ಉಜ್ವಲ ಯೋಜನೆ 2.0 ಗೆ ನಾಳೆ ಉ. ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ಮೋದಿ ಚಾಲನೆ
Team Udayavani, Aug 9, 2021, 12:19 PM IST
ಪ್ರಾತಿನಿಧಿಕ ಚಿತ್ರ
ನವ ದೆಹಲಿ : ಪ್ರಧಾನಿ ಮೋದಿ ನೇತೃತ್ವದ ಕೇಂದ್ರದ ಸರ್ಕಾರವು ಉಜ್ವಲ ಯೋಜನೆಯನ್ನು ಹೊಸ ಪ್ಯಾಕೇಜಿಂಗ್ ನೊಂದಿಗೆ ಆರಂಭಿಸಲಿದ್ದು, ಮಂಗಳವಾರ( ಆಗಸ್ಟ್ 10) ಉಜ್ವಲ ಯೋಜನೆ 2.0ಕ್ಕೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಿಂದ ಚಾಲನೆ ನೀಡಲಿದ್ದಾರೆ.
ಉಜ್ವಲ 2.0 ಅಡಿಯಲ್ಲಿ, ಫಲಾನುಭವಿಗೆ ಉಚಿತ ಗ್ಯಾಸ್ ಸಂಪರ್ಕ, ಗ್ಯಾಸ್ ಸ್ಟೋವ್ ಜೊತೆಗೆ ಮೊದಲ ಬಾರಿಗೆ ತುಂಬಿದ ಸಿಲಿಂಡರ್ ಸಿಗಲಿದೆ.
ಇದನ್ನೂ ಓದಿ : ಹೊಡೆದ್ರೆ ವಾಪಸ್ ಅದರಲ್ಲಿ ಹೊಡಿರಿ ಎಂದಿದ್ದು ತಪ್ಪಾ?: ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪ
ಉಜ್ವಲ ಯೋಜನೆಯ ಮೊದಲ ಆವೃತ್ತಿಯಲ್ಲಿ, ಸರ್ಕಾರವು ಎಲ್ ಪಿ ಜಿ ಸಂಪರ್ಕಗಳಿಗೆ ರೂ 1600 (ಠೇವಣಿ ಹಣ) ದ ಆರ್ಥಿಕ ಸಹಾಯವನ್ನು ಮಾತ್ರ ನೀಡುತ್ತಿತ್ತು. ಈ ಯೋಜನೆಯಡಿ, ಗ್ಯಾಸ್ ಸಂಪರ್ಕಗಳನ್ನು ಪಡೆಯುವ ಕುಟುಂಬಗಳು ಯಾವುದೇ ಬಡ್ಡಿ ಇಲ್ಲದೆ ಸ್ಟೌವ್ ಮತ್ತು ಸಿಲಿಂಡರ್ ಗಳಿಗಾಗಿ ಸಾಲ ತೆಗೆದುಕೊಳ್ಳಬಹುದಾಗಿತ್ತು.
ಉಜ್ವಲ 2.0 ಯೋಜನೆಯ ಅಡಿ ಕೇಂದ್ರ ಸರ್ಕಾರ ಈ ಆರ್ಥಿಕ ವರ್ಷದಲ್ಲಿ ಸುಮಾರು ಒಂದು ಕೋಟಿ ಗ್ಯಾಸ್ ಸಂಪರ್ಕ ಬಡವರಿಗೆ ಉಚಿತವಾಗಿ ಕಲ್ಪಿಸುವ ಗುರಿ ಹೊಂದಿದೆ.
ಸುಮಾರು ಐದು ವರ್ಷಗಳ ಹಿಂದೆ ಉತ್ತರ ಪ್ರದೇಶ ಚುನಾವಣೆಗಳಿಗೂ ಮುನ್ನ ಪ್ರಧಾನಿ ಮೋದಿ ಮೇ 1, 2016ರಲ್ಲಿ ರಾಜ್ಯದ ಬಲಿಯಾ ಜಿಲ್ಲೆಯ ಮೂಲಕ ಈ ಯೋಜನೆಯ ಮೊದಲ ಆವೃತ್ತಿಗೆ ಚಾಲನೆ ನೀಡಿದ್ದರು.
ಇನ್ನು ಉಜ್ವಲ 2. 0 ಬಗ್ಗೆ ಮಾಹಿತಿ ನಿಡಿದ ಅಧಿಕಾರಿಯೊಬ್ಬರು, ರೂ. 800 ಕ್ಕಿಂತ ಅಧಿಕ ಬೆಲೆಯ ಸಿಲಿಂಡರ್ ಹಾಗೂ ಒಂದು ಗ್ಯಾಸ್ ಸ್ಟೋವ್ ಉಚಿತವಾಗಿ ಸಿಗುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಬಿಗಿ ಉಡುಪು ಧರಿಸಿದ್ದಾರೆಂಬ ಕಾರಣಕ್ಕೆ ಯುವತಿಯನ್ನು ಗುಂಡಿಕ್ಕಿ ಕೊಂದ ತಾಲಿಬಾನ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA