ಭಾರತದಲ್ಲಿ 300 ಕೋಟಿ ರೂ. ಹೂಡಿಕೆ ಮಾಡಲಿದೆ ಫಿಲಿಪ್ಸ್..!
ದೇಶದಲ್ಲಿ 1,500 ಮOದಿಯನ್ನು ಸಂಸ್ಥೆಯ ವಿವಿಧ ಹುದ್ದೆಗಳಿಗೆ ನೇಮಿಸಿಕೊಳ್ಳುವುದಕ್ಕೆ ಯೋಜನೆ
Team Udayavani, Aug 3, 2021, 4:33 PM IST
ನವ ದೆಹಲಿ : ಫಿಲಿಪ್ಸ್ ಗ್ಲೋಬಲ್ ಸಿಇಒ ಫ್ರಾನ್ಸ್ ವ್ಯಾನ್ ಹೌಟನ್ ಭಾರತದಲ್ಲಿ 300 ಕೋಟಿ ರೂಪಾಯಿಗಳಷ್ಟು ಹೂಡಿಕೆ ಮಾಡುವುದಾಗಿ ಹೇಳಿದ್ದಾರೆ.
ದೇಶದಲ್ಲಿ 1,500 ಮOದಿಯನ್ನು ಸಂಸ್ಥೆಯ ವಿವಿಧ ಹುದ್ದೆಗಳಿಗೆ ನೇಮಿಸಿಕೊಳ್ಳುವುದಕ್ಕೆ ಸಂಸ್ಥೆ ಯೋಜಿಸಿದ್ದು, ಕಂಪನಿಯು ತನ್ನ ಪುಣೆ ಶಾಖೆಯನ್ನು ವಿಸ್ತರಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಶಕ್ತಿ ಕೇಂದ್ರವಾದ ಬಿಎಸ್ವೈ ಕಾವೇರಿ ನಿವಾಸ; ಶಿಫಾರಸು ಮಾಡುವಂತೆ ಒತ್ತಡ
ಈ ಕುರಿತಾಗಿ ಪ್ರತಿಕ್ರಿಯಿಸಿದ ಫ್ರಾನ್ಸ್ ವ್ಯಾನ್ ಹೌಟನ್, ಬೆಂಗಳೂರಿನಲ್ಲಿರುವ ನಮ್ಮ ಇನ್ನೋವೇಷನ್ ಕೇಂದ್ರದಲ್ಲಿ ಸಂಸ್ಥೆಯ ಹೆಚ್ಚಿನ ಸಾಫ್ಟ್ ವೇರ್ ಸಂಪನ್ಮೂಲಗಳನ್ನು ಸಂಗ್ರಹಿಸಲಾಗುತ್ತದೆ. ಚೆನ್ನೈನಲ್ಲಿ ನಮ್ಮ ಜಾಗತಿಕ ವ್ಯಾಪಾರ ಸೇವೆಗಳ ಕೇಂದ್ರವನ್ನು ವಿಸ್ತರಿಸುತ್ತಿದ್ದೇವೆ. ಭಾರತದಲ್ಲಿ ಫಿಲಿಪ್ಸ್ ಸಂಸ್ಥೆ ಪ್ರಬಲವಾಗಿ ಮುನ್ನಡೆಯುತ್ತಿದೆ. ಕನಿಷ್ಠ 1500 ಮಂದಿಯನ್ನು ಸಂಸ್ಥೆಯ ಭಾರತದ ಶಾಖೆಯ ವಿವಿಧ ಹುದ್ದೆಗಳಿಗೆ ನೇಮಿಸಿಕೊಳ್ಳುವ ಯೋಜನೆಯಲ್ಲಿ ಸಂಸ್ಥೆಗಿದೆ ಎಂದು ತಿಳಿಸಿದ್ದಾರೆ.
ಇನ್ನು, ಸಂಸ್ಥೆ ಭಾರತದಲ್ಲಿ ಉತ್ತಮ ಬೆಳವಣಿಗೆಯನ್ನು ಕಾಣುತ್ತಿದ್ದು, ಭಾರತದಲ್ಲಿ ಸಂಸ್ಥೆಯನ್ನು ಕ್ರಮೇಣ ವಿಸ್ತರಿಸುವ ಯೋಜನೆಯನ್ನೂ ಕೂಡ ಹೊಂದಿದೆ. ಭಾರತದಲ್ಲಿನ ‘ಪ್ರತಿಭಾವಂತ ಯಂಗ್ ಮೈಂಡ್’ ಗಳನ್ನು ನೇಮಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.
ಮಾರುಕಟ್ಟೆಯ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಭಾರತದಲ್ಲಿ ಹೆಚ್ಚಿನ ಸ್ಥಳೀಯ ಉದ್ಪಾದನೆಯನ್ನು ಮಾಡುವುದಕ್ಕೆ ಸಂಸ್ಥೆ ಕಾರ್ಯೋನ್ಮುಖವಾಗುತ್ತದೆ. ಸ್ಥಳೀಯ ಉದ್ಯೋಗಿಗಳಿಗೆ ಹೆಚ್ಚಿನ ಆದ್ಯತೆಯನ್ನು ಸಂಸ್ಥೆ ನೀಡಲಿದೆ ಎಂದಿದ್ದಾರೆ.
ಇದನ್ನೂ ಓದಿ : ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಯಿಂದ ದೀರ್ಘದಂಡ ನಮಸ್ಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ