ಕೋವಿಡ್ 19 : ಆಗಸ್ಟ್ ನಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆಗೆ ಭಾರತದಲ್ಲಿ ಚಾಲನೆ..!
Team Udayavani, May 23, 2021, 1:57 PM IST
ನವ ದೆಹಲಿ : ಕೋವಿಡ್ ಸೋಂಕಿನ ಎರಡನೇ ಅಲೆ ಏರಿಕೆಯಾಗುತ್ತಿರುವುದು ಒಂದೆಡೆಯಾದರೇ, ದೇಶದಲ್ಲಿ ಲಸಿಕೆಯ ಕೊರತೆ ಮತ್ತೊಂದೆಡೆ. ಕೊರತೆಯನ್ನು ನೀಗಿಸಲು ದೇಶ ಹರಸಾಹಸ ಪಡುತ್ತಿದ್ದರೂ ಆ ಸಮಸ್ಯೆಯನ್ನು ನೀಗಿಸಲು ಸರ್ಕಾರಕ್ಕೆ ಸಾಗುತ್ತಿಲ್ಲ. ಈ ನಡುವೆ ಸ್ಪಟ್ನಿಕ್ ವಿ ಆ್ಯಂಟಿ ಕೋವಿಡ್ ಲಸಿಕೆಯನ್ನು ಉತ್ಪಾದನೆ ಮಾಡಲು ರಷ್ಯಾ ಭಾರತಕ್ಕೆ ಶೀಘ್ರದಲ್ಲೇ ಅನುಮತಿಸಲಿದೆ ಎಂಬ ಮಾಹಿತಿಯನ್ನು ಅಂತರಾಷ್ಟ್ರೀಯ ಸುದ್ಧಿ ಸಂಸ್ಥೆಗಳು ನೀಡಿವೆ.
ಇದನ್ನೂ ಓದಿ : ತಾಯಿಯ ನೆನಪುಗಳಿರುವ ಮೊಬೈಲ್ ಫೋನ್ ಹುಡುಕಿಕೊಡಿ ಪ್ಲೀಸ್.. : ಜಿಲ್ಲಾಡಳಿತಕ್ಕೆ ಬಾಲಕಿ ಮನವಿ
ಸ್ಪುಟ್ನಿಕ್ ವಿ ಲಸಿಕೆಯ ಉತ್ಪಾದನೆಗೆ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ಭಾರತ ತಯಾರಿ ಮಾಡಿಕೊಳ್ಳುತ್ತಿದ್ದು, ಬರುವ ಒಂದೆರಡು ವರ್ಷಗಳಲ್ಲಿ ಅಂದರೇ ಅಂದಾಜು ಆಗಸ್ಟ್ ಮೊದಲ ವಾರ ಅಥವಾ ಎರಡನೇ ವಾಋದಲ್ಲಿ ಸ್ಪುಟ್ನಿಕ್ ವಿ ಲಸಿಕೆಯ ಉತ್ಪಾದನೆ ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈ ಕುರಿತಾಗಿ ಸೈಂಟ್ ಪೀಟರ್ ಬರ್ಗ್ಸ್ ನಲ್ಲಿ ಸ್ಥಳಿಯ ವರದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ರಷ್ಯಾದ ಭಾರತೀಯ ರಾಯಭಾರಿ ಡಿ ಬಾಲಾ ವೆಂಕಟೇಶ್ ವರ್ಮಾ, ”ವಿಶ್ವಾದ್ಯಂತ ಸರಬರಾಜು ಮಾಡುವ ಸ್ಪುಟ್ನಿಕ್ ವಿ ಲಸಿಕೆಯ ಶೇಕಡಾ 65 ರಿಂದ 70 ರಷ್ಟನ್ನು ಭಾರತದಲ್ಲಿಯೇ ಉತ್ಪಾದಿಸಲಾಗುತ್ತದೆ. ರಷ್ಯಾ ಸರ್ಕಾರ ಈಗಾಗಲೇ ಈ ತಿಂಗಳ 1 ರಿಂದ 2,10,000 ಡೋಸ್ ಲಸಿಕೆಗಳನ್ನು ಎರಡು ಹಂತಗಳಲ್ಲಿ ಭಾರತಕ್ಕೆ ಕಳುಹಿಸಿದೆ. ಇನ್ನೂ ಮೂರು ಮಿಲಿಯನ್ ಡೋಸ್ ಲಸಿಕೆ ಶೀಘ್ರದಲ್ಲೇ ಭಾರತಕ್ಕೆ ತಲುಪಲಿವೆ” ಎಂದು ಅವರು ಹೇಳಿದ್ದಾರೆ.
ಜೂನ್ ಕೊನೆಯ ವಾರದ ವೇಳೆಗೆ ಐದು ಲಕ್ಷ ಡೋಸ್ ಗಳನ್ನು ಭಾರತಕ್ಕೆ ಕಳುಹಿಸುವ ಗುರಿಯನ್ನು ರಷ್ಯಾ ಸರ್ಕಾರ ಹೊಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸುಮಾರು 995.40 ರೂ ಬೆಲೆಯಿರುವ ಸ್ಪುಟ್ನಿಕ್ ವಿ ಲಸಿಕೆಯ ಉತ್ಪಾದನೆಯು ಭಾರತದಲ್ಲಿ ಆಗಸ್ಟ್ ನಿಂದ ಪ್ರಾರಂಭವಾಗುವ ನಿರೀಕ್ಷೆಯಿದ್ದು, ಹೈದರಾಬಾದ್ ನ ಡಾ. ರೆಡ್ಡಿ’ಸ್ ಲ್ಯಾಬರೆಟರೀಸ್ ನಲ್ಲಿ ಉತ್ಪಾದಿಸಲಾಗುತ್ತದೆ ಎನ್ನಲಾಗುತ್ತಿದೆ.
ಇದನ್ನೂ ಓದಿ : ಯಾಸ್ ಚಂಡಮಾರುತ : ಪ್ರಧಾನಿ ನೇತೃತ್ವದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ