ಡೈನ್‌ಔಟ್ ಜೊತೆ ಕೈಜೋಡಿಸಿದ ಜಿಯೋ; ಗ್ರೇಟ್ ಇಂಡಿಯನ್ ರೆಸ್ಟೋರೆಂಟ್ ಫೆಸ್ಟಿವಲ್‌


Team Udayavani, Aug 3, 2019, 3:07 PM IST

JIo_GIRF-1

ಮುಂಬೈ:ಆಗಸ್ಟ್ 1ರಿಂದ ಸೆಪ್ಟೆಂಬರ್ 1ರವರೆಗೆ ನಡೆಯುವ ಗ್ರೇಟ್ ಇಂಡಿಯನ್ ರೆಸ್ಟೋರೆಂಟ್ ಫೆಸ್ಟಿವಲ್ (ಜಿಐಆರ್‌ಎಫ್) ಹೊಚ್ಚಹೊಸ ಆವೃತ್ತಿಗಾಗಿ ಜಿಯೋ ಹಾಗೂ ಭಾರತದ ಅತಿದೊಡ್ಡ ಡೈನಿಂಗ್ ಔಟ್ ವೇದಿಕೆಯಾದ ಡೈನ್‌ಔಟ್ ಒಟ್ಟಾಗಿ ಸೇರಿವೆ. ಡೈನ್‌ಔಟ್‌ನ ಈವರೆಗಿನ ಅತಿದೊಡ್ಡ ಆಹಾರ ಮತ್ತು ಪಾನೀಯಗಳ ಹಬ್ಬದ ಸಂದರ್ಭದಲ್ಲಿ ಬಳಕೆದಾರರಿಗೆ ವಿಶಿಷ್ಟ ಪ್ರಯೋಜನಗಳನ್ನು ನೀಡಲಿರುವ ಈ ಪಾಲುದಾರಿಕೆಯ ಮೂಲಕ, ಜಿಯೋ ತನ್ನ ಬಳಕೆದಾರರ ಡಿಜಿಟಲ್ ಜೀವನ ಅನುಭವವನ್ನು ಉತ್ಕೃಷ್ಟಗೊಳಿಸುವುದನ್ನು ಮುಂದುವರೆಸಿದೆ.

ಸಾಮಾನ್ಯವಾಗಿ ಡೈನ್‌ಔಟ್ ಬಳಕೆದಾರರು ಈ ವೇದಿಕೆಯಲ್ಲಿ ಕಾಯ್ದಿರಿಸುವಿಕೆಗಳಿಗಾಗಿ ಬುಕಿಂಗ್ ಶುಲ್ಕವನ್ನು ನೀಡಬೇಕಾಗುತ್ತದೆ. ಇದಕ್ಕೆ ಪ್ರತಿಯಾಗಿ ಅವರು ಬಿಲ್ ಮೊತ್ತದ ಮೇಲೆ ರಿಯಾಯಿತಿ ಪಡೆಯಬಹುದಾಗಿದ್ದು, ಆಹಾರ, ಪಾನೀಯ ಮತ್ತು ಬಫೆಗಳ ಮೇಲೆ 1+1 ಆಫರ್‌ಗಳನ್ನೂ ಆನಂದಿಸಬಹುದು.

ಈ ಜಿಐಆರ್‌ಎಫ್ ಸಂದರ್ಭದಲ್ಲಿ, ಡೈನ್‌ಔಟ್ ಕಾರ್ಯಾಚರಿಸುವ 17 ನಗರಗಳಲ್ಲಿನ ಜಿಯೋ ಚಂದಾದಾರರು ಆಫರ್ ಅವಧಿಯಲ್ಲಿನ ತಮ್ಮ ಮೊದಲ ಬುಕಿಂಗ್ ಶುಲ್ಕದ ಮೇಲೆ ರೂ. 100 ರಿಯಾಯಿತಿ ಪಡೆಯಬಹುದು. ಇದು ಜಿಯೋ ಬಳಕೆದಾರರಿಗೆ ಮಾತ್ರವೇ ದೊರಕುವ ವಿಶಿಷ್ಟ ಸೌಲಭ್ಯವಾಗಿದೆ.

ಜಿಯೋ ಬಳಕೆದಾರರು ರಿಯಾಯಿತಿ ಪಡೆಯಲು ಬೇಕಾದ ಕೋಡ್ ಮೈಜಿಯೋ ಆಪ್‌ನ ಕೂಪನ್ಸ್ ವಿಭಾಗದಲ್ಲಿ ಲಭ್ಯವಿರಲಿದೆ. ಈಗಾಗಲೇ ಮೈಜಿಯೋ ಆಪ್ ಬಳಸುತ್ತಿಲ್ಲದ ಜಿಯೋ ಚಂದಾದಾರರು ಕೂಡ ಆಪ್ ಡೌನ್‌ಲೋಡ್ ಮಾಡಿಕೊಂಡು ಡೈನ್‌ಔಟ್ ವೇದಿಕೆಯಲ್ಲಿ ಉಪಯೋಗಿಸಲು ಬೇಕಾದ ಕೂಪನ್‌ಗಳನ್ನು ಪಡೆದುಕೊಳ್ಳಬಹುದು.

ಫೆಸ್ಟಿವಲ್ ಕುರಿತು:
ಒಟ್ಟು ಬಿಲ್, ಆಹಾರದ ಬಿಲ್, ಪಾನೀಯಗಳ ಬಿಲ್ ಹಾಗೂ ಬಫೆಗಳ ಮೇಲೆ 50% ರಿಯಾಯಿತಿ ಹಾಗೂ ಕೂಪನ್‌ಗಳನ್ನು ನೀಡಲಿರುವ ಈ ಹಬ್ಬವು ಆಗಸ್ಟ್ 1ರಿಂದ ಸೆಪ್ಟೆಂಬರ್ 1ರವರೆಗೆ ನಡೆಯಲಿದೆ. ಈ ಕೊಡುಗೆಗಳನ್ನು ಕೆಳಕಂಡ 17 ನಗರಗಳ 8000+ ರೆಸ್ಟೋರೆಂಟ್‌ಗಳಾದ್ಯಂತ ಪಡೆಯಬಹುದು: ದೆಹಲಿ (ದೆಹಲಿ ಎನ್‌ಸಿಆರ್), ಮುಂಬಯಿ, ಬೆಂಗಳೂರು, ಕೋಲ್ಕಾತಾ, ಪುಣೆ, ಚೆನ್ನೈ, ಹೈದರಾಬಾದ್, ಅಹಮದಾಬಾದ್, ಚಂಡೀಗಢ, ಗೋವಾ, ಜೈಪುರ, ಲಖನೌ, ಇಂದೋರ್, ಸೂರತ್, ಕೊಚ್ಚಿ, ಲುಧಿಯಾನಾ ಹಾಗೂ ನಾಗಪುರ.

2017ರಲ್ಲಿ ಪ್ರಾರಂಭವಾದ ಜಿಐಆರ್‌ಎಫ್, ರೆಸ್ಟೋರೆಂಟ್ ಉದ್ಯಮದ ಮೊತ್ತಮೊದಲ ಆಹಾರ ಮತ್ತು ಪಾನೀಯಗಳ ಹಬ್ಬವಾಗಿದ್ದು, ಡೈನಿಂಗ್ ಔಟ್ ಸಂಸ್ಕೃತಿಯನ್ನು ಬೆಳೆಸುವ ಹಾಗೂ ಭಾರತೀಯರು ಹೊರಗೆ ಆಹಾರ ಸೇವಿಸುವ ವಿಧಾನವನ್ನು ಬದಲಿಸುವ ಉದ್ದೇಶ ಹೊಂದಿದೆ. ಈ ಹಬ್ಬವು ಬಳಕೆದಾರರು ಹಾಗೂ ಪಾಲುದಾರ ರೆಸ್ಟೋರೆಂಟ್‌ಗಳಿಬ್ಬರಿಗೂ ಉಪಯುಕ್ತವಾಗಿದೆ. ಜನಪ್ರಿಯ ರೆಸ್ಟೋರೆಂಟ್‌ಗಳಲ್ಲಿ ದೊರಕುವ ಯಾವುದೇ ಪ್ರಶ್ನೆಗಳಿಲ್ಲದ 50% ರಿಯಾಯಿತಿ, ಕ್ಯಾಶ್‌ಬ್ಯಾಕ್‌, ಬ್ಯಾಂಕ್ ಕೊಡುಗೆ, ಪಾಲುದಾರರ ಕೊಡುಗೆ ಮತ್ತಿತರ ಸೌಲಭ್ಯಗಳು ಈ ಹಬ್ಬದ ಸಫಲತೆಗೆ ಪ್ರಮುಖ ಕಾರಣಗಳಾಗಿವೆ.

ನಾಲ್ಕನೇ ಆವೃತ್ತಿಯಲ್ಲಿ ನಿರೀಕ್ಷಿಸಬಹುದಾದ ಸಂಗತಿಗಳು
* ಒಟ್ಟು ಬಿಲ್, ಆಹಾರದ ಬಿಲ್, ಪಾನೀಯಗಳ ಬಿಲ್ ಹಾಗೂ ಬುಫೆಗಳ ಮೇಲೆ 8000+ ರೆಸ್ಟೋರೆಂಟ್‌ಗಳಿಂದ 50% ರಿಯಾಯಿತಿ
* ಭಾರತದ 17 ನಗರಗಳ ಜನಪ್ರಿಯ ರೆಸ್ಟೋರೆಂಟ್‌ಗಳು ಫೆಸ್ಟಿವಲ್‌ನಲ್ಲಿ ಭಾಗಿ

ಜಿಯೋ ಬಳಕೆದಾರರಿಗೆ ಪ್ರಯೋಜನಗಳು  
* ಜಿಐಆರ್‌ಎಫ್ ಸಂದರ್ಭ ಮೊದಲ ಬುಕಿಂಗ್ ಶುಲ್ಕದ ಮೇಲೆ ರೂ. 100 ರಿಯಾಯಿತಿ
* ಆಹಾರ, ಪಾನೀಯ, ಬುಫೆ ಅಥವಾ ಒಟ್ಟು ಬಿಲ್‌ನ ಮೇಲೆ ಕೂಪನ್ ಕೋಡ್ ಅನ್ವಯ
* ಮೈಜಿಯೋ ಆಪ್‌ನ ಕೂಪನ್ಸ್ ವಿಭಾಗದಲ್ಲಿ ರಿಯಾಯಿತಿ ಕೂಪನ್ ಕೋಡ್ ಲಭ್ಯ

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.