ಪ್ರತೀ ಉತ್ಪನ್ನದ ಮೇಲೆ ‘ಕಂಟ್ರಿ ಆಫ್ ಒರಿಜಿನ್’ ಕಡ್ಡಾಯಗೊಳಿಸಿ: CAIT ಆಗ್ರಹ
Team Udayavani, Jun 23, 2020, 6:08 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಲಡಾಖ್ ಗಡಿಯಲ್ಲಿ ಅನಗತ್ಯವಾಗಿ ಕ್ಯಾತೆ ತೆಗೆದು ಕಾಲು ಕೆರೆದುಕೊಂಡು ಜಗಳಕ್ಕೆ ಬಂದಿರುವ ಚೀನಾ ದೇಶಕ್ಕೆ ಆರ್ಥಿಕವಾಗಿ ಪೆಟ್ಟು ನೀಡಲು ದೇಶ ಸಜ್ಜಾಗುತ್ತಿದೆ.
ಈ ನಿಟ್ಟಿನಲ್ಲಿ ಚೀನ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂಬ ಬೃಹತ್ ಅಭಿಯಾನ ದೇಶಾದ್ಯಂತ ಪ್ರಾರಂಭವಾಗಿದೆ.
ಈ ಅಭಿಯಾನಕ್ಕೆ ಇದೀಗ ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟವೂ (CAIT) ಧ್ವನಿಗೂಡಿಸಿದೆ.
ದೇಶಾದ್ಯಂತ ಚೀನೀ ಉತ್ಪನ್ನಗಳ ಮೇಲೆ ನಿಷೇಧ ಹೇರುವ ನಿರ್ಧಾರದೊಂದಿಗೆ ಪ್ರತಿ ಇ-ಕಾಮರ್ಸ್ ಪೋರ್ಟಲ್ಗಳ ಮೂಲಕ ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಮೇಲೆ ‘ಕಂಟ್ರಿ ಆಫ್ ಒರಿಜಿನ್’ ಅನ್ನು ಕಡ್ಡಾಯವಾಗಿ ನಮೂದಿಸುವಂತೆ ಅದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರ ಮುಂದೆ ಬೇಡಿಕೆಯನ್ನು ಇಟ್ಟಿದೆ.
ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಭಾರತ-ಚೀನಾ ಸಂಘರ್ಷದ ಬಳಿಕ ಚೀನೀ ಉತ್ಪನ್ನಗಳನ್ನು ಬಹಿಷ್ಕರಿಸಲು ಅಭಿಯಾನ ಆರಂಭಿಸಿರುವ CAIT, ಇ-ಕಾಮರ್ಸ್ ಪೋರ್ಟಲ್ಗಳು ಹೆಚ್ಚಾಗಿ ಚೀನ ಉತ್ಪನ್ನಗಳನ್ನು ಒಳಗೊಂಡಿದ್ದು, ಆನ್ಲೈನ್ ಮಾರುಕಟ್ಟೆಯಲ್ಲಿ ಡ್ರ್ಯಾಗನ್ ದೇಶಗಳ ವಸ್ತುಗಳೇ ಹೆಚ್ಚಾಗಿ ಮಾರಾಟ ಆಗುತ್ತಿವೆ, ಆದರೆ ಇದರ ಬಗ್ಗೆ ಗ್ರಾಹಕರಿಗೆ ಮಾಹಿತಿ ಇಲ್ಲ.
ಇದು ಕೇವಲ ಚೀನ ಉತ್ಪನ್ನಗಳ ಬಹಿಷ್ಕಾರಕ್ಕೆ ಮಾತ್ರ ಸಂಬಂಧಪಟ್ಟಿದಲ್ಲ ಬದಲಾಗಿ ಇತರೆ ದೇಶಗಳಿಂದ ಆಮದು ಮಾಡಿಕೊಳ್ಳುವ ಹಾಗೂ ಸ್ಥಳೀಯ, ದೇಶೀಯ ಉತ್ನನ್ನಗಳ ಕುರಿತು ಗ್ರಾಹಕರಿಗೆ ಮಾಹಿತಿಯಿದ್ದರೆ ಒಳಿತು.
ಹೀಗಾಗಿ ಆಯಾ ವಸ್ತುಗಳ ಮೇಲೆ ಅದು ಯಾವ ದೇಶದ ಉತ್ಪನ್ನ ಎಂದು ನಮೂನಿಸಿದರೆ ಗ್ರಾಹಕರಿಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವನ್ನು CAIT ವ್ಯಕ್ತಪಡಿಸಿದೆ.
ಇನ್ನು ಇದರೊಂದಿಗೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ, ರಾಜಕೀಯ ಪಕ್ಷಗಳಿಗೆ ತಮ್ಮ ಕ್ಯಾಂಪೇನ್ಗೆ ಕೈ ಜೋಡಿಸುವಂತೆ CAIT ಆಗ್ರಹಿಸಿದ್ದು, ವಿವೊ ಸೇರಿದಂತೆ ಇತರ ಚೀನೀ ಕಂಪನಿಯ ಪ್ರಾಯೋಜಕತ್ವವನ್ನು ರದ್ದುಗೊಳಿಸಬೇಕೆಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಗಳನ್ನು (ಐಒಎ) ಇದೇ ಸಂದರ್ಭದಲ್ಲಿ ಒತ್ತಾಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ