ಇಂದು ನಾಗರಪಂಚಮಿ: ವ್ಯಾಪಾರ ವಹಿವಾಟು ಬಿರುಸು

ಅನ್ಯ ಜಿಲ್ಲೆಯ ವ್ಯಾಪಾರಸ್ಥರಿಂದ ಸ್ಥಳೀಯರ ವ್ಯಾಪಾರ ಕುಂಠಿತ ; ಪ್ರಮುಖ ವಸ್ತುಗಳ ಬೆಲೆ ಗಗನಕ್ಕೆ

Team Udayavani, Aug 5, 2019, 5:52 AM IST

FLOWER2

ಉಡುಪಿ: ನಾಗರ ಪಂಚಮಿ ಹಬ್ಬದ ಅಂಗವಾಗಿ ಜಿಲ್ಲೆಯಾದ್ಯಂತ ವ್ಯಾಪಾರ ವಹಿವಾಟು ಬಿರುಸುಗೊಂಡಿದೆ. ಈ ವರ್ಷ ಸರಿಯಾದ ಪ್ರಮಾಣದಲ್ಲಿ ಮಳೆ ಸುರಿಯದ ಕಾರಣ ಹಬ್ಬ ಆಚರಣೆಗೆ ಸಂಬಂಧಪಟ್ಟ ವಸ್ತುಗಳ ಬೆಲೆಯಲ್ಲೂ ಭಾರೀ ಏರಿಕೆ ಕಂಡಿದೆ. ನಾಗರ ಪಂಚಮಿಗೆ ಬೇಕಾದ ಎಲ್ಲ ವಸ್ತುಗಳ ಬೆಲೆಯಲ್ಲಿ ಏರಿಕೆ ಕಂಡಿದೆ.

ಹಿಂಗಾರ, ಅರಶಿನ ಎಲೆಗೂ ಬೇಡಿಕೆ
ನಾಗರಪಂಚಮಿಯಲ್ಲಿ ಪ್ರಮುಖ ಸ್ಥಾನದಲ್ಲಿರುವ ಹಿಂಗಾರದ ಒಂದು ಹಾಳೆಗೆ 150- 200 ರೂ. ದರವಿದೆ. ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಾರುಕಟ್ಟೆಗೆ ಬಂದಿಲ್ಲದ ಕಾರಣ 50ರಿಂದ 70 ರೂ.ನಷ್ಟು ಏರಿಕೆ ಕಂಡಿದೆ. ಸಾಮಾನ್ಯ ದಿನಗಳಲ್ಲಿ ಹಿಂಗಾರದ ದರ 80ರಿಂದ 120ರಷ್ಟಿರುತ್ತದೆ. ಅರಶಿನ ಎಲೆಯ 25ರ ಒಂದು ಕಟ್ಟಿಗೆ ಈ ಬಾರಿ 40 ರೂ.ನಿಂದ 50 ರೂ.ಗೆ ಏರಿಕೆಯಾಗಿದೆ. ಮಳೆ ಕಡಿಮೆಯಾಗಿರುವುದು ಕೂಡ ಇದಕ್ಕೆ ಒಂದು ಕಾರಣವಾಗಿದೆ.

ಕೇದಗೆ ವಿರಳ
ನಾಗದೇವರಿಗೆ ಪ್ರಿಯವಾಗಿರುವ ವಸ್ತುಗಳಲ್ಲಿ ಕೇದಗೆಯೂ ಒಂದು. ಆದರೆ ಉಡುಪಿ ಮಾರುಕಟ್ಟೆಯಲ್ಲಿ ಮಾತ್ರ ವಿರಳವಾಗಿತ್ತು. ಶನಿವಾರ ನಗರದ ಕೆಲವೆಡೆಗಳಲ್ಲಿ ಕೇದಗೆ ಮಾರಾಟ ಇತ್ತಾದರೂ ಸಂಜೆಯ ವೇಳೆಗೆ ಎಲ್ಲವೂ ಖಾಲಿ ಯಾಗಿದ್ದವು.ಲಭ್ಯವಿದ್ದ ಕಡೆಗಳಲ್ಲಿ ಇದರ ದರ ಸುಮಾರು 150ರಷ್ಟಿತ್ತು. ಹಳದಿ ಸೇವಂತಿಗೆ ಕೂಡ ಕುಚ್ಚಿಗೆ
1,500ರಷ್ಟಿದೆ. ಒಂದು ಮಾರು ಸೇವಂತಿಗೆಗೆ 120 ರೂ., ಕೇದಗೆಗೆ 120, ಶಂಕರಪುರ ಮಲ್ಲಿಗೆ 1,050, ಕಾಕಡ 80, ಮಾರಿಗೋಲ್ಡ್‌ 150, ಕನಗೆಳೆ 80, ಗೊಂಡೆ 70, ಕನಕಾಂಬರ 80 ರೂ., ಬಾಳೆಹಣ್ಣು 80ರೂ. ಸಹಿತ ಒಟ್ಟಾರೆ ಪಂಚಮಿಗೆ ಬೆಕಾದ ಪ್ರಮುಖವಾದ ವಸ್ತುಗಳ ಬೆಲೆ ಗಗನಕ್ಕೆ ತಲುಪಿದೆ.

ಸೀಯಾಳ ರಾಶಿ
ರಸ್ತೆಬದಿಯ ಹೂವಿನ ವ್ಯಾಪಾರಸ್ಥರೂ ಹೂವಿನ ಜತೆಗೆ ಸೀಯಾಳವನ್ನೂ ಮಾರಾಟ ಮಾಡುತ್ತಿರುವುದು ಕಂಡುಬಂತು. ಕೆಂದಾಳಿಯ ಎರಡು ಜಾತಿಯ ಸೀಯಾಳಗಳು ಕೇರಳದಿಂದ ಬಂದಿವೆ. ಬಾರಕೂರು ಹಾಗೂ ಕೆಲವು ಸ್ಥಳೀಯ ಸೀಯಾಳಗಳೂ ಮಾರುಕಟ್ಟೆಯಲ್ಲಿವೆ. ಕೆಂದಾಳಿ ಸೀಯಾಳದ ದರ 45ರಿಂದ 50 ರೂ.ಗಳಿದ್ದರೆ, ಸ್ಥಳೀಯ ಸೀಯಾಳಗಳ ದರ 35ರೂ.ಗಳಷ್ಟಿತ್ತು.

ಅನ್ಯ ಜಿಲ್ಲೆಯವರೇ ಅಧಿಕ
ಹಾಸನ, ಚಿಕ್ಕಮಗಳೂರು, ದಾವಣಗೆರೆ ಭಾಗದಿಂದ ಹಲವಾರು ಮಂದಿ ಹೂವಿನ ವ್ಯಾಪಾರಸ್ಥರು ನಗರದೆಲ್ಲೆಡೆ ವ್ಯಾಪಾರ ನಡೆಸುತ್ತಿದ್ದಾರೆ. ಸಹಜವಾಗಿಯೇ ನಗರದ ಹೋಲ್‌ಸೇಲ್‌ ವ್ಯಾಪಾರಿಗಳಿಗೆ ಇದರಿಂದ ಹೊಡೆತ ಬಿದ್ದಿದೆ. ಮಲ್ಲಿಗೆ ಒಂದನ್ನು ಬಿಟ್ಟು ಉಳಿದ ಎಲ್ಲ ಹೂವು ಗಳನ್ನು ಅವರು ಕಡಿಮೆ ಬೆಲೆಗೆ ನಮ್ಮಿಂದ ಖರೀದಿಸಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ತಿಳಿಸುತ್ತಾರೆ ನಗರದ ಹೋಲ್‌ಸೇಲ್‌ ವ್ಯಾಪಾರಸ್ಥರು. ನಗರದ ಸಿಟಿ ಬಸ್‌ನಿಲ್ದಾಣ, ಸರ್ವೀಸ್‌ ಬಸ್‌ ನಿಲ್ದಾಣ, ನಗರಪಂಚಾಯತ್‌ ಎದುರುಭಾಗದಲ್ಲಿ, ಕೃಷ್ಣಮಠದ ಪರಿಸರ, ಹಳೇ ಡಯಾನ ಸರ್ಕಲ್‌ಬಳಿ, ಮಣಿಪಾಲ ಬಸ್‌ ತಂಗುದಾಣದಲ್ಲಿ ಸಹಿತ ಹಲವಾರು ಕಡೆಗಳಲ್ಲಿ ಅನ್ಯ ಜಿಲ್ಲೆಯ ವ್ಯಾಪಾರಸ್ಥರು ತುಂಬಿಹೋಗಿದ್ದಾರೆ.

ಬೆಳಗ್ಗೆ ಡಲ್‌; ಸಂಜೆ ಫ‌ುಲ್‌ ವ್ಯಾಪಾರ
ಹೆಚ್ಚಿನ ಕಡೆಗಳಲ್ಲಿ ಬೆಳಗ್ಗಿನ ವೇಳೆ ವ್ಯಾಪಾರ ತುಸು ನಿಧಾನಗತಿಯಲ್ಲಿತ್ತು. ಸಂಜೆ ವೇಳೆಗೆ ವ್ಯಾಪಾರ ಬಿರುಸಿನಿಂದ ನಡೆಯುತ್ತಿತ್ತು. ರಜಾದಿನ ಹಾಗೂ ಬೆಳಗ್ಗೆ, ಮಧ್ಯಾಹ್ನದ ವೇಳೆಗೆ ಮಳೆ ಸುರಿದ ಪರಿಣಾಮ ಕೆಲ ಗ್ರಾಹಕರು ಮಾರುಕಟ್ಟೆಗೆ ಆಗಮಿಸಲಿಲ್ಲ. ರಾತ್ರಿ ವೇಳೆಯ ರಶ್‌ ತಪ್ಪಿಸುವ ಸಲುವಾಗಿ ಹೆಚ್ಚಿನವರು ಸಂಜೆಯ ವೇಳೆಗೆ ಮಾರುಕಟ್ಟೆಯತ್ತ ಮುಖಮಾಡುತ್ತಿರುವುದು ಕಂಡುಬಂತು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.