ಡೆಬಿಟ್/ ಕ್ರೆಡಿಟ್‌ ಕಾರ್ಡ್‌ ಸೆ.30ರಿಂದ ಜಾರಿಯಾಗಲಿದೆ ಹೊಸ ನಿಯಮಗಳು


Team Udayavani, Sep 22, 2020, 6:00 AM IST

ಡೆಬಿಟ್/ ಕ್ರೆಡಿಟ್‌ ಕಾರ್ಡ್‌ ಸೆ.30ರಿಂದ ಜಾರಿಯಾಗಲಿದೆ ಹೊಸ ನಿಯಮಗಳು

ಸಾಂದರ್ಭಿಕ ಚಿತ್ರ

ಮಣಿಪಾಲ: ಡೆಬಿಟ್‌ /ಕ್ರೆಡಿಟ್‌ ಕಾರ್ಡ್‌ ಬಳಕೆಗೆ ಸಂಬಂಧಪಟ್ಟಂತೆ ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ) ಸೆಪ್ಟಂಬರ್‌ 30ರಿಂದ ಈ ಹೊಸ ನಿಯಮ ಗಳು ಜಾರಿ ಮಾಡಲಿದೆ. ಅಂತಾ ರಾಷ್ಟ್ರೀಯ ವ್ಯವಹಾರ, ಕಾರ್ಡ್‌ ರಹಿತ ವ್ಯವಹಾರ, ಆನ್‌ಲೈನ್‌ ವ್ಯವಹಾರಗಳಿಗೆ ಸಂಬಂಧಿ ಸಿದ ನಿಯಮಗಳನ್ನು ಬದಲಾವಣೆ ಮಾಡಿದ್ದು, ಕೆಲವೊಂದು ಮಾರ್ಪಾಡುಗಳನ್ನು ಮಾಡಿದೆ.

ಆದ್ಯತೆಯ ಮೆರೆಗೆ ಸೌಲಭ್ಯ
ಈ ಹೊಸ ನಿಯಮಗಳ ಪ್ರಕಾರ ಗ್ರಾಹಕರು ತಮ್ಮಗೆ ಅಗತ್ಯವಿರುವ ಸೇವೆಗೆ ಅರ್ಜಿ ಸಲ್ಲಿಸಬೇಕಾಗಿದ್ದು, ತಮ್ಮ ಆದ್ಯತೆಗೆ ಒಳಗೊಂಡಂತೆ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಅರ್ಜಿ ಯಲ್ಲಿ ಗ್ರಾಹಕರು ಆಯ್ಕೆ ಮಾಡಿ ಕೊಂಡ ಸೇವೆಗಳನ್ನು ಮಾತ್ರ ಬ್ಯಾಂಕ್‌ಗಳು ನೀಡಲಿದ್ದು, ಅಂತಾರಾಷ್ಟ್ರೀಯ ವಹಿವಾಟುಗಳು, ಆನ್‌ಲೈನ್‌ ವಹಿವಾಟು ಗಳ ಅಗತ್ಯತೆ ಇದೆ ಎಂದಾದರೆ ಅಂತಹ ಸೇವೆಗಳಿಗೆ ಪ್ರತ್ಯೇಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ದೇಶೀಯ ಆದ್ಯತೆ
ಡೆಬಿಟ್‌ ಕಾರ್ಡ್‌ ಮತ್ತು ಕ್ರೆಡಿಟ್‌ ಕಾರ್ಡ್‌ಗಳ ಮೂಲಕ ವಹಿವಾಟು ನಡೆಸುವಾಗ ಗ್ರಾಹಕರು ದೇಶೀಯ ವಹಿವಾಟಿಗೆ ಆದ್ಯತೆ ನೀಡಬೇಕು ಎಂದು ಆರ್‌ಬಿಐ ತಿಳಿಸಿದ್ದು, ತಮ್ಮಗೆ ಅಗತ್ಯವಿದ್ದರೆ ಮಾತ್ರ ವಿದೇಶಿ ವ್ಯವಹಾರಗಳು ಹಾಗೂ ಪಿಒಎಸ್‌ ಟರ್ಮಿನಲ್‌ನ ಮೂಲಕ ನಡೆಸಲಾಗುವ ವಹಿವಾಟುಗಳ ಸೌಲಭ್ಯವನ್ನು ಪಡೆಯುವಂತೆ ಸೂಚಿಸಿದೆ.

ಡೆಬಿಟ್‌ ಕಾರ್ಡ್‌ ಬಳಕೆದಾರರೇ ಹೆಚ್ಚು
ದೇಶದಲ್ಲಿ 82.94 ಕೋಟಿ ಡೆಬಿಟ್‌ ಕಾರ್ಡ್‌ ಮತ್ತು 4.6 ಕೋಟಿ ಕ್ರೆಡಿಟ್‌ ಕಾರ್ಡ್‌ಗಳು ಬಳಕೆ ಯಾಗುತ್ತಿವೆ. ಈ ಎಲ್ಲ ಕಾರ್ಡ್‌ಗಳಿಗೂ ಹೊಸ ನಿಯಮ ಅನ್ವಯ ವಾಗಲಿದೆ. ಇತ್ತೀಚೆಗೆ ಡೆಬಿಟ್‌, ಕ್ರೆಡಿಟ್‌ ಕಾರ್ಡ್‌ ಗಳ ಮೂಲಕ ನಡೆಯುವ ವಹಿವಾಟಿನ ಪ್ರಮಾಣ, ಮೌಲ್ಯ ಹೆಚ್ಚಾಗಿದೆ.

ಗ್ರಾಹಕರೇ ಆಯ್ಕೆ ಮಾಡಿಕೊಳ್ಳಬಹುದು
ಕಾರ್ಡ್‌ಗಳನ್ನು ಸಕ್ರಿಯಗೊಳಿಸುವ, ಸ್ಥಗಿತಗೊಳಿಸುವ, ಅಂತಾರಾಷ್ಟ್ರೀಯ ವಹಿವಾಟು, ಪಿಓಎಸ್‌, ಎಟಿಎಂ, ಆನ್‌ಲೈನ್‌, ಚಿಪ್‌ ಕಾರ್ಡ್‌ ವಹಿವಾಟುಗಳನ್ನು ನಿರ್ಧರಿಸುವ ಅವಕಾಶ ಗ್ರಾಹಕರಿಗೆ ದೊರೆಯಲಿದೆ. ಡಿಜಿಟಲ್‌ ವಹಿವಾಟಿನ ಭದ್ರತೆ ಹೆಚ್ಚಿಸಲು ನೆರವಾಗುವ ದೃಷ್ಟಿಯಲ್ಲಿ ಡೆಬಿಟ್‌ ಮತ್ತು ಕ್ರೆಡಿಟ್‌ ಕಾರ್ಡ್‌ ಗಳನ್ನು ಅಗತ್ಯಕ್ಕೆ ಅನುಗುಣವಾಗಿ ಸಕ್ರಿಯ ಮತ್ತು ಸ್ಥಗಿತ ಮಾಡುವ ಅವಕಾಶವನ್ನು ಗ್ರಾಹಕರಿಗೆ ನೀಡಲಾಗಿದೆ.

ವ್ಯವಹಾರದ ಮಿತಿ ಬದಲಾವಣೆ

ಹೊಸ ನಿಯಮಗಳನ್ನು ಅನುಸರಿಸಿ ಗ್ರಾಹಕರು ತಾವೇ ಸ್ವತ: ವಹಿವಾಟಿನ ಮಿತಿಯನ್ನು ಸಹ ಬದಲಾಯಿಸಲು ಅನುವು ಮಾಡಿಕೊಡಲಾಗಿದೆ. ಮೊಬೈಲ್‌ ಅಪ್ಲಿಕೇಶನ್‌, ಇಂಟರ್‌ನೆಟ್‌ ಬ್ಯಾಂಕಿಂಗ್‌, ಎಟಿಎಂ ಯಂತ್ರ ಮತ್ತು ಐವಿಆರ್‌ ಮೂಲಕ ಕಾರ್ಡ್‌ನ ಮಿತಿಯನ್ನು ಬದಲಾಯಿಸಬಹುದು. ಇದರೊಂದಿಗೆ ಗ್ರಾಹಕರಿಗೆ ತಮ್ಮ ಎಟಿಎಂ ಕಾರ್ಡ್‌ ವಹಿವಾಟುವಿನ ಮಿತಿಯನ್ನು ನಿರ್ಧಾರಿಸುವ ಸೌಲಭ್ಯವನ್ನು ನೀಡಲಾಗಿದ್ದು, ಮೊಬೈಲ್‌ ಅಪ್ಲಿಕೇಷನ್‌, ಇಂಟರ್‌ನೆಟ್‌ ಬ್ಯಾಂಕಿಂಗ್‌, ಎಟಿಎಂಗಳು, ಐವಿಆರ್‌ ಅಥವ ಇಂಟರಾಕ್ಟೀವ್‌ ವಾಯ್ಸ ರೆಸ್ಪಾ®Õ… ಮೊದಲಾದವುಗಳನ್ನು ನಿವಾರಿಸಲು 24×7 ಸಹಾಯವಾಣಿ ದೊರೆಯಲಿದೆ. ಕಾರ್ಡ್‌ನಲ್ಲಿ ಯಾವುದಾದರೂ ಬದಲಾವಣೆಗಳಾದರೆ ಬಳಕೆದಾರರಿಗೆ ಎಸ್‌ಎಂಎಸ್‌, ಇ-ಮೇಲ್‌ ಮೂಲಕ ಮಾಹಿತಿ ದೊರೆಯಲಿದೆ.

ಲಾಕ್‌ಡೌನ್‌ ವೇಳೆ ಕ್ರೆಡಿಟ್‌ ಕಾರ್ಡ್‌ ಬಳಕೆ ಕುಂಠಿತ
ಡೆಬಿಟ್‌ ಮತ್ತು ಕ್ರೆಡಿಟ್‌ ಕಾರ್ಡ್‌ಗಳ ಬಳಕೆ ಕುರಿತು ಆರ್‌ಬಿಐ ಮಾಹಿತಿಯ ಹಂಚಿಕೊಂಡಿದ್ದು, ಈ ವರ್ಷದ ಜೂನ್‌ ತಿಂಗಳಲ್ಲಿ ದೇಶದ ಜನರು ಕ್ರೆಡಿಟ್‌ ಕಾರ್ಡ್‌ಗಳ ಮೂಲಕ 42,818 ಕೋಟಿ ರೂ. ಮೌಲ್ಯದ ವಸ್ತಗಳನ್ನು ಖರೀದಿಸಿ ದ್ದಾರೆ. ಆದರೆ ಜನವರಿಯಲ್ಲಿ ಇದರ ಪ್ರಮಾಣ ಹೆಚ್ಚಿದ್ದು, ಕ್ರೆಡಿಟ್‌ ಕಾರ್ಡ್‌ ಮೂಲಕ 67,000 ಕೋಟಿ ರೂ.ಗಳಷ್ಟು ಮೌಲ್ಯದ ವಸ್ತುಗಳನ್ನು ಜನರು ಖರೀದಿಸಿದ್ದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.