ಪ್ರತ್ಯೇಕತಾವಾದಿಗಳ ಬಂದ್ ಕರೆ: ಕಾಶ್ಮೀರ ಜನಜೀವನ ಸ್ತಬ್ಧ
Team Udayavani, Aug 12, 2017, 12:01 PM IST
ಶ್ರೀನಗರ : ಸಂವಿಧಾನದ 35ಎ ವಿಧಿಗೆ ಕಾನೂನು ಸವಾಲು ಒಡ್ಡಲಾಗಿರುವುದನ್ನು ಪ್ರತಿಭಟಿಸಿ ಪ್ರತ್ಯೇಕತಾವಾದಿಗಳು ನೀಡಿದ ಬಂದ್ ಕರೆಯನ್ವಯ ಇಂದು ಕಾಶ್ಮೀರದಲ್ಲಿ ಸಾಮಾನ್ಯ ಜನಜೀವನ ಬಹುತೇಕ ಸ್ತಬ್ಧಗೊಂಡಿದೆ.
ಸಂವಿಧಾನದ 35ಎ ವಿಧಿಯನ್ನು ರದ್ದು ಮಾಡಿದಲ್ಲಿ ಮುಸ್ಲಿಂ ಬಾಹುಳ್ಯದ ಜಮ್ಮು ಕಾಶ್ಮೀರದಲ್ಲಿ ಜನಸಂಖ್ಯೆಯ ನಮೂನೆಯು ಬದಲಾಗುವುದೆಂಬ ಭಯ ಪ್ರತ್ಯೇಕತಾವಾದಿಗಳದ್ದಾಗಿದೆ.
ಪ್ರತ್ಯೇಕತಾವಾದಿಗಳ ಬಂದ್ ಕರೆಯನ್ವಯ ಇಂದು ಕಾಶ್ಮೀರದಲ್ಲಿ ಶಾಲೆ, ಕಾಲೇಜು, ವ್ಯಾಪಾರೋದ್ಯಮಗಳು, ಅಂಗಡಿ ಮುಂಗಟ್ಟುಗಳು, ಖಾಸಗಿ ಕಚೇರಿಗಳು ಮುಚ್ಚಿದ್ದವು. ಕಾಶ್ಮೀರದ ಬಹುತೇಕ ಭಾಗಗಳಲ್ಲಿ ಬಸ್ಸುಗಳು ಇಂದು ರಸ್ತೆಯಿಂದ ದೂರ ಉಳಿದಿದ್ದವು. ಸರಕಾರಿ ಕಾರ್ಯಾಲಯಗಳಲ್ಲಿ ಹಾಜರಾತಿ ತುಂಬ ಕ್ಷೀಣವಾಗಿತ್ತು.
ಮಹಾರಾಜಗಂಜ್, ನೌಹಟ್ಟಾ, ಖನ್ಯಾರ್, ರೈನಾವಾರಿ ಮೊದಲಾದೆಡೆಗಳಲ್ಲಿ ಅಹಿತಕರ ಘಟನೆ ಸಂಭವಿಸದಂತೆ ನೋಡಿಕೊಳ್ಳಲು ಪೊಲೀಸರು ಜನಸಂಚಾರವನ್ನು ನಿರ್ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ