2020-21ರ ಆರ್ಥಿಕ ವರ್ಷದ ಅತಿ ಹೆಚ್ಚು ಕಾರುಗಳ ಮಾರಾಟ : ಮಾರುತಿ ಸುಜುಕಿ ಮೇಲುಗೈ
Team Udayavani, Apr 14, 2021, 11:44 AM IST
ನವ ದೆಹಲಿ : ಕಳೆದ ಆರ್ಥಿಕ ವರ್ಷದಲ್ಲಿ ಮಾರುತಿ ಸುಜುಕಿ ಇಂಡಿಯಾದ ಐದು ಕಾರುಗಳು ಅತಿ ಹೆಚ್ಚು ಮಾರಾಟವಾಗಿವೆ ಎಂದು ವರದಿಯೊಂದು ತಿಳಿಸಿದೆ.
ಈ ಕುರಿತಾಗಿ ಕಂಪೆನಿ ಅಧಿಕೃತವಘಾಇ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ದೇಶದ ಅತಿ ದೊಡ್ಡ ಕಾರು ಉತ್ಪಾದಕ ಕಂಪನಿಯಾಗಿರುವ ಮಾರುತಿ ಸುಜುಕಿ ಇಂಡಿಯಾದ (MSI)ಯ ಶ್ವಿಫ್ಟ್, ವ್ಯಾಗನ್ ಆರ್, ಬಲೆನೊ (Baleno), ಆಲ್ಟೋ ಹಾಗೂ ಡಿಸೈರ್ (Dzire) ಈ ಐದೂ ಕಾರುಗಳು ಸತತ ನಾಲ್ಕನೇ ವರ್ಷದಲ್ಲಿಯೂ ಕೂಡ ಭಾರಿ ಮಾರಾಟಗೊಂಡಿವೆ ಎಂದು ತಿಳಿಸಿದೆ. 2020-21 ಆರ್ಥಿಕ ವರ್ಷದಲ್ಲಿ ಅತ್ಯಧಿಕ ಮಾರಾಟಗೊಂಡ ಟಾಪ್ 10 ಪಟ್ಟಿಯಲ್ಲಿ ಮಾರುತಿ ಸುಜುಕಿ ಕಂಪನಿಯ 7 ಮಾಡೆಲ್ ಗಳು ಒಳಗೊಂಡಿವೆ ಎನ್ನುವುದು ವಿಶೇಷ.
ಓದಿ : ಅನುದಿನದ ಸ್ಮರಣೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್
ಇನ್ನು, ಸ್ವಿಫ್ಟ್ ಅತಿ ಹೆಚ್ಚು ಮಾರಾಟಗೊಂಡ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಬಲೇನೋ ಎರಡನೇ ಸ್ಥಾನದಲ್ಲಿದೆ. ಕಂಪನಿಯ ವ್ಯಾಗನ್ ಆರ್, ಆಲ್ಟೊ ಹಾಗೂ ಡಿಸೈರ್ ಗಳಿಗೂ ಕೂಡ ಜನರ ಬೇಡಿಕೆ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.
2020 ಆರ್ಥಿಕವರ್ಷದಲ್ಲಿ ಪ್ಯಾಸೆಂಜರ್ ವೆಹಿಕಲ್ ಮಾರಾಟದಲ್ಲಿ ಶೇ.30 ರಷ್ಟು ಪಾರುಪತ್ಯ ಈ ಕಾರುಗಳದ್ದೆ ಆಗಿದೆ.
ಸ್ವಿಫ್ಟ್ ಕಾರು ಅತಿ ಹೆಚ್ಚು ಮಾರಾಟಗೊಂಡ ನಂ.1 ಕಾರ್ ಆಗಿ ಹೊರಹೊಮ್ಮಿದ್ದು, ಕಂಪನಿ ಸುಮಾರು 1.72 ಲಕ್ಷಕ್ಕೂ ಅಧಿಕ ಕಾರುಗಳ ಮಾರಾಟ ನಡೆಸಿದೆ. ಬಲೇನೋ ಅತಿ ಹೆಚ್ಚು ಮಾರಾಟಗೊಂಡ ಎರಡನೇ ಕಾರ್. ಈ ಆರ್ಥಿಕ ವರ್ಷದಲ್ಲಿ ಸುಮಾರು 1.63 ಲಕ್ಷಕ್ಕೂ ಹೆಚ್ಚು ಯುನಿಟ್ ಗಳ ಮಾರಾಟ ಕಂಪನಿ ನಡೆಸಿದೆ. ಕಂಪನಿಯ ವ್ಯಾಗನ್ ಆರ್ ಕಾರು 1.60 ಲಕ್ಷ ಯುನಿಟಗಳ ಮಾರಾಟವಾಗುವ ಮೂಲಕ ಮೂರನೇ ಸ್ಥಾನದಲ್ಲಿದೆ. ವಿಷಯದಲ್ಲಿ ಆಲ್ಟೊ ಹಾಗೂ ಡಿಸೈರ್ ಅನುಕ್ರಮವಾಗಿ ನಾಲ್ಕನೇ ಮತ್ತು ಐದನೇ ಸ್ಥಾನದಲ್ಲಿವೆ. 2021ರಲ್ಲಿ 1.53ಲಕ್ಷ ಆಲ್ಟೊ ಯೂನಿಟ್ ಗಳು ಮಾರಾಟಗೊಂಡಿದ್ದರೆ, ಡಿಸೈರ್ ನ 1.28 ಲಕ್ಷ ಯುನಿಟ್ ಗಳು ಮಾರಾಟಗೊಂಡಿವೆ ಎಂದು ಕಂಪೆನಿ ಬಹಿರಂಗ ಪಡಿಸಿದ ಮಾಹಿತಿ ಪಟ್ಟಿ ತಿಳಿಸಿದೆ.
ಇನ್ನು, ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಮಾರುತಿ ಸುಜುಕಿಯ ಮಾರ್ಕೆಟಿಂಗ್ ಮತ್ತು ಸೇಲ್ಸ್ ಡಿಪಾರ್ಟ್ ಮೆಂಟ್ ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶಶಾಂಕ್ ಶ್ರೀವಾಸ್ತವ್, ಹೆಚ್ಚಾಗುತ್ತಿರುವ ಪ್ರತಿಸ್ಪರ್ಧೆಯ ನಡುವೇನೂ ಕೂಡ ಆರ್ಥಿಕ ವರ್ಷ 2020-21 ರಲ್ಲಿ ದೇಶದಲ್ಲಿ ಅತಿ ಹೆಚ್ಚು ಮಾರಾಟಗೊಂಡ ವಾಹನ ಮಾರುತಿ ಸುಜುಕಿಯಾಗಿದೆ. ಕೊರೊನಾ ಕಾಲಾವಧಿಯಲ್ಲಿ ಆರ್ಥಿಕ ಹಿನ್ನಡೆತದ ಕಾರಣ ಜನರು ಹಲವು ಸವಾಲುಗಳನ್ನು ಎದುರಿಸಿದ್ದಾರೆ. ಆದರೆ, ಗ್ರಾಹಕರು ನಮ್ಮ ಭರವಸೆಯನ್ನು ಹುಸಿಯಾಗಿಡಲು ಬಿಟ್ಟಿಲ್ಲ. ಹೀಗಾಗಿ ದೇಶದಲ್ಲಿರುವ 90ಕ್ಕೂ ಅಧಿಕ ಬ್ರಾಂಡ್ ಗಳ ನಡುವೆ ಕಂಪನಿಯ ಕಾರುಗಳು ತಮ್ಮ ಪಾರುಪತ್ಯ ಮೆರೆಯುವಲ್ಲಿ ಯಶಸ್ವಿಯಾಗಿವೆ ಎಂದು ಹೇಳಿದ್ದಾರೆ.
ಓದಿ : ಪ್ರತಿಯೊಬ್ಬರಿಗೂ ಆರೋಗ್ಯ : ಥೈರಾಯ್ಡ್ ಕಾಯಿಲೆಗಳು ನಮ್ಮನ್ನು ಸೋಲಿಸಬಾರದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ