ಬಿಎಸ್‌ಎನ್‌ಎಲ್ ಗೆ ಪುನಃಶ್ಚೇತನ?


Team Udayavani, Jul 19, 2019, 5:00 AM IST

t-39

ವದೆಹಲಿ: ಬಿಎಸ್‌ಎನ್‌ಎಲ್ ಅನ್ನು ಪುನಶ್ಚೇತನಗೊಳಿಸಲಾಗುತ್ತದೆಯೇ, ಇಲ್ಲವೇ ಎಂಬ ಪ್ರಶ್ನೆಗಳು ಎದ್ದಿರುವಂತೆಯೇ ಸರ್ಕಾರದ ವತಿಯಿಂದಲೇ ಅದಕ್ಕೆ ಬಂಡವಾಳದ ಶಕ್ತಿ ನೀಡಲಾಗುತ್ತದೆ ಎಂಬ ಮಾಹಿತಿ ಹೊರಬಿದ್ದಿದೆ. ಕೇಂದ್ರ ದೂರಸಂಪರ್ಕ ಖಾತೆ ಸಚಿವ ರವಿಶಂಕರ ಪ್ರಸಾದ್‌ ಮತ್ತು ಸಹಾಯಕ ಸಚಿವ ಸಂಜಯ ಶ್ಯಾಮರಾವ್‌ ಭೋತ್ರೆ ರಾಜ್ಯಸಭೆಯಲ್ಲಿ ಗುರುವಾರ ಈ ಮಾಹಿತಿ ನೀಡಿದ್ದಾರೆ.

ದೂರಸಂಪರ್ಕ ಕ್ಷೇತ್ರದಲ್ಲಿ ಸ್ಥಿರತೆ ಸಾಧಿಸಲು ಸಾರ್ವಜನಿಕ ಸ್ವಾಮ್ಯದ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ. ವಿಶ್ವದ ಇತರ ಭಾಗಗಳಿಗೆ ಹೋಲಿಸಿದರೆ, ಮೊಬೈಲ್ ಡೇಟಾಕ್ಕೆ ಕಡಿಮೆ ದರವೇ ಇದೆ ಎಂದಿದ್ದಾರೆ. ಸಚಿವ ಭೋತ್ರೆ ಮಾತನಾಡಿ, ಬಿಎಸ್ಸೆನ್ನೆಲ್ಗೆ ವಿತ್ತೀಯ ನೆರವು ನೀಡುವ ಬಗ್ಗೆ ಪ್ರಸ್ತಾಪವಿದೆ. ಅಲ್ಲದೆ, 55 ಸಾವಿರ ಉದ್ಯೋಗಿಗಳನ್ನು ತೆಗೆದು ಹಾಕುವ ಇರಾದೆ ಸರ್ಕಾರಕ್ಕೆ ಇಲ್ಲ ಎಂದಿದ್ದಾರೆ.

ಚೀನಾ ಗಡಿಗೆ ಐಎಂಸ್ಯಾಟ್: ಚೀನಾ ಗಡಿಗುಂಟ ಇರುವ 496 ಗ್ರಾಮಗಳಿಗೆ ಐಎಂಸ್ಯಾಟ್ ಉಪಗ್ರಹ (IMSAT satellite) ಮೂಲಕ ಲಿಂಕ್‌ ಮಾಡಲು ಉದ್ದೇಶಿಸಲಾಗಿದೆ. ಮೇ 13ರಂದು ಎನ್‌ಎಸ್‌ಎಸ್‌-6 ಉಪಗ್ರಹದ ಟ್ರಾನ್ಸ್‌ಪಾಂಡರ್‌ ಸ್ವಿಚ್ಆಫ್ ಬಳಿಕ ಭದ್ರತಾ ವ್ಯವಸ್ಥೆ ಸೇರಿದಂತೆ ಸಂಪರ್ಕ ವ್ಯವಸ್ಥೆಗೆ ತೊಂದರೆಯಾಗಿತ್ತು.

ಇ-ಪಾಸ್‌ಪೋರ್ಟ್‌: ಅತ್ಯಾಧುನಿಕ ಭದ್ರತಾ ವ್ಯವಸ್ಥೆಗಳನ್ನು ಒಳಗೊಂಡ ಇ-ಪಾಸ್‌ಪೋರ್ಟ್‌ಗಳನ್ನು ಶೀಘ್ರವೇ ಪರಿಚಯಿಸಲಾಗುವುದು ಎಂದು ಸಚಿವ ವಿ.ಮುರಳೀಧರನ್‌ ಹೇಳಿದ್ದಾರೆ. ಅದನ್ನು ಟ್ಯಾಂಪರ್‌ ಮಾಡಲು ಮುಂದಾದರೂ, ಅದನ್ನು ಗುರುತಿಸಲು ಸಾಮರ್ಥ್ಯ ಹೊಂದಲಿದೆ ಎಂದಿದ್ದಾರೆ. ಅರ್ಜಿದಾರನ ವೈಯಕ್ತಿಕ ವಿವರಗಳು ಡಿಜಿಟಲ್ ಸಹಿ ಮೂಲಕ ಸಂಗ್ರಹವಾಗಿರಲಿದೆ. ಶೀಘ್ರದಲ್ಲಿಯೇ ಜಾಗತಿಕ ಟೆಂಡರ್‌ ಕರೆಯಲಾಗುತ್ತದೆ ಎಂದಿದ್ದಾರೆ.

ಹಣಕಾಸು ವಿಧೇಯಕ ಅಂಗೀಕಾರ: ಲೋಕಸಭೆಯಲ್ಲಿ ಹಣಕಾಸು ವಿಧೇಯಕ 2019ಕ್ಕೆ ಅಂಗೀಕಾರ ನೀಡಲಾಗಿದೆ. ಈ ಕುರಿತ ಚರ್ಚೆಯಲ್ಲಿ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಜನರ ಜೀವನ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿಯೇ ಬಜೆಟ್‌ನಲ್ಲಿ ಹಲವು ಪ್ರಸ್ತಾಪಗಳನ್ನು ಸೇರಿಸಲಾಗಿದೆ ಎಂದಿದ್ದಾರೆ. 1 ಕೋಟಿ ರೂ.ಗಳಿಂತ ಹೆಚ್ಚು ನಗದು ವಿಥ್‌ಡ್ರಾ ಮಾಡಿದಾಗ ಶೇ.2ರಷ್ಟು ಟಿಡಿಎಸ್‌ ಹೇರಿರುವ ಬಗ್ಗೆ ಪ್ರಸ್ತಾಪ ಮಾಡಿದ ಅವರು, ತೆರಿಗೆ ಪಾವತಿಯನ್ನು ಹೊಂದಾಣಿಕೆ ಮಾಡಬಹುದು ಎಂದಿದ್ದಾರೆ.

ಹೆಚ್ಚಿದ ಉತ್ಪಾದಕತೆ: ಸದ್ಯ ನಡೆಯುತ್ತಿರುವ 17ನೇ ಲೋಕಸಭೆಯ ಕಲಾಪಗಳು 20 ವರ್ಷಗಳಿಗೆ ಹೋಲಿಕೆ ಮಾಡಿದರೆ ಅತ್ಯಂತ ಹೆಚ್ಚು ಫ‌ಲಕಾರಿಯಾಗಿವೆ. ಮಂಗಳವಾರದ ವರೆಗೆ ಶೇ.128ರಷ್ಟು ಕಲಾಪ ನಡೆಸಿದ ಹೆಗ್ಗಳಿಕೆ ಲೋಕಸಭೆಯದ್ದಾಗಿದೆ. ರಾಜ್ಯಸಭೆ ಕೂಡ ಮಂಗಳವಾರದ ವರೆಗೆ ಶೇ.98ರಷ್ಟು ಕಲಾಪ ನಡೆಸಿದೆ.

ಅಂಬಾನಿ- ಅದಾನಿ ಉಲ್ಲೇಖದಿಂದ ಗದ್ದಲ
ಹಣಕಾಸು ವಿಧೇಯಕ ಕುರಿತ ಚರ್ಚೆ ವೇಳೆ ಟಿಎಂಸಿ ಸಂಸದ ಸುಗತ ರಾಯ್‌, ‘ಅಂಬಾನಿ ಮತ್ತು ಅದಾನಿ ಈ ಸರ್ಕಾರದ ಅವಿಭಾಜ್ಯ ಅಂಗ’ ಎಂದು ಹೇಳಿದ್ದು ಕೋಲಾಹಲಕ್ಕೆ ಕಾರಣವಾಯಿತು. ಬಜೆಟ್‌ನಲ್ಲಿ 400 ಕೋಟಿ ರೂ.ಗಳಿಗೂ ಅಧಿಕ ಲಾಭ ಇರುವ ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲವಾಗುವಂತೆ ಶೇ.30ರಿಂದ ಶೇ.25ರಷ್ಟು ತೆರಿಗೆ ಪ್ರಮಾಣ ಕಡಿಮೆ ಮಾಡಲಾಗಿದೆ. ಆದರೆ ಡೀಸೆಲ್ ಮೇಲಿನ ತೆರಿಗೆ ಹೆಚ್ಚಿಸಲಾಗಿದೆ ಎಂದು ದೂರಿದರು. ಅಂಬಾನಿ ಮತ್ತು ಅದಾನಿ ಈ ಸರ್ಕಾರದ ಭಾಗ ಎಂದಿದ್ದಕ್ಕೆ ಬಿಜೆಪಿ ಸಂಸದರು ಆಕ್ಷೇಪಿಸಿ, ಆ ಪದಗಳನ್ನು ಕಡತದಿಂದ ತೆಗೆದುಹಾಕುವಂತೆ ಒತ್ತಾಯಿಸಿದರು.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.