ರೈಲ್ವೆ ಟಿಕೆಟ್‌ ಬುಕ್ಕಿಂಗ್‌ಗೆ ಶೀಘ್ರ ಸೇವಾ ಶುಲ್ಕ ರಿಯಾಯಿತಿ

ಗೂಗಲ್‌ ಪೇ/ಭೀಮ್‌ ಆ್ಯಪ್‌ ಮೂಲಕ ಟಿಕೆಟ್‌ ಕಾಯ್ದಿರಿಸಿದರೆ ಆಫ‌ರ್‌

Team Udayavani, Nov 1, 2019, 6:50 PM IST

IRCTC-730

ಹೊಸದಿಲ್ಲಿ: ಆನ್‌ಲೈನ್‌ ಮೂಲಕ ಮುಂಗಡ ಟಿಕೆಟ್‌ ಬುಕ್‌ ಮಾಡುವವರಿಗೆ ಭಾರತೀಯ ರೈಲ್ವೆ (ಐಆರ್‌ಸಿಟಿಸಿ) ಸಿಹಿ ಸುದ್ದಿಯೊಂದನ್ನು ನೀಡಿದೆ. ಭೀಮ್‌ ಆ್ಯಪ್‌, ಪೇಟಿಎಂ, ಫೋನ್‌ ಪೇ ಅಥವಾ ಗೂಗಲ್‌ ಪೇಯಂತಹ ವಾಲೆಟ್‌ಗಳ ಮೂಲಕ ಹಣ ಪಾವತಿಸುವ ಗ್ರಾಹಕರಿಗೆ ಸೇವಾ ಶುಲ್ಕವನ್ನು ಕಡಿತಗೊಳಿಸುವ ಯೋಜನೆ ಹಾಕಿಕೊಂಡಿದೆ.

ಏಕೀಕೃತ ಪಾವತಿ ಸೇವೆ (ಯುಪಿಐ) ಅಥವಾ ಭಾರತ್‌ ಇಂಟರ್‌ಫೇಸ್‌ ಫಾರ್‌ ಮನಿ (ಬಿಹೆಚ್‌ಐಎಂ/ಭೀಮ್‌) ಅಥವಾ ವಿವಿಧ ವ್ಯಾಲೆಟ್‌ ಅಪ್ಲಿಕೇಶನ್‌ಗಳ ಮೂಲಕ ಟಿಕೆಟ್‌ ಮೊತ್ತವನ್ನು ಪಾವತಿಸಿದರೆ ರೈಲು ಪ್ರಯಾಣ ಅಗ್ಗವಾಗಲಿದೆ. ನಾನ್‌ ಎಸಿ ಬೋಗಿಯಲ್ಲಿ ಪ್ರಯಾಣಿಸುವವರಿಗೆ ಈವರೆಗೆ 10 ರೂ. ಕನ್‌ವೀನಿಯನ್ಸ್‌ ಶುಲ್ಕ ಹಾಗೂ ಪ್ರಥಮ ದರ್ಜೆ ಸೇರಿದಂತೆ ಎಸಿ ಕೋಚ್‌ನ ಪ್ರಯಾಣಿಕರಿಗೆ 20 ರೂ. ಕನ್ವೀನಿಯನ್ಸ್‌ ಶುಲ್ಕ ಕಡಿಮೆಯಾಗಲಿದೆ.

ರೈಲ್ವೆ ಹೇಳಿದ ವ್ಯಾಲೆಟ್‌, ಭೀಮ್‌ ಮೂಲಕ ಪಾವತಿ ಮಾಡಿದವರಿಗೆ ಶುಲ್ಕದಿಂದ ವಿನಾಯಿತಿ ಸಿಗಲಿದೆ. ಹೊಸ ಶುಲ್ಕ ಪಟ್ಟಿ ಶೀಘ್ರದಲ್ಲೇ ಹೊರತರಲಾಗುವುದು ಎಂದು ರೈಲ್ವೆ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಪ್ರಸ್ತುತ ಭಾರತೀಯ ರೈಲ್ವೆ ಇಲಾಖೆ ನಾನ್‌ ಎಸಿ ಇ-ಟಿಕೆಟ್‌ಗೆ 15 ರೂ. ಮತ್ತು ಎಸಿ ಕೋಚ್‌ಗಳ ಪ್ರತಿ ಟಿಕೆಟ್‌ಗೆ 30 ರೂ. ಶುಲ್ಕ ವಿಧಿಸುತ್ತಿದೆ. ದೇಶದಲ್ಲಿ ಆನ್ಲೈನ್‌ ಪೇಮೆಂಟ್‌ ಉತ್ತೇಜಿಸುವ ದೃಷ್ಟಿಯಿಂದ ರೈಲ್ವೆ ಈ ನಿರ್ಧಾರವನ್ನು ಕೈಗೊಂಡಿದ್ದು, ಜತೆಗೆ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ.

ಈ ಮೊದಲು ಐಆರ್‌ಸಿಟಿಸಿ ಲಕ್ಕಿ ಡ್ರಾ ಯೋಜನೆಯೊಂದನ್ನು ಪ್ರಕಟಿಸಿದ್ದು, ಯುಪಿಐ ಅಥವಾ ಭೀಮ್‌ ಮೂಲಕ ಮುಂಗಡ ಟಿಕೆಟ್‌ ಕಾಯ್ದಿರಿಸಿದ 1 ಸಾವಿರ ಅದೃಷ್ಟವಂತ ಗ್ರಾಹಕರಿಗೆ 500 ರೂ. ಕ್ಯಾಶ್‌ಬ್ಯಾಕ್‌ ಅನ್ನು ನೀಡಿತ್ತು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.