ರಾಜಸ್ಥಾನ್, ಮಧ್ಯಪ್ರದೇಶದಲ್ಲಿ 100 ರೂಪಾಯಿ ಗಡಿದಾಟಿದ ಪೆಟ್ರೋಲ್ ಬೆಲೆ!
ಪೆಟ್ರೋಲ್ ಬೆಲೆ ಲೀಟರ್ ಗೆ 87 ಪೈಸೆಯಷ್ಟು ಹಾಗೂ ಡೀಸೆಲ್ ಬೆಲೆ ಒಂದು ರೂಪಾಯಿ ಹೆಚ್ಚಳವಾಗಿತ್ತು
Team Udayavani, May 7, 2021, 11:53 AM IST
ನವದೆಹಲಿ:ನಿರೀಕ್ಷೆಯಂತೆ ಐದು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ತೈಲ ಬೆಲೆ ಪರಿಷ್ಕರಣೆಗೆ ಮುಂದಾದ ಹಿನ್ನೆಲೆಯಲ್ಲಿ ಸತತ ನಾಲ್ಕನೇ ದಿನವೂ ತೈಲ ಬೆಲೆ ಏರಿಕೆಯಾಗಿದ್ದು, ರಾಜಸ್ಥಾನ್ ಮತ್ತು ಮಧ್ಯಪ್ರದೇಶದ ಕೆಲವು ಪ್ರದೇಶಗಳಲ್ಲಿ ಪೆಟ್ರೋಲ್ ಲೀಟರ್ ಬೆಲೆ ನೂರು ರೂಪಾಯಿ ದಾಟಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಉದಯವಾಣಿ ವರದಿ ಬೆನ್ನಲ್ಲೇ ಗಂಗಾವತಿಯ ಬಟ್ಟೆ ಅಂಗಡಿಗಳ ಕದ್ದು ಮುಚ್ಚಿ ವ್ಯಾಪಾರಕ್ಕೆ ಬ್ರೇಕ್
ಶುಕ್ರವಾರ (ಮೇ 07) ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್ ಬೆಲೆ ಲೀಟರ್ ಗೆ 28ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 31 ಪೈಸೆ ಹೆಚ್ಚಳ ಮಾಡಿರುವುದಾಗಿ ತಿಳಿಸಿದೆ. ಇದರೊಂದಿಗೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 91.27 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 81.73 ರೂ,ಗೆ ಹೆಚ್ಚಳವಾಗಿದೆ.
ಕಳೆದ ನಾಲ್ಕು ದಿನಗಳಲ್ಲಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 87 ಪೈಸೆಯಷ್ಟು ಹಾಗೂ ಡೀಸೆಲ್ ಬೆಲೆ ಒಂದು ರೂಪಾಯಿ ಹೆಚ್ಚಳವಾಗಿತ್ತು ಎಂದು ತಿಳಿಸಿದೆ.
ವಾಣಿಜ್ಯ ರಾಜಧಾನಿ ಮುಂಬಯಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 97.61 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 88.82 ರೂಪಾಯಿಗೆ ಹೆಚ್ಚಳವಾಗಿರುವುದಾಗಿ ಇಂಡಿಯನ್ ಆಯಿಲ್ ಕಾರ್ಪೋರೇಶನ್ ವೆಬ್ ಸೈಟ್ ನಲ್ಲಿ ಲಭ್ಯವಿರುವ ಅಂಕಿಅಂಶದಲ್ಲಿ ತಿಳಿಸಿದೆ.
ರಾಜಸ್ಥಾನದ ಎರಡು ಪ್ರದೇಶಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ ನೂರು ರೂಪಾಯಿಯ ಗಡಿ ದಾಟಿದೆ ಮತ್ತು ಮಧ್ಯಪ್ರದೇಶದಲ್ಲಿ ತೈಲದ ಮೇಲೆ ಭಾರೀ ಪ್ರಮಾಣದ ವ್ಯಾಟ್ ವಿಧಿಸಿದ ಪರಿಣಾಮ ಅನುಪ್ಪುರ್ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 101.86 ರೂಪಾಯಿ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 92.39ರೂಪಾಯಿಗೆ ಮಾರಾಟವಾಗುತ್ತಿರುವುದಾಗಿ ವರದಿ ವಿವರಿಸಿದೆ.
ರಾಜಸ್ಥಾನದ ಶ್ರೀ ಗಂಗಾನಗರ್ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 102.15 ರೂಪಾಯಿಗೆ ಹೆಚ್ಚಳವಾಗಿರುವುದಾಗಿ ವರದಿ ತಿಳಿಸಿದೆ. ಈ ವರ್ಷ ಎರಡನೇ ಬಾರಿ ದೇಶದ ಕೆಲವು ಪ್ರದೇಶಗಳಲ್ಲಿ ಪೆಟ್ರೋಲ್ ಬೆಲೆ ನೂರು ರೂಪಾಯಿ ದಾಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು