PPFನಲ್ಲಿ 2.5 ಲಕ್ಷಕ್ಕಿಂತ ಹೆಚ್ಚು ಹಣ ಠೇವಣಿಗೆ ಬೀಳಲಿದೆ ತೆರಿಗೆ : ಏಪ್ರಿಲ್ ನಿಂದ ಜಾರಿ
Team Udayavani, Mar 22, 2021, 12:47 PM IST
ನವ ದೆಹಲಿ : ಒಬ್ಬ ವ್ಯಕ್ತಿಯು ವರ್ಷದಲ್ಲಿ ಇಪಿಎಫ್ ಅಥವಾ ಪಿಪಿಎಫ್ ನಲ್ಲಿ 2.5 ಲಕ್ಷ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ಠೇವಣಿ ಮಾಡಿದರೆ ಅದರ ಮೇಲೆ ತೆರಿಗೆ ಸಂಗ್ರಹಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ಪ್ರಾವಿಡೆಂಟ್ ಫಂಡ್ ಖಾತೆಗಳಿಗೆ ಸಂಬಂಧಿಸಿದ ಹೊಸ ನಿಯಮಗಳು ಯಾರು ತಿಂಗಳಿಗೆ 85 ಸಾವಿರಗಳಿಗಿಂತ ಹೆಚ್ಚು ಸಂಬಳ ಪಡೆಯುವವರಿಗೆ ಮಾತ್ರ ಪರಿಣಾಮ ಬೀರಲಿದೆ.
ಓದಿ : ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 300 ಅಂಕ ಕುಸಿತ, 14,700ಕ್ಕೆ ಕುಸಿದ ನಿಫ್ಟಿ
ಮೂಲ ವೇತನದ ಶೇಕಡಾ 12 ರಷ್ಟು ಉದ್ಯೋಗಿ ಮತ್ತು ಶೇಕಡಾ 12 ರಷ್ಟು ಕಂಪನಿಯು ಠೇವಣಿ ಮಾಡುತ್ತದೆ. ವ್ಯಕ್ತಿಯ ವಾರ್ಷಿಕ ಪ್ಯಾಕೇಜ್ 10 ಲಕ್ಷದ 20 ಸಾವಿರ ಅಥವಾ ಮಾಸಿಕ 85 ಸಾವಿರ ರೂಪಾಯಿ ಆಗಿದ್ದಲ್ಲಿ ಈ ಹೊಸ ನಿಯಮ ಪರಿಣಾಮ ಬೀರುವುದಿಲ್ಲ. ಇದು 85 ಸಾವಿರಕ್ಕೂ ಹೆಚ್ಚು ಸಂಬಳ ಹೊಂದಿರುವ ಜನರ ಮೇಲೆ ಪರಿಣಾಮ ಬೀರಲಿದೆ.
ತೆರಿಗೆ ಉಳಿಸುವ ಉದ್ದೇಶದಿಂದ ಇಪಿಎಫ್ ನಲ್ಲಿ ಹೂಡಿಕೆ ಮಾಡುವವರನ್ನು ಸರ್ಕಾರ ಗುರಿಯಾಗಿಸಿಕೊಂಡಿದೆ. ಮೂಲ ವೇತನದ ಶೇಕಡಾ 12 ರಷ್ಟು ಇಪಿಎಫ್ ನಲ್ಲಿ ಹೂಡಿಕೆ ಮಾಡಲಾಗುತ್ತದೆ. ಆದರೆ ಕೆಲವರು ತೆರಿಗೆ ಉಳಿತಾಯ ಮಾಡುವ ಉದ್ದೇಶದಿಂದ ಇಪಿಎಫ್ ಅಥವಾ ಪಿಪಿಎಫ್ ನಲ್ಲಿ ಹೆಚ್ಚಿನ ಹಣವನ್ನು ಠೇವಣಿ ಇಟ್ಟು ಉತ್ತಮ ಬಡ್ಡಿಯನ್ನು ಪಡೆಯುತ್ತಾರೆ. ಇಲ್ಲಿಯವರೆಗೆ ಇಪಿಎಫ್ ನಲ್ಲಿ ಮಾಡುವ ಹೂಡಿಕೆ ಮೇಲೆ ಯಾವುದೇ ತೆರಿಗೆ ವಿಧಿಸುತ್ತಿರಲಿಲ್ಲ. ಆದರೆ ಪ್ರಸಕ್ತ ಹಣಕಾಸು ವರ್ಷದಿಂದ ಈ ನಿಯಮ ಬದಲಾಗಲಿದೆ.
ನೌಕರರ ಠೇವಣಿಗಳ ಮೇಲಿನ ತೆರಿಗೆಯನ್ನು ಮಾತ್ರ ಹೇಳಲಾಗಿದೆ. ಉದ್ಯೋಗದಾತರು ಹಾಕುವ ಹಣದ ಮೇಲೆ ಯಾವುದೇ ತೆರಿಗೆ ವಿಧಿಸುವುದಿಲ್ಲ.
ಏಪ್ರಿಲ್ 1 ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ.
ಓದಿ : ತಾಂತ್ರಿಕ ದೋಷದಿಂದ ಉತ್ಪಾದನೆ ಕುಂಠಿತ: ಬೇಡಿಕೆಯಷ್ಟು ಪೂರೈಕೆಯಾಗುತ್ತಿಲ್ಲ ವಿದ್ಯುತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ