9ನೇ ದಿನ ತೈಲ ಬೆಲೆಯೇರಿಕೆ ; ಒಟ್ಟಾರೆ ಪೆಟ್ರೋಲ್‌, ಡೀಸೆಲ್‌ ತಲಾ 5 ರೂ. ಏರಿಕೆ


Team Udayavani, Jun 16, 2020, 6:00 AM IST

9ನೇ ದಿನ ತೈಲ ಬೆಲೆಯೇರಿಕೆ ; ಒಟ್ಟಾರೆ ಪೆಟ್ರೋಲ್‌, ಡೀಸೆಲ್‌ ತಲಾ 5 ರೂ. ಏರಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ತೈಲ ಬೆಲೆಯೇರಿಕೆಯ ನಾಗಾಲೋಟಕ್ಕೆ ತಡೆಯೇ ಇಲ್ಲವಾಗಿದೆ.

ಲಾಕ್‌ಡೌನ್‌ ಕಾರಣ ಸತತ 82 ದಿನಗಳ ಕಾಲ, ದೈನಂದಿನ ಬೆಲೆ ಪರಿಷ್ಕರಣೆಯನ್ನು ಸರಕಾರಿ ತೈಲ ಕಂಪೆನಿಗಳು ನಿಲ್ಲಿಸಿದ್ದವು.

ಮೊನ್ನೆ ಜೂ.7ರಿಂದ ಈ ಪ್ರಕ್ರಿಯೆ ಶುರು ಮಾಡಿದ ಅನಂತರ ದಿನದಿಂದ ದಿನಕ್ಕೆ ಬೆಲೆ ಏರುತ್ತಲೇ ಇದೆ.

ಇದೀಗ ಸತತ 9ನೇ ದಿನ ಏರಿಕೆ ಮುಂದುವರಿದಿದೆ. ಪೆಟ್ರೋಲ್‌ ಬೆಲೆ ದಿಲ್ಲಿಯಲ್ಲಿ ಲೀ.ಗೆ 48, ಡೀಸೆಲ್‌ ಲೀ.ಗೆ 59 ಪೈಸೆ ಹೆಚ್ಚಳವಾಗಿದೆ.

ಇದರ ಪರಿಣಾಮ ಬೆಂಗಳೂರಿನಲ್ಲಿ ಸೋಮವಾರ ಪೆಟ್ರೋಲ್‌ ಬೆಲೆ ಲೀ.ಗೆ 78.73 ರೂ.ಗೇರಿದೆ. ಇನ್ನು ಡೀಸೆಲ್‌ ಬೆಲೆ 70.95 ರೂ.ಗೆ ಮುಟ್ಟಿದೆ.

ಅಲ್ಲಿಗೆ ಎರಡೂ ತೈಲಗಳ ಬೆಲೆಯಲ್ಲಿ 5 ರೂ. ಹೆಚ್ಚಳವಾಗಿದೆ. ಬಹುಶಃ ಇಲ್ಲಿಗೆ ಬೆಲೆಯೇರಿಕೆ ನಿಲ್ಲಬಹುದೆಂದು ಅಂದಾಜಿಸಲಾಗಿದೆ.

ಲಾಕ್‌ಡೌನ್‌ ಬಿಗಿಯನ್ನು ಕೇಂದ್ರ ಸರಕಾರ ಸಡಿಲಗೊಳಿಸಿದಾಗಲೇ ಈ ರೀತಿಯ ಏರಿಕೆಯೊಂದರ ಸುಳಿವು ಸಿಕ್ಕಿತ್ತು. ವಾಹನಗಳು ಮತ್ತೆ ರಸ್ತೆಗಳಿಯುತ್ತಿದ್ದಂತೆಯೇ 5 ರೂ.ವರೆಗೆ ಹಂತ ಹಂತವಾಗಿ ಬೆಲೆ ಏರಿಸಬಹುದೆಂದು ಹೇಳಲಾಗಿತ್ತು. ಅದೀಗ ಸತ್ಯವಾಗಿದೆ!

ಸೌದಿ ಅರಾಮ್ಕೊದಿಂದ ಏಷ್ಯಾದ 5 ಕಂಪನಿಗಳಿಗೆ ರಫ್ತುಕಡಿತ
ವಿಶ್ವದಲ್ಲೇ ಬೃಹತ್‌ ಪ್ರಮಾಣದಲ್ಲಿ ತೈಲ ರಫ್ತು ಮಾಡುವ ಸೌದಿ ಅರಾಮ್ಕೊ ಕಂಪೆನಿ, ಜುಲೈನಲ್ಲಿ ಏಷ್ಯಾದ 5 ಕಂಪೆನಿಗಳಿಗೆ ಕಚ್ಚಾ ತೈಲ ಪೂರೈಕೆಯನ್ನು ಕಡಿಮೆ ಮಾಡಲಿದೆ ಎನ್ನಲಾಗಿದೆ.

ಚೀನದಂತಹ ರಾಷ್ಟ್ರಗಳ ಸಂಸ್ಕರಣಾ ಕೇಂದ್ರಗಳಲ್ಲಿ ಕಾಣಿಸುವ, ಮಧ್ಯಮ ಮತ್ತು ಉನ್ನತ ಹಂತದ ಕಚ್ಚಾ ತೈಲದ ಪೂರೈಕೆ ಕಡಿಮೆಯಾಗಲಿದೆ.

ಅದರಲ್ಲೂ ನಾಲ್ಕು ಕಂಪೆನಿಗಳಿಗೆ ಸ್ವಲ್ಪ ಮಾತ್ರ ಕಡಿತವಾಗಲಿದೆ. ತೈಲಪೂರೈಕೆ ರಾಷ್ಟ್ರಗಳ ನಡುವೆ ನಡೆದ ಮಾತುಕತೆಯ ನಂತರ ಇಂತಹ ನಿರ್ಧಾರ ಮಾಡಲಾಗಿದೆ. ಜುಲೈನಲ್ಲಿ ಕಚ್ಚಾತೈಲದ ಬೆಲೆಯೂ ಏರುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.