ಇಲೆಕ್ಟ್ರಿಕ್ ಕಾರು v/s ಹೈಡ್ರೋಜನ್ ಪವರ್ ಕಾರು; ಮಾರುತಿ ಸುಜುಕಿ ಹೇಳೋದೇನು?

ಸಣ್ಣ ಪೆಟ್ರೋಲ್ ಕಾರಿನ ಬೆಲೆ ಪ್ರಸ್ತುತ 5 ಲಕ್ಷ. ಆದರೆ ಪೂರ್ಣ ಪ್ರಮಾಣದ ...

Team Udayavani, Apr 26, 2019, 3:25 PM IST

Car-New

ನವದೆಹಲಿ:ದೇಶದ ಪ್ರಮುಖ ಕಾರು ಉತ್ಪಾದಕ ಕಂಪನಿ ಮಾರುತಿ ಸುಜುಕಿ 2020ರೊಳಗೆ  ಇಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡುವುದಾಗಿ ಹೇಳಿತ್ತು. ಆದರೆ ಇದೀಗ ಇಲೆಕ್ಟ್ರಿಕ್ ವೆಹಿಕಲ್ ನ ಬೆಲೆಯ ಬಗ್ಗೆ ಗಂಭೀರವಾದ ಪ್ರಶ್ನೆ ಎತ್ತಿದೆ. ಸಣ್ಣ ಪೆಟ್ರೋಲ್ ಕಾರಿನ ಬೆಲೆ ಪ್ರಸ್ತುತ 5 ಲಕ್ಷ. ಆದರೆ ಪೂರ್ಣ ಪ್ರಮಾಣದ ಸಂಚಾರ ಯೋಗ್ಯವಾದ ಇಲೆಕ್ಟ್ರಿಕ್ ಕಾರಿನ ಬೆಲೆ ಸುಮಾರು 12ಲಕ್ಷವಾಗಬಹುದು ಎಂದು ತಿಳಿಸಿದೆ. ಅಲ್ಲದೇ ಇಲೆಕ್ಟ್ರಿಕ್ ಕಾರಿನ ಚಾರ್ಚಿಂಗ್ ಇನ್ಫ್ರಾಸ್ಟ್ರಕ್ಚರ್ ಅಳವಡಿಕೆ ಕೂಡ ಕಷ್ಟ ಎಂದು ವಿವರಿಸಿದೆ.

ಅಗ್ಗದ ಇಲೆಕ್ಟ್ರಿಕ್ ಕಾರು ಉತ್ಪಾದನೆ ಅಸಾಧ್ಯ!

ಭಾರತ ಸರ್ಕಾರ ಆಟೋ ಇಂಡಸ್ಟ್ರಿಯನ್ನು ಬೆಳೆಸುವ ನಿಟ್ಟಿನಲ್ಲಿ ಇಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಹೆಚ್ಚು ಒತ್ತು ಕೊಡಲು ಮುಂದಾಗಿದೆ. ಆದರೆ ಇಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ಗಂಭೀರವಾದ ಸವಾಲುಗಳು ಇವೆ. ಅದರಲ್ಲಿಯೂ ಮುಖ್ಯವಾದದ್ದು ಬೆಲೆಯದ್ದಾಗಿದೆ ಎಂದು ಮಾರುತಿ ಸುಜುಕಿ ಅಧ್ಯಕ್ಷ ಆರ್ ಸಿ ಭಾರ್ಗವ್ ತಿಳಿಸಿದ್ದಾರೆ.

ಕಳೆದ ವರ್ಷ ಭಾರ್ಗವ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, 2020ರೊಳಗೆ ಇಲೆಕ್ಟ್ರಿಕ್ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಯೋಚನೆ ಬಗ್ಗೆ ಹೇಳಿದ್ದರು. ಅಲ್ಲದೇ ಅದು ಕಡಿಮೆ ಬೆಲೆಯಲ್ಲಿ ಲಭ್ಯವಾಗಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದ್ದರು.

5ಲಕ್ಷ ರೂಪಾಯಿಯ ಪೆಟ್ರೋಲ್ ಕಾರು ಇಲೆಕ್ಟ್ರಿಕ್ ಮಾದರಿಯಲ್ಲಿ ಖರೀದಿಸುವುದಾದರೆ ಅದರ ಬೆಲೆ ಅಂದಾಜು 9 ಲಕ್ಷ ರೂಪಾಯಿಗಿಂತಲೂ ಹೆಚ್ಚಾಗಬಹುದು. ಇದನ್ನು ನೀವು ಖರೀದಿಸುತ್ತೀರಾ ಎಂಬುದು ಭಾರ್ಗವ್ ಪ್ರಶ್ನೆ. ಇಲೆಕ್ಟ್ರಿಕ್ ವಾಹನಗಳಿಗೆ ಗೂಡ್ಸ್ ಅಂಡ್ ಸರ್ವಿಸ್ ಟ್ಯಾಕ್ಸ್ ಶೇ.12ರಷ್ಟು ಇದೆ. ಪೆಟ್ರೋಲ್ ಕಾರುಗಳಿಗೆ ಜಿಎಸ್ ಟಿ ಶೇ.28ರಷ್ಟಿದೆ. ಆದರೆ ಇಲೆಕ್ಟ್ರಿಕ್ ಕಾರುಗಳಿಗೆ ಕೇಂದ್ರ ಸರ್ಕಾರದಿಂದ ಸಬ್ಬಿಡಿ ಸಿಗಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದ ಫೇಮ್ ವೆಹಿಕಲ್ ಸ್ಕೀಮ್ ಇದಕ್ಕೆ ಅನ್ವಹಿಸುವುದಿಲ್ಲ.

ಇಲೆಕ್ಟ್ರಿಕ್ ಕಾರುಗಳ ಚಾರ್ಜಿಂಗ್ ಮೂಲಭೂತ ಸೌಕರ್ಯ ಕಷ್ಟ!

ಇಲೆಕ್ಟ್ರಿಕ್ ಕಾರುಗಳ ಬೆಲೆ ಒಂದೆಡೆಯಾದರೆ, ಮತ್ತೊಂದೆಡೆ ದೇಶದಲ್ಲಿ ಅದಕ್ಕೆ ಬೇಕಾದ ಚಾರ್ಜಿಂಗ್ ಸೌಲಭ್ಯದ ಕೊರತೆ. ಇಲೆಕ್ಟ್ರಿಕ್ ವಾಹನಗಳು ಜನಪ್ರಿಯವಾಗಬೇಕಿದ್ದರೆ, ಮೊದಲು ಚಾರ್ಜಿಂಗ್ ಸೌಲಭ್ಯದತ್ತ ಗಮನಹರಿಸಬೇಕು. ಹಲವು ಜನರು ತಮ್ಮ ವಾಹನವನ್ನು ಮನೆಯಲ್ಲಿ ಪಾರ್ಕ್ ಮಾಡಲು ಸಾಧ್ಯವಿಲ್ಲ ಎಂಬಂತಾಗಿದ್ದರೆ ಅವರಿಗೆ ಇಲೆಕ್ಟ್ರಿಕ್ ವಾಹನವನ್ನು ನಿಗದಿತ ಸ್ಥಳದಲ್ಲಿ ಚಾರ್ಜ್ ಮಾಡಲು ಸಾಧ್ಯವಿಲ್ಲ ಎಂದು ಮಾರುತಿ ಸುಜುಕಿ ಹೇಳಿದೆ.

ಇಲೆಕ್ಟ್ರಿಕ್ ಕಾರು ಅಥವಾ ಹೈಡ್ರೋಜನ್ ಪವರ್ ವಾಹನಗಳು:

ಮಾರುತಿ ಸುಜುಕಿ ಹಾಗೂ ಟೋಯೋಟೊ ಈಗಾಗಲೇ ಗುಜರಾತ್ ನಲ್ಲಿ ಲಿಥಿಯಂ ಐಯೋನ್ ಬ್ಯಾಟರೀಸ್ ತಯಾರಿಕೆಗಾಗಿ ಕೈಜೋಡಿಸಿವೆ.

ಏತನ್ಮಧ್ಯೆ ಭವಿಷ್ಯದಲ್ಲಿ ಒಂದು ವೇಳೆ ಇಲೆಕ್ಟ್ರಿಕ್ ಕಾರುಗಳನ್ನು ಅಥವಾ ಜಲಜನಕ ಶಕ್ತಿಯ ವಾಹನ(ಹೈಡ್ರೋಜನ್ ಪವರ್)ಗಳನ್ನು ತಯಾರಿಸಬೇಕೇ ಎಂಬುದನ್ನು ಕಂಪನಿ ನಿರ್ಧಾರ ತೆಗೆದುಕೊಳ್ಳಲಿದೆ. ಈ ಬಗ್ಗೆ ಕಂಪನಿ ಅಧ್ಯಯನ ನಡೆಸುತ್ತಿದೆ.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.