ಅರಬ್ ದೇಶಗಳಲ್ಲಿ ನಿರುದ್ಯೋಗ ಸಮಸ್ಯೆ, ಆರ್ಥಿಕ ಕುಸಿತದ ಹೊಡೆತದಿಂದ ಅಶಾಂತಿ; ಐಎಂಎಫ್
Team Udayavani, Oct 28, 2019, 3:10 PM IST
ದುಬೈ: ನಿರುದ್ಯೋಗ ಮತ್ತು ಆರ್ಥಿಕ ಬೆಳವಣಿಗೆ ಕುಂಠಿತಗೊಂಡ ಪರಿಣಾಮ ಹಲವು ಅರಬ್ ದೇಶಗಳಲ್ಲಿ ಸಾಮಾಜಿಕ ಉದ್ವಿಗ್ನ ಪರಿಸ್ಥಿತಿ ಹಾಗೂ ಭಾರೀ ಪ್ರತಿಭಟನೆಗೆ ಕಾರಣವಾಗುತ್ತಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಸೋಮವಾರ ತಿಳಿಸಿದೆ.
ಈ ಅಶಾಂತಿಯಿಂದ ಮಧ್ಯ ಪ್ರಾಚ್ಯ ಮತ್ತು ಉತ್ತರ ಆಫ್ರಿಕಾ(ಎಂಇಎನ್ ಎ) ಪ್ರದೇಶಗಳಲ್ಲಿ ಆರ್ಥಿಕ ಬೆಳವಣಿಗೆಗೆ ಹೊಡೆತ ಬೀಳಲಿದ್ದು, ಇದರೊಂದಿಗೆ ಜಾಗತಿಕ ವ್ಯಾಪಾರ ಬಿಕ್ಕಟ್ಟು, ತೈಲ ಬೆಲೆ ಏರುಪೇರು, ಬ್ರೆಕ್ಸಿಟ್ ಪ್ರಕ್ರಿಯೆ ದೊಡ್ಡ ಪರಿಣಾಮ ಬೀರುತ್ತಿದೆ ಎಂದು ಐಎಂಎಫ್ ಬಿಡುಗಡೆ ಮಾಡಿರುವ ವರದಿಯಲ್ಲಿ ವಿವರಿಸಿದೆ.
ಬೃಹತ್ ಆರ್ಥಿಕ ಅಭಿವೃದ್ಧಿ ಹೊಂದಿದ್ದ ಸೌದಿ ಅರೇಬಿಯಾ, ಇರಾನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಭಾರೀ ಆರ್ಥಿಕ ಬೆಳವಣಿಗೆ ಕುಸಿತ ಕಾಣುತ್ತಿರುವುದಾಗಿ ಐಎಂಎಫ್ ತಿಳಿಸಿದೆ. ಜಾಗತಿಕ ಅವಲಂಬನೆಯ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ವರದಿ ಹೇಳಿದೆ. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಅಗತ್ಯವಿರುದಕ್ಕಿಂತ ಕಡಿಮೆ ಪ್ರಮಾಣದಲ್ಲಿ ಈ ದೇಶಗಳ ಆರ್ಥಿಕ ಬೆಳವಣಿಗೆ ಕುಸಿತ ಕಂಡಿರುವುದಾಗಿ ವಿವರಿಸಿದೆ.
ಈ ದೇಶಗಳಲ್ಲಿನ ಯುವ ನಿರುದ್ಯೋಗ ಸಮಸ್ಯೆ ಶೇ.25ರಿಂದ ಶೇ.30ರಷ್ಟು ಕುಸಿತ ಕಂಡಿದೆ. ಈ ನಿರುದ್ಯೋಗ ಸಮಸ್ಯೆ ಸರಿದೂಗಿಸಲು ಆರ್ಥಿಕ ಬೆಳವಣಿಗೆ ಶೇ.1-2ರಷ್ಟು ಹೆಚ್ಚಾಗಬೇಕಾಗಿದೆ ಎಂದು ಐಎಂಎಫ್ ನ ಮಧ್ಯಪ್ರಾಚ್ಯ ಮತ್ತು ಮಧ್ಯಏಷ್ಯಾದ ನಿರ್ದೇಶಕ ಜಿಹಾಡ್ ಅಝೌರ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
ಅರಬ್ ದೇಶಗಳಲ್ಲಿನ ನಿರುದ್ಯೋಗ ಸಮಸ್ಯೆ ಹೆಚ್ಚಳದಿಂದಾಗಿ ತೀವ್ರ ಸಾಮಾಜಿಕ ಬಿಕ್ಕಟ್ಟಿಗೆ ಕಾರಣವಾಗುತ್ತಿದೆ ಎಂದು ಐಎಂಎಫ್ ವರದಿ ಹೇಳಿದೆ. ಈ ದೇಶಗಳಲ್ಲಿನ ನಿರುದ್ಯೋಗ ಪ್ರಮಾಣ ಶೇ.11ರಷ್ಟಿದೆ. ಇದರಲ್ಲಿ ಮಹಿಳೆಯರು ಮತ್ತು ಯುವ ಪೀಳಿಕೆ ಕೆಲಸದಿಂದ ಹೊರಗೆ ಉಳಿದಿದ್ದಾರೆ. ಶೇ.18ರಷ್ಟು ಮಹಿಳೆಯರು ಉದ್ಯೋಗರಹಿತರಾಗಿದ್ದಾರೆ ಎಂದು ವರದಿ ತಿಳಿಸಿದೆ.
2010ರಿಂದ ಅರಬ್ ದೇಶಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಆರಂಭಗೊಂಡಿವೆ. ಸಿರಿಯಾ, ಯೆಮೆನ್ ಮತ್ತು ಲಿಬಿಯಾ ದೇಶಗಳಲ್ಲಿ ಈ ಪ್ರತಿಭಟನೆ ರಕ್ತದೋಕುಳಿ ಹರಿಸಿದೆ ಎಂದು ಹೇಳಿದೆ. ಇನ್ನುಳಿದಂತೆ ಅಲ್ಜೀರಿಯಾ, ಸೂಡಾನ್, ಇರಾಕ್, ಲೆಬನಾನ್ ಗಳಲ್ಲಿ ಪ್ರತಿಭಟನೆಯ ಕಾವು ಹೊಸ ಅಲೆಯನ್ನ ಎಬ್ಬಿಸುತ್ತಿದ್ದು, ಆರ್ಥಿಕ ಸುಧಾರಣೆ ಮತ್ತು ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವ ಒತ್ತಡ ಹೆಚ್ಚಾಗಿದೆ ಎಂದು ವರದಿ ವಿವರಿಸಿದೆ.
ಕಳೆದ ಕೆಲವು ವರ್ಷಗಳಿಂದ ಆರ್ಥಿಕ ಬೆಳವಣಿಗೆ ತೀವ್ರ ಕುಸಿತ ಕಾಣುತ್ತಿದ್ದು, ರಾಜಕೀಯ ವ್ಯವಸ್ಥೆಯ ಬದಲಾವಣೆಗೆ ಆಗ್ರಹಿಸಿ ಲೆಬನಾನ್ ನಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ ಎಂದು ಅಝೌರ್ ತಿಳಿಸಿದ್ದಾರೆ.
ಅರಬ್ ದೇಶಗಳಲ್ಲಿ ಜಿಡಿಪಿ(ಒಟ್ಟು ದೇಶಿಯ ಉತ್ಪಾದನೆ) ಶೇ.85ರಷ್ಟು ಕುಸಿತ ಕಂಡಿದೆ. ಅರಬ್ ದೇಶಗಳ ಸಾಲ ಹೊರೆಯು ಮಿತಿಮೀರಿದೆ ಎಂದು ಐಎಂಎಫ್ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ