ಬ್ಯಾಂಕಿಂಗ್ ವಂಚನೆ : ತನ್ನ ಗ್ರಾಹಕರನ್ನು ಮತ್ತೆ ಎಚ್ಚರಿಸಿದ ಎಸ್ ಬಿ ಐ
Team Udayavani, Jul 7, 2021, 9:21 PM IST
ನವ ದೆಹಲಿ : ಇತ್ತೀಚೆಗಿನ ದಿನಗಳಲ್ಲಿ ಬ್ಯಾಂಕಿಂಗ್ ವಂಚನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ದೇಶದ ಅತಿ ದೊಡ್ಡ ನಾಗರಿಕ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಎಸ್ ಬಿ ಐ ಮತ್ತೆ ತನ್ನ ಗ್ರಾಹಕರಿಗೆ ಎಚ್ಚರಿಕೆಯನ್ನು ನೀಡಿದೆ.
ಗ್ರಾಹಕರಿಂದ ನಿರಂತರವಾಗಿ ಬ್ಯಾಂಕಿಂಗ್ ವಂಚನೆಗಳ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಎಸ್ ಬಿ ಐ ಮತ್ತೆ ತನ್ನ ಗ್ರಾಹಕರಿಗೆ ಎಚ್ಚರಿಕೆಯನ್ನು ಹೇಳಿದೆ.
ನಿಮ್ಮ ಒಂದು ಸಣ್ಣ ತಪ್ಪು ನಿಮ್ಮನ್ನು ದೊಡ್ಡ ನಷ್ಟಕ್ಕೆ ತಳ್ಳಬಹುದು. ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ನನ್ನು ಕೆಲವೇ ಸೆಕೆಂಡುಗಳಲ್ಲಿ ಖಾಲಿಯಾಗಿಸುವ ಸೈಬರ್ ವಂಚಕರ ಜಾಲ ಹೆಚ್ಚಳವಾಗುತ್ತಿದ್ದು. ಇಂತಹ ಪ್ರಕರಣಗಳ ದೃಷ್ಟಿಯಿಂದ, ವಂಚಕರನ್ನು ತಪ್ಪಿಸಲು ಎಸ್ ಬಿಐ ತನ್ನ ಗ್ರಾಹಕರಿಗೆ ಅನೇಕ ಪ್ರಮುಖ ಸಲಹೆಗಳನ್ನು ನೀಡಿದೆ.
ಇದನ್ನೂ ಓದಿ : ಮಾಜಿ ಸಂಸದ ಜಿ.ಮಾದೇಗೌಡರ ಆರೋಗ್ಯ ವಿಚಾರಿಸಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ
ಇನ್ನು, ಗ್ರಾಹಕರೊಬ್ಬರು ಬ್ಯಾಂಕನ್ನು ಟ್ಯಾಗ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ದೂರು ನೀಡಿದ್ದಾರೆ. ಈ ಗ್ರಾಹಕರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ನಕಲಿ ಸಂದೇಶಗಳನ್ನು ಟ್ಯಾಗ್@TheOfficialSBI ಮತ್ತು @Cybercellindia. ಮಾಡುವ ಮೂಲಕ ವಿವರವಾಗಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿನ ದೂರುಗಳಿಗೆ ಸಂಬಂಧಪಟ್ಟ ಹಾಗೆ ಪ್ರತಿಕ್ರಿಯಿಸಿದ ಎಸ್ ಬಿ ಐ, ಯಾವುದೇ ಇಮೇಲ್, ಎಸ್ಎಂಎಸ್, ಕರೆ ಅಥವಾ ಎಂಬೆಡೆಡ್ ಲಿಂಕ್ ಅನ್ನು ಗ್ರಾಹಕರು ನಿರ್ಲಕ್ಷಿಸಬೇಕು ಎಂದು ಬ್ಯಾಂಕ್ ಹೇಳಿದೆ. ಸೈಬರ್ ಖದೀಮರ ಬಗ್ಗೆ ಗ್ರಾಹಕರು ಎಚ್ಚರದಿಂದಿರಬೇಕು. ಬ್ಯಾಂಕಿಗೆ ಸಂಬಂಧಿಸಿದ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಅಂತಹ ವೈಯಕ್ತಿಕ ಮಾಹಿತಿಯನ್ನು ಬ್ಯಾಂಕ್ ಎಂದಿಗೂ ಫೋನ್ ನಲ್ಲಿ ಕೇಳುವುದಿಲ್ಲ. ನಿಮ್ಮ ಖಾತೆಯ ಮೇಲಿನ ನಿಮ್ಮ ಬೇಜವಾಬ್ದಾರಿತನ ನಿಮ್ಮ ಖಾತೆಯಲ್ಲಿನ ಪೂರ್ತಿ ಹಣ ಖಾಲಿಯಾಗುವಂತೆ ಮಾಡಬಹುದು ಎಂದು ಬ್ಯಾಂಕ್ ಎಚ್ಚರಿಸಿದೆ.
ಇದನ್ನೂ ಓದಿ : ಕರ್ನಾಟಕದಿಂದ ಗೋವಾಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬರುವವರ ಸಂಖ್ಯೆ ಇಳಿಮುಖ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ