ಎಜಿಆರ್ ವಿಚಾರ ಮತ್ತೆ ಪರಿಶೀಲಿಸಲ್ಲ ; ಸುಪ್ರೀಂ ಕೋರ್ಟ್ ಸ್ಪಷ್ಟ ಎಚ್ಚರಿಕೆ
Team Udayavani, Mar 19, 2020, 7:19 AM IST
ಹೊಸದಿಲ್ಲಿ: ಬಾಕಿ ಇರುವ ಸರಿದೂಗಿಸಲ್ಪಟ್ಟ ಒಟ್ಟು ಆದಾಯವನ್ನು (ಅಡ್ಜೆಸ್ಟೆಡ್ ಗ್ರಾಸ್ ಇನ್ಕಂ- ಎಜಿಆರ್) ಮತ್ತೂಮ್ಮೆ ಲೆಕ್ಕ ಹಾಕಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ದೇಶದ ಎಲ್ಲ ಟೆಲಿಕಾಂ ಕಂಪೆನಿಗಳು ಹಾಗೂ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸ್ಪಷ್ಟ ಎಚ್ಚರಿಕೆ ನೀಡಿದೆ.
ಟೆಲಿಸಂವಹನ ಕಂಪೆನಿಗಳು ತಮ್ಮ ಎಜಿಆರ್ ಬಾಕಿಯನ್ನು ಮುಂದಿನ 20 ವರ್ಷಗಳಲ್ಲಿ ಪಾವತಿಸುವಂತೆ ಸೂಚಿಸಲು ಕೋರಿ ಕೇಂದ್ರ ಸರಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ, 20 ವರ್ಷಗಳ ಕಾಲಾವಕಾಶ ನೀಡುವುದು ಅಸಮಂಜಸ. ನ್ಯಾಯಾಲಯವು ಈಹಿಂದೆ ನೀಡಿರುವ ಆದೇಶದಲ್ಲಿ ತಿಳಿಸಿದ ಅವಧಿಯೊಳಗೇ ಎಲ್ಲ ಸಂಸ್ಥೆಗಳು ಬಾಕಿ ಮೊತ್ತ ಪಾವತಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿದೆ.
ಇದೇ ವೇಳೆ ಅಲ್ಲದೆ, ಎಜಿಆರ್ ಸಮಸ್ಯೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾದ ಲೇಖನಗಳ ಕುರಿತಂತೆ ಬೇಸರ ವ್ಯಕ್ತಪಡಿಸಿರುವ ನ್ಯಾಯಪೀಠ, ಮುಂದೆ ಅಂತಹ ಲೇಖನಗಳು ಪ್ರಕಟಗೊಂಡರೆ ಅದಕ್ಕೆ ಟೆಲಿಕಾಂ ಕಂಪೆನಿ ಹೊಣೆಯಾಗಬೇಕಾಗುತ್ತದೆ ಮತ್ತು ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.
ಇನ್ನೊಂದೆಡೆ ಲೋಕಸಭೆ ಅಧಿವೇಶನದಲ್ಲೂ ಬುಧವಾರ ಈ ವಿಷಯ ಕುರಿತು ಡಿಎಂಕೆ ಸಂಸದರು ಮತ್ತು ದೂರಸಂಪರ್ಕ ಸಚಿವರ ನಡುವೆ ತೀವ್ರ ವಾಗ್ವಾದ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ