ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ 51.19 ಲಕ್ಷ ರೈತರಿಗೆ 1023 ಕೋಟಿ ರೂ. ಬಿಡುಗಡೆ
Team Udayavani, Aug 9, 2021, 4:40 PM IST
ಬೆಂಗಳೂರು: ಪ್ರಸಕ್ತ ಸಾಲಿನ ಕಿಸಾನ್ ಸಮ್ಮಾನ್ ಯೋಜನೆಯಡಿ ಸೋಮವಾರ ಎರಡನೇ ಕಂತಿನಲ್ಲಿ ಕರ್ನಾಟಕ ರಾಜ್ಯದ 51.19 ಲಕ್ಷ ರೈತರಿಗೆ 1023 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದ್ದು, ಎರಡನೇ ಕಂತಿನಲ್ಲಿ ಬಿಡುಗಡೆಯಾದ ಹಣವನ್ನು ರೈತರ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ವಾರ್ಷಿಕವಾಗಿ 6 ಸಾವಿರ ರೂ.ಗಳ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಈ ಅನುದಾನವನ್ನು 2 ಸಾವಿರ ರೂ.ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತಿದೆ.
ಇದನ್ನೂ ಓದಿ:ಆಗಸ್ಟ್ 9 ಮಲೆ(ಳೆ)ನಾಡಿಗರ ಪಾಲಿಗೆ ಕರಾಳ ದಿನ.! ಇನ್ನೂ ತಪ್ಪಲಿಲ್ಲ ಸಂತ್ರಸ್ಥರ ಕಣ್ಣೀರು.. !
ಇಲ್ಲಿಯವರೆಗೆ 55.06 ಲಕ್ಷ ರೈತ ಕುಟುಂಬಗಳು 1 ಕಂತು ಪಡೆಯುವ ಮೂಲಕ ಯೋಜನೆಯ ಲಾಭವನ್ನು ಪಡೆದಿದ್ದು, 2019ರ ಮಾರ್ಚ್ ನಿಂದ ಜುಲೈ 2021 ರವರೆಗೆ ಕೇಂದ್ರ ಸರ್ಕಾರದಿಂದ ಒಟ್ಟು 6940.07 ಕೋ.ರೂಗಳ ಆರ್ಥಿಕ ಸಹಾಯಧನ ನೀಡಲಾಗಿದೆ. 2021 ಪ್ರಸಕ್ತ ವರ್ಷದ ಎರಡನೇ ಕಂತಿನಲ್ಲಿ 51.19 ಲಕ್ಷ ರೈತರಿಗೆ 1023 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಅನುಮೋದಿಸಲ್ಪಟ್ಟ ರೈತರಿಗೆ ಎರಡು ಕಂತುಗಳಲ್ಲಿ ವರ್ಷಕ್ಕೆ 4 ಸಾವಿರ ರೂ.ನಂತೆ ಆರ್ಥಿಕ ನೆರವು ವರ್ಗಾವಣೆಗೆ ಆದೇಶ ಹೊರಡಿಸಲಾಗಿದ್ದು, ಇಲ್ಲಿಯವರೆಗೆ 2849.16 ಕೋಟಿ ರೂ.ಗಳ ಆರ್ಥಿಕ ಸಹಾಯಧನವನ್ನು ನೀಡಲಾಗಿದೆ.
ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಪಾವತಿ ಮಾಡಲಾಗುತ್ತಿದ್ದು, ದೇಶದಲ್ಲಿ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯವು ಅತೀ ಹೆಚ್ಚು ಶೇಕಡಾವಾರು ಆಧಾರ್ ಆಧಾರಿತ ವಹಿವಾಟುಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದರಿಂದ 2020-21 ರಲ್ಲಿ ಭಾರತ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿಯೂ ದೊರೆತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
Tesla; ಭಾರತದಲ್ಲಿ ಎಲಾನ್ ಮಸ್ಕ್ 25,000 ಕೋಟಿ ಹೂಡಿಕೆ?
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ