ಜೆಟ್ ಏರ್ ವೇಸ್ಗೆ ಮರು ಜೀವ: ಪಿಎಂಓನಿಂದ ಟಾಟಾ ಮನ ಒಲಿಕೆ
Team Udayavani, Nov 16, 2018, 5:23 PM IST
ಹೊಸದಿಲ್ಲಿ : ತೀವ್ರ ಸಾಲದ ಹೊರೆಯಿಂದ ನಲುಗುತ್ತಿರುವ ಜೆಟ್ ಏರ್ ವೇಸ್ ವಿಮಾನಯಾನ ಸಂಸ್ಥೆಗೆ ಮರು ಜೀವ ನೀಡುವ ದಿಶೆಯಲ್ಲಿ ಪ್ರಧಾನಿ ಕಾರ್ಯಾಲಯ ಟಾಟಾ ಸನ್ಸ್ ಲಿಮಿಟೆಡ್ ಕಂಪೆನಿಯ ಮನ ಒಲಿಕೆ ಮಾಡುತ್ತಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ.
ಭಾರತೀಯ ವಿಮಾನ ಯಾನ ರಂಗದಲ್ಲಿ ಎರಡನೇ ಅತೀ ದೊಡ್ಡ ಮಾರುಕಟ್ಟೆ ಪಾಲನ್ನು ಹೊಂದಿರುವ ಜೆಟ್ ಏರ್ ವೇಸ್ ಅಗಾಧ ಪ್ರಮಾಣದ ಸಾಲದ ಹೊರೆಗೆ ಕುಸಿಯುತ್ತಿರುವುದಾಗಿ ವರದಿಗಳು ತಿಳಿಸಿವೆ.
ಜೆಟ್ ಏರ್ ವೇಸ್ ಸಂಸ್ಥೆಯನ್ನು ಪಾರುಗೊಳಿಸುವ ಮಾರ್ಗೋಪಾಯಗಳನ್ನು ಅರಸುವಂತೆ ಪ್ರಧಾನಿ ಕಾರ್ಯಾಲಯ ಟಾಟಾ ಸನ್ಸ್ ಕಂಪೆನಿಯಯನ್ನು ಕೇಳಿಕೊಂಡಿರುವುದಾಗಿ ವರದಿಯಾಗಿದೆ. ಇದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ಜೆಟ್ ಏರ್ ವೇಸ್ನಿಂದ ತನಗೆ ಸಂದಾಯವಾಗಬೇಕಿರುವ ಸಾಲ ಬಾಧ್ಯತೆಗಳನ್ನು ಬಿಟುಕೊಡಲು ಸಿದ್ಧವಿದೆ ಎಂದು ಮೂಲಗಳು ತಿಳಿಸಿವೆ.
ಜೆಟ್ ಏರ್ ವೇಸ್ ಕಂಪೆನಿಯಲ್ಲಿ ನರೇಶ್ ಗೋಯಲ್ ಮತ್ತು ಅವರ ಕುಟುಂಬದವರ ಶೇ.51 ಪಾಲಿದೆ; ಕೊಲ್ಲಿಯ ಎತಿಹಾದ್ ಏರ್ ವೇಸ್ಗೆ ಶೇ.24ರ ಪಾಲಿದೆ. ಈ ವಾರದ ಆದಿಯಲ್ಲಿ ಜೆಟ್ ಏರ್ ವೇಸ್ ಜುಲೈ-ಸೆಪ್ಟಂಬರ್ ತ್ತೈಮಾಸಿಕದಲ್ಲಿ 1,261 ಕೋಟಿ ರೂ. ನಷ್ಟವನ್ನು ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು