ಗ್ರಾಹಕರೇ ಗಮನಿಸಿ ; 2020ಕ್ಕೆ ಹೆಚ್ಚಾಗಲಿವೆ ಹೊಸ ಕಾರುಗಳ ಬೆಲೆ

ಜನವರಿಯಿಂದಲೇ ಹೆಚ್ಚಾಗಲಿದೆ ಟಾಟಾ, ಸುಝುಕಿ, ಟೊಯೊಟೋ, ಮಹಿಂದ್ರಾ ಮತ್ತು ಮರ್ಸಿಡಿಸ್ ಕಾರುಗಳ ಬೆಲೆಗಳು

Team Udayavani, Dec 4, 2019, 8:01 PM IST

Tata-Motors-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಬಿಎಸ್ VI ನಿಯಮಾವಳಿಗಳಿಗೆ ಅನುಗುಣವಾಗಿ ಎಂಜಿನ್ ಗಳನ್ನು ಮೇಲ್ದರ್ಜೆಗೇರಿಸಬೇಕಿರುವುದರಿಂದ 2020ರ ಜನವರಿ ತಿಂಗಳಿನಿಂದ ತಾನು ತಯಾರಿಸುವ ಪ್ರಯಾಣಿಕ ವಾಹನಗಳ ಬೆಲೆಯನ್ನು ಹೆಚ್ಚಿಸುತ್ತಿರುವುದಾಗಿ ದೇಶದ ಅಗ್ರಮಾನ್ಯ ವಾಹನ ತಯಾರಿಕಾ ಕಂಪೆನಿ ಟಾಟಾ ತನ್ನ ಪ್ರಕಟನೆಯಲ್ಲಿಂದು ತಿಳಿಸಿದೆ.

ಪ್ರಸ್ತುತ ಟಾಟಾ ಕಂಪೆನಿಯು ಟಿಯಾಗೋದಿಂದ ಹಿಡಿದು ಪ್ರಯಾಣಿಕ ಕಾರು ಹೆರಿಯರ್ ತನಕ ಉತ್ಪಾದಿಸುತ್ತಿದ್ದು 4.39 ಲಕ್ಷ ರೂಪಾಯಿಗಳಿಂದ ಪ್ರಾರಂಭಿಸಿ 16.85 ಲಕ್ಷ ರೂಪಾಯಿಗಳವರೆಗಿನ (ದೆಹಲಿಯಲ್ಲಿರುವ ಎಕ್ಸ್ ಶೋ ರೂಂ ಬೆಲೆ) ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುತ್ತಿದೆ.

ಪ್ರಯಾಣಿಕ ವಾಹನಗಳ ಬೆಲೆ ಹೆಚ್ಚಳ ವಿಚಾರವನ್ನು ಟಾಟಾ ಮೋಟಾರ್ ಅಧ್ಯಕ್ಷ (ಪ್ರಯಾಣಿಕ ವಾಹನಗಳ ಬ್ಯುಸಿನೆಸ್ ಯುನಿಟ್) ಮಯಾಂಕ್ ಪಾರೀಖ್ ಅವರು ಸಂದರ್ಶನ ಒಂದರಲ್ಲಿ ತಿಳಿಸಿದ್ದಾರೆ. ಆದರೆ ಯಾವ ವಾಹನಗಳ ಬೆಲೆಯಲ್ಲಿ ಎಷ್ಟು ವ್ಯತ್ಯಾಸವಾಗಲಿದೆ ಎಂಬುದನ್ನು ಬಹಿರಂಗಪಡಿಸಲು ನಿರಾಕರಿಸಿದ ಪಾರೀಖ್ ಅವರು ಮುಂದಿನ ತಿಂಗಳು ಆಗುತ್ತಿರುವ ಈ ಬೆಲೆ ಹೆಚ್ಚಳ ಸ್ವಲ್ಪ ದೊಡ್ಡ ಪ್ರಮಾಣದಲ್ಲೇ ಆಗಲಿದೆ ಎಂಬ ಸುಳಿವನ್ನು ನೀಡಿದ್ದಾರೆ.

ಸಾಮಾನ್ಯವಾಗಿ ಉತ್ಪಾದನೆಯಲ್ಲಿ ಯಾವುದೇ ರೀತಿಯ ಬದಲಾವಣೆಗಳಾದಲ್ಲಿ ಬೆಲೆ ಹತ್ತು ಸಾವಿರದಿಂದ ಹದಿನೈದು ಸಾವಿರದವರೆಗೆ ಹೆಚ್ಚಳವಾಗುತ್ತದೆ. ಇದೀಗ ಎರಡು ರೀತಿಯ ಬದಲಾವಣೆಗಳಾಗುತ್ತಿದೆ ಒಂದು ಬಿಎಸ್ VIಗೆ ಹೋಗುತ್ತಿರುವುದು ಹಾಗೂ ಇನ್ನೊಂದು ಬಿಡಿಭಾಗಗಳ ಬೆಲೆಯಲ್ಲೂ ಹೆಚ್ಚಳವಾಗಿದೆ, ಹಾಗಾಗಿ ನಿರ್ಧಿಷ್ಟ ಬೆಲೆ ಹೆಚ್ಚಳದ ಕುರಿತಾಗಿ ಚರ್ಚೆಗಳು ನಡೆಯುತ್ತಿದೆ ಎಂದು ಪಾರೀಖ್ ಅವರು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮೊದಲು ಮಾರುತಿ ಸುಝುಕಿ ತನ್ನ ವಿವಿಧ ಕಾರಿನ ಮಾದರಿಗಳ ಬೆಲೆಗಳನ್ನು ಜನವರಿಯಲ್ಲಿ ಹೆಚ್ಚಿಸುವುದಾಗಿ ಹೇಳಿಕೊಂಡಿತ್ತು. ಇವೆರಡು ಕಂಪೆನಿಗಳು ಮಾತ್ರವಲ್ಲದೇ ಟೊಯೊಟೋ, ಮಹಿಂದ್ರಾ ಆ್ಯಂಡ್ ಮಹಿಂದ್ರಾ, ಮರ್ಸಿಡಿಸ್ ಬೆಂಝ್ ಕಂಪೆನಿಗಳೂ ಸಹ ಮುಂದಿನ ವರ್ಷಾರಂಭದಲ್ಲಿ ತಮ್ಮ ವಾಹನಗಳ ಮಾದರಿಗಳಲ್ಲಿ ಬೆಲೆ ಹೆಚ್ಚಳ ಮಾಡುವ ಸುಳಿವನ್ನು ನೀಡಿವೆ.

ಆದರೆ, ಹುಂಡೈ ಮೋಟಾರ್ ಇಂಡಿಯಾ ಮತ್ತು ಹೋಂಡಾ ಕಾರ್ಸ್ ಇಂಡಿಯಾ ಸಂಸ್ಥೆಗಳು ಜನವರಿಯಲ್ಲಿ ಬೆಲೆ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿಕೊಂಡಿವೆ ಆದರೆ ಒಮ್ಮೆ ದೇಶದಲ್ಲಿ ಬಿಎಸ್ VI ಮಾದರಿ ಸಂಪೂರ್ಣವಾಗಿ ಜಾರಿಗೊಂಡಲ್ಲಿ ಈ ಕಂಪೆನಿಗಳ ಕಾರುಗಳ ಬೆಲೆಯಲ್ಲೂ ಹೆಚ್ಚಳವಾಗುವ ನಿರೀಕ್ಷೆ ಇದೆ.

ದೇಶಾದ್ಯಂತ ಬಿಎಸ್ VI ಮಾದರಿ 2020ರ ಎಪ್ರಿಲ್ ತಿಂಗಳಿನಿಂದ ಜಾರಿಯಾಗಲಿದೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.