ಚಿನ್ನಾಭರಣಗಳ ಮೇಲೆ ಎಚ್‌ಯುಐಡಿ ಹಾಲ್‌ಮಾರ್ಕ್‌ ಕಡ್ಡಾಯ

ಏ.1ರ ನಂತರ ಎಚ್‌ಯುಐಡಿ ನಂಬರ್‌ ಇಲ್ಲದ ಚಿನ್ನ ಮಾರಾಟ ಮಾಡುವಂತಿಲ್ಲ

Team Udayavani, Mar 6, 2023, 7:45 AM IST

ಚಿನ್ನಾಭರಣಗಳ ಮೇಲೆ ಎಚ್‌ಯುಐಡಿ ಹಾಲ್‌ಮಾರ್ಕ್‌ ಕಡ್ಡಾಯ

ಏ.1ರಿಂದ ಆರು ಸಂಖ್ಯೆಯ ಹಾಲ್‌ಮಾರ್ಕ್‌ ಯೂನಿಕ್‌ ಐಡೆಂಟಿಫಿಕೇಶನ್‌ ನಂಬರ್‌ (ಎಚ್‌ಯುಐಡಿ) ಇರುವ ಚಿನ್ನಾಭರಣ ಮಾರಾಟಕ್ಕೆ ಮಾತ್ರ ಅವಕಾಶವಿದೆ ಎಂದು ಕೇಂದ್ರ ಸರ್ಕಾರ ಆದೇಶಿಸಿದೆ. ಅದರ ಪ್ರಕಾರ, ಎಚ್‌ಯುಐಡಿ ನಂಬರ್‌ ಇಲ್ಲದ ಹಳೆಯ ಹಾಲ್‌ಮಾರ್ಕ್‌ ಚಿನ್ನಾಭರಣ ಮಾರಾಟಕ್ಕೆ ಮಾ.31ರ ನಂತರ ಅವಕಾಶವಿರುವುದಿಲ್ಲ.

ಏತಕ್ಕಾಗಿ ಈ ನಿರ್ಧಾರ?
ಗ್ರಾಹಕರ ಹಿತರಕ್ಷಣೆಯ ದೃಷ್ಟಿಯಿಂದ ಈ ಕ್ಷೇತ್ರದ ಪಾಲುದಾರರ ಸಭೆಯ ಬಳಿಕ ಗ್ರಾಹಕರ ವ್ಯವಹಾರಗಳ ಸಚಿವಾಲಯವು ಜ.18ರಂದು ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿತು.

ಎಚ್‌ಯುಐಡಿ ನಂಬರ್‌ ಗುರುತಿಸುವುದು ಹೇಗೆ?:
ಚಿನ್ನದ ಪರಿಶುದ್ಧತೆಯನ್ನು ಪ್ರಮಾಣಿಕರಿಸಲು ಹಾಲ್‌ಮಾರ್ಕ್‌ ಕಡ್ಡಾಯವಾಗಿದೆ. ಈ ಹಿಂದೆ ಚಿನ್ನಾಬರಣದ ಮೇಲೆ ಬಿಐಎಸ್‌ ಲೋಗೊ, ಆಭರಣದ ಪರಿಶುದ್ಧತೆ ಪ್ರಮಾಣ, ಮಾರಾಟ ಮಾಡುವವರ ಲೋಗೊ ಹಾಗೂ ಹಾಲ್‌ಮಾರ್ಕಿಂಗ್‌ ಕೇಂದ್ರದ ಲೋಗೊ ಹಾಕಲಾಗುತ್ತಿತ್ತು. ಇನ್ನು ಮುಂದೆ ಆರು ಸಂಖ್ಯೆಯ ಎಚ್‌ಯುಐಡಿ ನಂಬರ್‌ ಹಾಕಲಾಗುತ್ತದೆ.

ಸಮಾಯಾವಕಾಶ ನೀಡಲಾಗಿತ್ತು
2021ರ ಜು.1ರಲ್ಲೇ ಎಚ್‌ಯುಐಡಿ ನಂಬರ್‌ ಪರಿಚಯಿಸಲಾಗಿತ್ತು. ನಾಲ್ಕು ಸಂಖ್ಯೆಯ ಹಾಲ್‌ಮಾರ್ಕ್‌ ಇರುವ ಚಿನ್ನಾಭರಣ ಮಾರಾಟಕ್ಕೆ, ತಮ್ಮ ಬಳಿ ಇರುವ ಹಳೆಯ ಸ್ಟಾಕ್‌ಗಳ ಕ್ಲಿಯರೆನ್ಸ್‌ಗಾಗಿ ಚಿನ್ನಾಭರಣ ಮಾಲೀಕರಿಗೆ ಒಂದು ವರ್ಷ ಒಂಬತ್ತು ತಿಂಗಳು ಸರ್ಕಾರ ಅವಕಾಶ ನೀಡಿತ್ತು. ಚಿನ್ನಕ್ಕೆ ಎಚ್‌ಯುಐಡಿ ನಂಬರ್‌ ಕಡ್ಡಾಯಗೊಳಿಸಲು ಹಿಂದೆಯೇ ತೀರ್ಮಾನಿಸಲಾಗಿತ್ತು. ಅಗತ್ಯ ಸಮಾಯಾವಕಾಶ ನೀಡಿ 2023ರ ಏ.1ರಿಂದ ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತಿದೆ.

ಹಳೆಯ ಚಿನ್ನದ ಗತಿ ಏನು?
ಗ್ರಾಹಕರ ಬಳಿ ಇರುವ ಹಳೆಯ ಚಿನ್ನಕ್ಕೆ ಮಾನ್ಯತೆ ಇದ್ದೇ ಇರುತ್ತದೆ. ಚಿನ್ನ ಕೊಳ್ಳುವವರು ಪರಿಶುದ್ಧತೆ ಆಧಾರದಲ್ಲಿ ಅದಕ್ಕೆ ಬೆಲೆ ಕಟ್ಟುತ್ತಾರೆ.

ವಂಚನೆಗೆ ಒಳಗಾದರೆ ಪರಿಹಾರ
2018ರ ಬ್ಯೂರೋ ಆಫ್ ಇಂಡಿಯನ್‌ ಸ್ಟಾಂಡರ್ಡ್‌ ನಿಯಮಗಳ ಸೆಕ್ಷನ್‌ 49ರ ಪ್ರಕಾರ, ಗ್ರಾಹಕರು ಖರೀದಿಸಿದ ಹಾಲ್‌ಮಾರ್ಕ್‌ ಆಭರಣದ ಮೇಲೆ ಗುರುತು ಮಾಡುವುದಕ್ಕಿಂತ ಕಡಿಮೆ ಶುದ್ಧತೆ ಇದೆ ಎಂದು ಕಂಡುಬಂದರೆ, ಆಗ ಖರೀದಿದಾರರು/ಗ್ರಾಹಕರು ಪರಿಹಾರಕ್ಕೆ ಅರ್ಹರಾಗಿರುತ್ತಾರೆ. ಶುದ್ಧತೆಯಲ್ಲಿ ಎಷ್ಟು ಕಡಿಮೆಯಿದೆ ಎಂಬ ಆಧಾರದಲ್ಲಿ ಅದರ ತೂಕದ ಎರಡು ಪಟ್ಟು, ಜತೆಗೆ ಪರೀಕ್ಷಾ ಶುಲ್ಕ ಸೇರಿ ಪರಿಹಾರ ನೀಡಬೇಕಾಗುತ್ತದೆ.

ಹಾರ್ಲ್ಮಾರ್ಕ್‌ ಪ್ರಯೋಜನ
ಹಾರ್ಲ್ಮಾರ್ಕ್‌ ಮಾಡಲಾದ ಆಭರಣಗಳು, ಪ್ರಮಾಣೀಕರಣ ಮತ್ತು ಗುಣಮಟ್ಟದ ದೃಢೀಕರಣವಾಗಿದ್ದು, ಅದು ಗ್ರಾಹಕರಿಗೆ ಚಿನ್ನದ ಶುದ್ಧತೆಯ ವಿಶ್ವಾಸವನ್ನು ನೀಡುತ್ತದೆ. ಇದು ಗ್ರಾಹಕರಿಗೆ ಜುವೆಲ್ಲರ್ನಿಂದ ವಂಚನೆಯನ್ನು ತಪ್ಪಿಸುತ್ತದೆ. ಎಷ್ಟು ಶುದ್ಧತೆಯ ಚಿನ್ನವನ್ನು ಖರೀದಿಸಲಾಗುತ್ತಿದೆ ಎಂಬ ಬಗ್ಗೆ ದೃಢೀಕರಣವನ್ನು ಗ್ರಾಹಕರು ಪಡೆಯುತ್ತಾರೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.