾಕ್‌ ನಲ್ಲಿ ವಿಪರೀತ ಒತ್ತಡವಿದ್ದು, ಮುಂದಿನ ದಿನಗಳಲ್ಲಿ ಅದು ನಿಷೇಧವನ್ನು ಸಂಪೂರ್ಣ ತೆಗೆದು ಹಾಕುವ ಸಾಧ್ಯತೆ ಇದೆ ಎಂದು ಉದ್ಯಮ ವಲಯದ ಮೂಲಗಳು ಹೇಳಿವೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.